AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force Day 2024 : ತ್ಯಾಗ ಹಾಗೂ ಶೌರ್ಯದ ಸಂಕೇತ ಭಾರತೀಯ ವಾಯುಪಡೆ

ವಿಶ್ವದ ಅತೀ ಬಲಿಷ್ಠ ವಾಯುಪಡೆಗಳಲ್ಲಿ ಭಾರತೀಯ ವಾಯುಪಡೆಯು ಕೂಡ ಒಂದಾಗಿದೆ. ಈ ವಾಯುದಳವು ಈಗಾಗಲೇ ಅನೇಕ ಯುದ್ಧಗಳಲ್ಲಿ ಮತ್ತು ರಕ್ಷಣ ಕಾರ್ಯಾಚರಣೆಗಳಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ. ಪ್ರತಿವರ್ಷ ಭಾರತೀಯ ವಾಯುಪಡೆಯ ದಿನವನ್ನು ಅಕ್ಟೋಬರ್ 8 ರಂದು ಆಚರಿಸಲಾಗುತ್ತದೆ. ಈ ಬಾರಿ ಭಾರತೀಯ ವಾಯುಪಡೆಯು ತನ್ನ 92ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹಾಗಾದ್ರೆ ಈ ದಿನದ ಅಸ್ತಿತ್ವಕ್ಕೆ ಬಂದದ್ದು ಹೇಗೆ? ಈ ದಿನದ ಮಹತ್ವವೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Indian Air Force Day 2024 : ತ್ಯಾಗ ಹಾಗೂ ಶೌರ್ಯದ ಸಂಕೇತ ಭಾರತೀಯ ವಾಯುಪಡೆ
ಭಾರತೀಯ ವಾಯುಪಡೆಯ ದಿನ
ಸಾಯಿನಂದಾ
| Edited By: |

Updated on: Oct 08, 2024 | 9:27 AM

Share

ಜಗತ್ತಿನ ನಾಲ್ಕನೇ ಬಲಿಷ್ಠ ಸೇನೆಯಾಗಿರುವ ಭಾರತೀಯ ವಾಯುಪಡೆ ಪ್ರಾರಂಭದಿಂದಲೂ ಅನೇಕ ಯುದ್ಧಗಳಲ್ಲಿ ಭಾಗಿಯಾಗಿದೆ. ಭಾರತವು ಸ್ವಾತಂತ್ರ್ಯ ಪಡೆದ ನಂತರದಲ್ಲಿ ಭಾರತೀಯ ವಾಯುಪಡೆಯು ಪ್ರಮುಖ ಐದು ಯುದ್ಧಗಳಲ್ಲಿ ಭಾಗಿಯಾಗಿದೆ. ಇವುಗಳಲ್ಲಿ ನಾಲ್ಕು ಯುದ್ಧಗಳು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿದ್ದರೆ ಒಂದು ಯುದ್ಧವು ಚೀನಾದ ನಡುವೆ ನಡೆದಿತ್ತು. ನಮ್ಮ ದೇಶದ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದಾಗಿ ಪ್ರತಿವರ್ಷ ಅಕ್ಟೋಬರ್ 8 ರಂದು ಭಾರತೀಯ ವಾಯುಪಡೆ ದಿನವನ್ನು ಆಚರಿಸಲಾಗುತ್ತದೆ.

ಭಾರತೀಯ ವಾಯುಪಡೆ ಅಸ್ತಿತ್ವಕ್ಕೆ ಬಂದದ್ದು ಹೇಗೆ?

ಭಾರತೀಯ ವಾಯುಪಡೆಯನ್ನು ಅಕ್ಟೋಬರ್ 08, 1932 ರಲ್ಲಿ ಬ್ರಿಟಿಷ್ ಸಾಮ್ರಾಜ್ಯದ ಸಹಾಯಕ ವಾಯುಪಡೆಯಾಗಿ ಸ್ಥಾಪಿಸಲಾಯಿತು. ಆ ಸಮಯದಲ್ಲಿ ಭಾರತೀಯ ವಾಯುಪಡೆಯನ್ನು ರಾಯಲ್ ಇಂಡಿಯನ್ ಏರ್ ಫೋರ್ಸ್ ಎಂದು ಕರೆಯಲಾಗುತ್ತಿತ್ತು. ಆದರೆ 1950 ರಲ್ಲಿ ಭಾರತದ ಗಣರಾಜ್ಯವಾದ ಬಳಿಕ ಭಾರತದ ವಾಯುಸೇನೆಯ ರಾಯಲ್ ಎಂಬ ಪದವನ್ನು ತೆಗೆದು ಹಾಕಿ ಇಂಡಿಯನ್ ಏರ್ ಫೋರ್ಸ್ ಎಂದು ಕರೆಯಲಾಯಿತು.

1933ರಲ್ಲಿ ಕೇವಲ ಆರು ಅಧಿಕಾರಿಗಳು ಮತ್ತು 19 ಯೋಧರೊಂದಿಗೆ ಪ್ರಾರಂಭವಾದ ಭಾರತೀಯ ವಾಯುಪಡೆಯು ಇಂದು ವಿಶ್ವದ ನಾಲ್ಕನೇ ಪ್ರಬಲ ವಾಯುಸೇನೆಯಾಗಿ ಬೆಳೆದು ನಿಂತಿದೆ ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. 1932 ರಲ್ಲಿ ಭಾರತೀಯ ವಾಯುಸೇನೆಯನ್ನು ಸ್ಥಾಪಿಸಿದ ನೆನಪಿಗಾಗಿ ಮತ್ತು ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶರಕ್ಷಣೆಯಲ್ಲಿ ತೊಡಗಿರುವ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದಾಗಿ ಪ್ರತಿವರ್ಷ ಅಕ್ಟೋಬರ್ 8 ರಂದು ಭಾರತೀಯ ವಾಯುಪಡೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲೂ ಹತ್ತಿ ಬೆಳೆಯುವ ಸಾಹಸಕ್ಕೆ ಕೈ ಹಾಕಿದ್ದ ಚೀನಾ, ಇಲ್ಲಿದೆ ಮಾಹಿತಿ

ಭಾರತೀಯ ವಾಯುಪಡೆ ದಿನದ ಮಹತ್ವ

ನಮ್ಮ ರಾಷ್ಟ್ರವನ್ನು ರಕ್ಷಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುವ ಭಾರತೀಯ ವಾಯುಸೇನೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಉದ್ದೇಶದಿಂದ ಈ ದಿನವು ಮಹತ್ವವನ್ನು ಪಡೆದುಕೊಂಡಿದೆ. ಈ ದಿನದಂದು ಭಾರತೀಯ ವಾಯುಪಡೆ ದಿನದ ಸ್ಮರಣಾರ್ಥವಾಗಿ ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಯೋಧರನ್ನು ಗೌರವಿಸಲಾಗುತ್ತದೆ. ಅದಲ್ಲದೇ, ನಮ್ಮ ದೇಶದ ಮಿಲಿಟರಿ ಶಕ್ತಿಯ ಪ್ರದರ್ಶನವನ್ನು ಮಾಡುವ ಮುಖೇನವಾಗಿ ನೆರೆಹೊರೆಯ ರಾಷ್ಟ್ರಗಳಿಗೆ ಭಾರತೀಯ ಸೇನೆಯ ಶಕ್ತಿಯನ್ನು ಪ್ರದರ್ಶಿಸಲಾಗುತ್ತದೆ.

ಭಾರತೀಯ ವಾಯುಪಡೆಯ ಗಾತ್ರ ಹಾಗೂ ಕರ್ತವ್ಯಗಳೇನು?

ಭಾರತೀಯ ವಾಯುಪಡೆಯಲ್ಲಿ 1,70 ಸಾವಿರಕ್ಕೂ ಹೆಚ್ಚು ಮಂದಿ ಸೇವೆ ಸಲ್ಲಿಸುತ್ತಿದ್ದು, 1,400 ಕ್ಕೂ ಹೆಚ್ಚು ವಿಮಾನಗಳಿವೆ. ಹೀಗಾಗಿ ವಿಶ್ವದ ನಾಲ್ಕನೇ ದೊಡ್ಡದಾದ ಹಾಗೂ ಬಲಿಷ್ಠ ವಾಯುದಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತೀಯ ವಾಯುಪಡೆಯು ದೇಶದ ವಾಯುಪ್ರದೇಶವನ್ನು ಸಂರಕ್ಷಿಸುವುದು, ಯುದ್ಧ, ಸಂಘರ್ಷಗಳು ನಡೆಯುವ ಸಂದರ್ಭದಲ್ಲಿ ವಾಯುದಾಳಿ ನಡೆಸುವ ಮೂಲಕ ದೇಶವನ್ನು ರಕ್ಷಿಸುವ ಕೆಲಸವನ್ನು ಮಾಡುತ್ತವೆ. ಅದಲ್ಲದೇ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ವೇಳೆಯಲ್ಲಿ ಜನರಲ್ಲಿ ನೆರವು ನೀಡುವ ಮೂಲಕ ಜನರನ್ನು ಆಪತ್ತಿನಿಂದ ರಕ್ಷಿಸುವ ಕೆಲಸವನ್ನು ಯೋಧರು ಮಾಡುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ