AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸೂಪರ್​ ಫುಡ್​​ಗಳು ​​ ಇಲ್ಲಿವೆ

ನೆಗಡಿ, ಕೆಮ್ಮು, ಜ್ವರ ನಿಮ್ಮನ್ನು ಬಿಟ್ಟು ಬಿಡದೆ ಕಾಡುತ್ತಿದೆಯೇ? ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳು ಮತ್ತು ಪಾನೀಯಗಳ ಪಟ್ಟಿ ಇಲ್ಲಿದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸೂಪರ್​ ಫುಡ್​​ಗಳು ​​ ಇಲ್ಲಿವೆ
ರೋಗನಿರೋಧಕ ಶಕ್ತಿImage Credit source: Physicians for Women
ಅಕ್ಷತಾ ವರ್ಕಾಡಿ
|

Updated on:Mar 17, 2023 | 5:06 PM

Share

ರೋಗನಿರೋಧಕ ಶಕ್ತಿಯು ದೇಹದಲ್ಲಿ ಕಡಿಮೆಯಾದಾಗ ಜ್ವರ, ಕೆಮ್ಮು ಇತ್ಯಾದಿ ರೋಗ ರುಜಿನಗಳು ನಮ್ಮ ದೇಹಕ್ಕೆ ಬೇಗ ಅಂಟಿಕೊಳ್ಳುತ್ತವೆ. ಬಲವಾದ ರೋಗನಿರೋಧಕ ಶಕ್ತಿ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯು ನಿಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಭಾರತದಲ್ಲಿ H3N2 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹಾಗೂ ರೋಗನಿರೋಧಕ ಶಕ್ತಿಯನ್ನು ಉತ್ತಮ ಸ್ಥಿತಿಯಲ್ಲಿಡುವುದು ಮುಖ್ಯವಾಗಿರುತ್ತದೆ. ಆರೋಗ್ಯಕರ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಸರಿಯಾದ ನಿದ್ರೆ, ದೂಮಪಾನ ಮತ್ತು ಮದ್ಯಪಾನ ತ್ಯಜಿಸುವುದು, ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳುವ ಮೂಲಕ ಸ್ವಾಭಾವಿಕವಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇನ್ನೂ ಕೆಲವು ಆಹಾರಗಳನ್ನು ಸೇವನೆ ಮಾಡುವ ಮೂಲಕ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದಾಗಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳು:

ಸಿಟ್ರಿಸ್ ಆಹಾರಗಳು:

ನಿಂಬೆಹಣ್ಣು, ಕಿತ್ತಳೆ, ದ್ರಾಕ್ಷಿಹಣ್ಣು ಮತ್ತು ಇತರ ಹಣ್ಣುಗಳು ಸಿಟ್ರಿಕ್ ಆಹಾರಗಳಾಗಿವೆ. ಇವುಗಳನ್ನು ಸೇವಿಸುವ ಮೂಲಕ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಬಾದಾಮಿ:

ಬಾದಾಮಿಯು ಪೋಷಕಾಂಶಗಳ ಮೂಲವಾಗಿದೆ. ಬಾದಾಮಿಯು ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅದರ ಜೊತೆಗೆ ಇದು ನಿಮ್ಮ ರೋಗನಿರೋಧಕ ವ್ಯವಸ್ಥೆಗೂ ಒಳ್ಳೆಯದು. ಬಾದಾಮಿಯು ವಿಟಮಿನ್ ಇ, ಸತು, ಮೆಗ್ನೇಸಿಯಂ ಮತ್ತು ಪ್ರೋಟೀನ್‌ಗಳಂತಹ ಅಗತ್ಯ ಪೋಷಕಾಂಶಗಳ ಮೂಲವಾಗಿದೆ.

ಇದನ್ನೂ ಓದಿ: ಕತ್ತಿನ ಸುತ್ತಲಿನ ಕಪ್ಪು ಕಲೆಗೆ ತಜ್ಞರು ನೀಡಿರುವ ಮನೆಮದ್ದು ಇಲ್ಲಿದೆ

ಅರಶಿನ:

ಅರಶಿನವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅರಶಿನದಲ್ಲಿನ ಕರ್ಕ್ಯುಮಿನ್ ಅಂಶವು ದೇಹದ ರೋಗನಿರೋಧಕ ಕಾರ್ಯವನ್ನು ಬೆಂಬಲಿಸುತ್ತದೆ.

ಗ್ರೀನ್ ಟೀ:

ಗ್ರೀನ್ ಟೀಯು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಇದರಲ್ಲಿರುವ ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಅಂಶವು ದೇಹದಲ್ಲಿ ರೋಗನಿರೋಧಕ ಅಂಶವನ್ನು ಹೆಚ್ಚಿಸಲು ಸಹಾಯಕವಾಗಿದೆ.

ಮಜ್ಜಿಗೆ:

ಮಜ್ಜಿಗೆಯು ಕ್ಯಾಲ್ಸಿಯಂನಿಂದ ತುಂಬಿದ ದೇಸಿ ಪಾನೀಯವಾಗಿದೆ. ಮಜ್ಜಿಗೆಯಲ್ಲಿರುವ ಲ್ಯಾಕ್ಟಿಕ್ ಆಮ್ಲವು ದೇಹದ ರೋಗನಿರೋಧಕ ವ್ಯವಸ್ಥೆಯು ಸರಾಗವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಇದರ ಜೊತೆಗೆ ಬೆಳ್ಳುಳ್ಳಿ, ಶುಂಠಿ, ಕಿವಿ ಹಣ್ಣು, ಪಪ್ಪಾಯ, ಕೇಸುಗಡ್ಡೆ, ಪಾಲಕ್, ಡ್ರೈ ಫ್ರೂಟ್ಸ್ ಮತ್ತು ನಟ್ಸ್ ಇವೆಲ್ಲವೂ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಾಗಿವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ಧಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:04 pm, Fri, 17 March 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್