AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಿದ್ದು, ನಿನ್ನೆಯಿಂದಲೇ ಪ್ರಾಣಪ್ರತಿಷ್ಠೆಯ ಮುಂಚಿತವಾಗಿ ನಡೆಯಬೇಕಾದ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದೆ. ಈ ನಡುವೆ ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿಯು ಹಬ್ಬದ ವಾತಾವರಣವು ಸೃಷ್ಟಿಯಾಗಿದ್ದು, ಜನವರಿ 22ರಂದು ಮನೆಯಲ್ಲಿ ಸಿಹಿ ತಿಂಡಿಗಳನ್ನು ಮಾಡಿ ಸವಿಯದೇ ಇದ್ದರೆ ಹೇಗೆ ಅಲ್ಲವೇ. ಮನೆಯಲ್ಲಿ ಗೋಧಿ ಹಿಟ್ಟು ಇದ್ದರೆ, ಹಲ್ವಾ ಮಾಡಿ ಮನೆಯ ಸದಸ್ಯರು ಸವಿಯಬಹುದಾಗಿದೆ. ಹಾಗಾದ್ರೆ ಈ ಸಿಂಪಲ್ ರೆಸಿಪಿ ಮಾಡುವುದು ಹೇಗೆ? ಇಲ್ಲಿದೆ ನೋಡಿ.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 17, 2024 | 4:34 PM

Share

ಗೋಧಿ ಹಿಟ್ಟು ಎಂದ ತಕ್ಷಣ ಮೊದಲು ನೆನಪಾಗುವುದು ಚಪಾತಿ. ಆದರೆ ಈ ಗೋಧಿ ಹಿಟ್ಟಿನಿಂದ ವೈರಂಟಿ ವೈರಂಟಿ ಸಿಹಿ ತಿಂಡಿಗಳನ್ನು ಮಾಡಿ ಸವಿಸುವುದಕ್ಕೆ ಇದೊಂದು ಒಳ್ಳೆಯ ಸಮಯ. ಸುಲಭವಾಗಿ ಮಾಡಬಹುದಾದ ಸಿಹಿ ತಿಂಡಿಗಳಲ್ಲಿ ಈ ಗೋಧಿ ಹಿಟ್ಟಿನ ಹಲ್ವಾ ಅಥವಾ ಗುರ್ ಕಾ ಹಲ್ವಾ ಕೂಡ ಒಂದು. ಶ್ರೀರಾಮಮಂದಿರದ ಉದ್ಘಾಟನೆಯ ದಿನದಂದು ಮನೆಯಲ್ಲಿ ಸಿಹಿತಿಂಡಿಗಳನ್ನು ಮಾಡಬೇಕೆಂದುಕೊಂಡವರು ಸಿಂಪಲ್ ರೆಸಿಪಿಯಾಗಿರುವ ಗೋಧಿಹಿಟ್ಟಿನಿಂದ ಹಲ್ವಾ ಮಾಡಿ ಸವಿಯಬಹುದು.

ಬೇಕಾಗುವ ಸಾಮಗ್ರಿಗಳು:

ಸಕ್ಕರೆ- 1 ಕಪ್, ಗೋಧಿ ಹಿಟ್ಟು- 2ಕಪ್, ತುಪ್ಪ- ಅರ್ಧ ಕಪ್ ಹಾಗೂ ಸ್ವಲ್ಪ ದ್ರಾಕ್ಷಿ, ಗೋಡಂಬಿ.

ಗೋಧಿ ಹಿಟ್ಟಿನ ಹಲ್ವಾ ಮಾಡುವ ವಿಧಾನ:

* ಒಂದು ಪಾತ್ರೆಯಲ್ಲಿ ಸಕ್ಕರೆ, ಅಳತೆಗೆ ತಕ್ಕಂತೆ ನೀರು ಹಾಕಿ ಕುದಿಸಿಕೊಂಡು ಸಕ್ಕರೆಯ ಮಿಶ್ರಣ ಮಾಡಿಕೊಳ್ಳಿ.

* ಬಾಣಲೆಗೆ ಸ್ವಲ್ಪ ಪ್ರಮಾಣದಲ್ಲಿ ತುಪ್ಪ, ಗೋಧಿ ಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗಾಗಲೇ ಸಿದ್ಧವಿರುವ ಸಕ್ಕರೆ ನೀರಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಯಾಕೆ ಕುಡಿಯಬೇಕು?; ತಜ್ಞರ ಸಲಹೆ ಇಲ್ಲಿದೆ

* ಗೋಧಿ ಹಿಟ್ಟಿನ ಈ ಮಿಶ್ರಣಕ್ಕೆ ಆಗಾಗ ತುಪ್ಪ ಹಾಕುತ್ತಾ ಕೈಯಾಡಿಸುತ್ತ ಇರಿ. ತಳ ಬಿಡುವವರೆಗೂ ಚೆನ್ನಾಗಿ ಬೇಯಿಸಿಕೊಳ್ಳಿ.

* ಕೊನೆಗೆ ತುಪ್ಪ ಸವರಿದ ಬಟ್ಟಲಿಗೆ ಮಿಶ್ರಣವನ್ನು ಹಾಕಿದರೆ, ಗೋಧಿ ಹಿಟ್ಟಿನ ಹಲ್ವಾ ಸವಿಯಲು ಸಿದ್ಧವಾದಂತೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ