AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಂಕೇತಗಳು ಕಾಣಿಸಿಕೊಳ್ಳುತ್ತಿವೆಯೇ? ನಿಮಗೆ ಹೆಚ್ಚಿನ ನಿದ್ರೆಯ ಅಗತ್ಯವಿರಬಹುದು

ನಿದ್ರೆಗೂ ಹಾಗೂ ಆರೋಗ್ಯಕ್ಕೂ ನಿಕಟ ಸಂಬಂಧವಿದೆ, ಸುಂದರ ತ್ವಚೆ ಮತ್ತು ಉತ್ತಮ ಆರೋಗ್ಯಕ್ಕೆ ನಿದ್ರೆ ಬಹಳ ಮುಖ್ಯ. ಆದರೆ ಪ್ರಸ್ತುತ ಜನರು ನಿದ್ರೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಈ ಸಂಕೇತಗಳು ಕಾಣಿಸಿಕೊಳ್ಳುತ್ತಿವೆಯೇ?  ನಿಮಗೆ ಹೆಚ್ಚಿನ ನಿದ್ರೆಯ ಅಗತ್ಯವಿರಬಹುದು
Sleep
TV9 Web
| Edited By: |

Updated on: Aug 02, 2022 | 3:14 PM

Share

ನಿದ್ರೆಗೂ ಹಾಗೂ ಆರೋಗ್ಯಕ್ಕೂ ನಿಕಟ ಸಂಬಂಧವಿದೆ, ಸುಂದರ ತ್ವಚೆ ಮತ್ತು ಉತ್ತಮ ಆರೋಗ್ಯಕ್ಕೆ ನಿದ್ರೆ ಬಹಳ ಮುಖ್ಯ. ಆದರೆ ಪ್ರಸ್ತುತ ಜನರು ನಿದ್ರೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವರಿಗೆ ರಾತ್ರಿ ನಿದ್ರೆ ಬರುವುದಿಲ್ಲ ಅಥವಾ ಕೆಲವರಿಗೆ ನಿದ್ರೆ ಬರುತ್ತೆ ಆದರೆ ಪದೇ ಪದೇ ಎಚ್ಚರವಾಗುತ್ತದೆ.

ಸಾಕಷ್ಟು ನಿದ್ರೆ ಮಾಡದಿದ್ದರೆ ಇಡೀ ದಿನ ಆಯಾಸವನ್ನು ಎದುರಿಸಬೇಕಾಗುತ್ತದೆ. ದೇಹವು ಸಾಕಷ್ಟು ನಿದ್ರೆ ಪಡೆಯದಿದ್ದಾಗ, ಅದು ತನ್ನದೇ ಆದ ಸಂಕೇತಗಳನ್ನು ನೀಡಲು ಪ್ರಾರಂಭಿಸುತ್ತದೆ. ಬಹುಶಃ ನೀವು ಬೆಳಿಗ್ಗೆ ಎದ್ದೇಳುವಾಗ ತೊಂದರೆ ಅನುಭವಿಸಬಹುದು. ನೀವು ಅನಾರೋಗ್ಯಕ್ಕೆ ಒಳಗಾಗಬಹುದು. ನೀವು ಸಾಕಷ್ಟು ನಿದ್ರೆ ಮಾಡುತ್ತಿದ್ದರೆ ಬೆಳಗ್ಗೆ ಅಲಾರಾಂ ಆಗುವ ಮುನ್ನವೇ ನೀವು ಎಚ್ಚೆರಗೊಳ್ಳುತ್ತೀರಿ.

ವಾಹನ ಚಾಲನೆ ಮಾಡುವಾಗ ಕಣ್ಣು ಉರಿಯುವುದು:  ವಾಹನ ಚಾಲನೆ ಮಾಡುವಾಗ ಕಣ್ಣುರಿ, ಕಣ್ಣು ನೋವು ಉಂಟಾದರೆ ಚಾಲನೆಯನ್ನು ಬಿಟ್ಟು ವಾಹನವನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಸ್ವಲ್ಪ ಹೊತ್ತು ನಿದ್ರೆ ಮಾಡಿ ಮುಂದೆ ಹೋಗಿ.

ದಿನವಿಡೀ ಕಾಫಿ ಕುಡಿಯುವುದು: ನೀವು ಸಾಕಷ್ಟು ನಿದ್ರೆ ಮಾಡದಿದ್ದರೆ, ಅದು ವ್ಯಕ್ತಿಯನ್ನು ತುಂಬಾ ಆಯಾಸಗೊಳಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ತನ್ನನ್ನು ತಾನು ಹೆಚ್ಚು ಎಚ್ಚರವಾಗಿರಿಸಿಕೊಳ್ಳಲು ಕೆಫೀನ್ (ಕೆಫೀನ್ ಹಾನಿ) ಮೇಲೆ ಅವಲಂಬಿತನಾಗುತ್ತಾನೆ. ನಿಮ್ಮ ದಿನವನ್ನು ಪ್ರಾರಂಭಿಸಲು ಒಂದು ಕಪ್ ಕಾಫಿ ಉತ್ತಮವಾಗಿದೆ, ಆದರೆ ನೀವು ಎಚ್ಚರವಾಗಿರಲು ದಿನವಿಡೀ ಕೆಫೀನ್ ಅನ್ನು ಸೇವಿಸುತ್ತೀರಿ ಮತ್ತೆ ರಾತ್ರಿ ನಿದ್ರಾಹೀನತೆ ಸಮಸ್ಯೆ ಎದುರಿಸುತ್ತೀರಿ.

ಆಗಾಗ ಅನಾರೋಗ್ಯಕ್ಕೆ ಒಳಗಾಗುವುದು ನಿದ್ರೆಯ ಕೊರತೆಯು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ . ನೀವು ದೀರ್ಘಕಾಲದವರೆಗೆ ಸಾಕಷ್ಟು ನಿದ್ರೆ ಮಾಡದಿದ್ದರೆ, ನಿಮ್ಮ ರೋಗನಿರೋಧಕ ಶಕ್ತಿ ಸಂಪೂರ್ಣವಾಗಿ ಬಲಗೊಳ್ಳುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ದೇಹವು ರೋಗದ ವಿರುದ್ಧ ಹೋರಾಡಲು ಕಷ್ಟವಾಗಬಹುದು ಮತ್ತು ನೀವು ಮತ್ತೆ ಮತ್ತೆ ಅನಾರೋಗ್ಯಕ್ಕೆ ಒಳಗಾಗಬಹುದು.

ಅತಿಯಾದ ಕೋಪ: ದಣಿದಿರುವುದು ನಿಮ್ಮ ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಸಾಕಷ್ಟು ನಿದ್ರೆ ಪಡೆಯದಿದ್ದರೆ ನೀವು ಹೆಚ್ಚು ಖಿನ್ನತೆ, ಆತಂಕ ಅಥವಾ ಹತಾಶತೆಯನ್ನು ಅನುಭವಿಸಬಹುದು. ಅಂತಹ ಸ್ವಭಾವದಿಂದ ಕಿರಿಕಿರಿ ಉಂಟಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ