AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪೂರ್ಣ ನಿದ್ರೆಯು ನಿಮ್ಮ ಮೂಡ್​ಅನ್ನು ಮಾತ್ರ ಹಾಳು ಮಾಡಲ್ಲ, ಮಾನಸಿಕ ಆರೋಗ್ಯವನ್ನೂ ಹದಗೆಡಿಸುತ್ತೆ

ಅಪೂರ್ಣ ನಿದ್ರೆಯು ನಿಮ್ಮ ಮೂಡನ್ನು ಹಾಳುಮಾಡುವುದು ಮಾತ್ರವಲ್ಲ, ಮಾನಸಿಕ ಆರೋಗ್ಯವನ್ನು ಕೂಡ ಹದಗೆಡಿಸುತ್ತದೆ.

ಅಪೂರ್ಣ ನಿದ್ರೆಯು ನಿಮ್ಮ ಮೂಡ್​ಅನ್ನು ಮಾತ್ರ ಹಾಳು ಮಾಡಲ್ಲ, ಮಾನಸಿಕ ಆರೋಗ್ಯವನ್ನೂ ಹದಗೆಡಿಸುತ್ತೆ
ನಿದ್ರೆ
ನಯನಾ ರಾಜೀವ್
|

Updated on: Jul 08, 2023 | 9:00 AM

Share

ಅಪೂರ್ಣ ನಿದ್ರೆಯು ನಿಮ್ಮ ಮೂಡನ್ನು ಹಾಳುಮಾಡುವುದು ಮಾತ್ರವಲ್ಲ, ಮಾನಸಿಕ ಆರೋಗ್ಯವನ್ನು ಕೂಡ ಹದಗೆಡಿಸುತ್ತದೆ. ನೀವು ಮಲಗಿದ ಬಳಿಕ ಪದೇ ಪದೇ ಎಚ್ಚರವಾಗುವುದು ಅಥವಾ ರಾತ್ರಿ ಎಷ್ಟೊತ್ತಾದರೂ ನಿದ್ರೆ ಬಾರದಿರುವುದು ಮರುದಿನ ಇಡೀ ನಿಮ್ಮ ನೆಮ್ಮದಿಯನ್ನು ಹಾಳು ಮಾಡುತ್ತದೆ, ಯಾವುದೇ ಕೆಲಸ ಮಾಡಲು ಮನಸ್ಸು ಬರುವುದಿಲ್ಲ, ಕಣ್ಣು ಉರಿಯುತ್ತಿರುತ್ತೆ, ನಿಶ್ಯಕ್ತಿ ಭಾವ. ನಿದ್ರಾಹೀನತೆಯು ದೀರ್ಘಕಾಲದ ನಿದ್ರಾಹೀನತೆಯು ಹೃದ್ರೋಗ ಮತ್ತು ಮಧುಮೇಹದಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ನಿದ್ರೆ ಕೂಡ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ.

ಮೂಡ್ ಮತ್ತು ನಿದ್ರೆಗೆ ಏನು ಸಂಬಂಧ ಸಾಮಾನ್ಯವಾಗಿ ನಾವು ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಮಾಡದಿದ್ದರೆ, ಬೆಳಗ್ಗೆ ನಮಗೆ ಚೆನ್ನಾಗಿರುವುದಿಲ್ಲ. ಇದು ಕೋಪ, ಕಿರಿಕಿರಿ, ಏಕಾಗ್ರತೆಗೆ ತೊಂದರೆ ಉಂಟುಮಾಡುತ್ತದೆ. ಚೈತನ್ಯವನ್ನು ಅನುಭವಿಸುವ ಬದಲು, ನಾವು ದಣಿದಂಥಾ ಅನುಭವವಾಗುವುದು. ಕ್ಯೂರಿಯಸ್ ಜರ್ನಲ್ ಆಫ್ ಸ್ಲೀಪ್ ಹೆಲ್ತ್ ಪ್ರಕಾರ, ನಿದ್ರೆ ಮತ್ತು ಮನಸ್ಥಿತಿಗೆ ಸಂಬಂಧವಿದೆ. ರಾತ್ರಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮರುದಿನ ನಾವು ಬೇರೊಬ್ಬರ ಮೇಲೆ ರೇಗಾಡಬಹುದು, ಕೋಪ ತೋರಿಸಬಹುದು. ಕೆಟ್ಟ ಮನಸ್ಥಿತಿಯು ಆತಂಕ, ಒತ್ತಡ, ಖಿನ್ನತೆಯ ಭಾವನೆಗಳನ್ನು ಉಂಟುಮಾಡಬಹುದು. ಮತ್ತೊಂದೆಡೆ, ನಾವು ಕೆಟ್ಟ ಮನಸ್ಥಿತಿಯೊಂದಿಗೆ ಅಥವಾ ಯಾವುದೇ ರೀತಿಯ ಒತ್ತಡವು, ನಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ.

ಮತ್ತಷ್ಟು ಓದಿ:Sleep Cycle: ನಿದ್ರೆಯ ಚಕ್ರ ಎಂದರೇನು? ಆಳವಾದ ನಿದ್ರೆ ಯಾವಾಗ ಮತ್ತು ಲಘು ನಿದ್ರೆ ಯಾವಾಗ ಬರುತ್ತೆ ತಿಳಿಯಿರಿ

ಮಾನಸಿಕ ಅಸ್ವಸ್ಥತೆ ಹೆಚ್ಚಾಗುತ್ತದೆ ದೀರ್ಘಾವಧಿಯ ನಿದ್ರಾಹೀನತೆಯು ಹೃದ್ರೋಗ ಮತ್ತು ಮಧುಮೇಹದಂತಹ ದೀರ್ಘಕಾಲದ ಆರೋಗ್ಯ ಪರಿಸ್ಥಿತಿಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದು ಮನಸ್ಥಿತಿ ಮೇಲೆ ಭಾರಿ ಪರಿಣಾಮ ಬೀರಬಹುದು. ನಿದ್ರಾಹೀನತೆ ಮತ್ತು ಮಾನಸಿಕ ಆರೋಗ್ಯ ಅಸ್ವಸ್ಥತೆಗಳು ನಿಕಟ ಸಂಬಂಧ ಹೊಂದಿವೆ. ಇದು ಎರಡೂ ರೀತಿಯಲ್ಲಿ ಕೆಲಸ ಮಾಡಬಹುದು. ಒಂದೇ ದಿನಚರಿಯನ್ನು ಅನುಸರಿಸಿ : ಪ್ರತಿ ರಾತ್ರಿ ಒಂದೇ ಸಮಯದಲ್ಲಿ ಮಲಗಿ, ವಾರಾಂತ್ಯದಲ್ಲೂ ಈ ಅಭ್ಯಾಸವನ್ನು ಬದಲಾಯಿಸಬೇಡಿ. ಪ್ರತಿದಿನ ಬೆಳಗ್ಗೆ ಒಂದೇ ಸಮಯಕ್ಕೆ ಏಳುವುದನ್ನು ರೂಢಿಸಿಕೊಳ್ಳಿ . ಇದು ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ.

ಆರಾಮದಾಯಕ ಪರಿಸರ ಮಲಗುವ ಕೋಣೆ ಶಾಂತ, ಕತ್ತಲೆ, ಆರಾಮದಾಯಕವಾಗಿರಬೇಕು. ಮಲಗುವ ಸ್ಥಳದ ತಾಪಮಾನವು ಆರಾಮದಾಯಕವಾಗಿರಬೇಕು. ಅತಿ ಬಿಸಿ ಅಥವಾ ತಣ್ಣನೆಯ ವಾತಾವರಣ ಇರಬಾರದು. ಮಲಗುವ ಸಮಯಕ್ಕೆ ಒಂದು ಗಂಟೆ ಮೊದಲು ಟಿವಿ, ಕಂಪ್ಯೂಟರ್ ಮತ್ತು ಸ್ಮಾರ್ಟ್ ಫೋನ್‌ನಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಬಳಸುವುದನ್ನು ತಪ್ಪಿಸಿ.

ರಾತ್ರಿ ಲಘು ಆಹಾರವಿರಲಿ ಮಲಗುವ ಮೊದಲು ಭಾರವಾದ ಆಹಾರವನ್ನು ಸೇವಿಸಬೇಡಿ. ಈ ಆಹಾರಗಳು ನಿದ್ರೆಯಲ್ಲಿ ಅಡಚಣೆಗಳನ್ನು ಉಂಟುಮಾಡುತ್ತವೆ.

ಯೋಗ ಮತ್ತು ಧ್ಯಾನ: ಮಲಗುವ ಮುನ್ನ ಅನುಲೋಮ-ವಿಲೋಮದಂತಹ ಉಸಿರಾಟದ ಯೋಗವನ್ನು ಮಾಡಿ. ಮಲಗುವ ಮುನ್ನ 10 ನಿಮಿಷಗಳ ಧ್ಯಾನವು ಉತ್ತಮ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಹಗಲಿನಲ್ಲಿ ದೈಹಿಕವಾಗಿ ಸಕ್ರಿಯವಾಗಿರುವುದು ರಾತ್ರಿಯಲ್ಲಿ ಹೆಚ್ಚು ಸುಲಭವಾಗಿ ನಿದ್ರಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!