AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard Day 2024: ದೇಶದ ಕಡಲ ಗಡಿಗಳನ್ನು ಸುರಕ್ಷಿತವಾಗಿರಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗಳ ಪಾತ್ರ ಅಗಾಧ

ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಸಂಪರ್ಕ ಸಾಧಿಸಲು ಇರುವ ಕೊಂಡಿಯಲ್ಲಿ ಸಮುದ್ರಮಾರ್ಗ ಒಂದು. ಶತ್ರು ರಾಜ್ಯಗಳು ಈ ಸಮುದ್ರ ಮಾರ್ಗಗಳ ಮೂಲಕವೂ ದೇಶದ ಮೇಲೆ ದಾಳಿ ಮಾಡುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಸಮುದ್ರ ತೀರದಲ್ಲಿ ಭದ್ರತೆ ನೀಡಿ ದೇಶದ ರಕ್ಷಣೆ ಮಾಡುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗಳ ಕಾರ್ಯವೂ ಅಗಾಧವಾಗಿದೆ. ಪ್ರತಿ ವರ್ಷ ಫೆಬ್ರವರಿ 1 ರಂದು ಭಾರತೀಯ ಕರಾವಳಿ ಕಾವಲು ಪಡೆಯ ದಿನವನ್ನು ಆಚರಿಸಲಾಗುತ್ತದೆ.

Indian Coast Guard Day 2024: ದೇಶದ ಕಡಲ ಗಡಿಗಳನ್ನು ಸುರಕ್ಷಿತವಾಗಿರಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗಳ ಪಾತ್ರ ಅಗಾಧ
ಸಾಯಿನಂದಾ
| Edited By: |

Updated on: Jan 31, 2024 | 12:52 PM

Share

ವಿಶ್ವದ ನಾಲ್ಕನೇ ಅತಿದೊಡ್ಡ ಕರಾವಳಿ ಕಾವಲು ಪಡೆ ಎನಿಸಿಕೊಂಡಿರುವ ಭಾರತೀಯ ಕಾವಲು ಪಡೆಯು, ಭಾರತದ ಕರಾವಳಿ ಮತ್ತು ಕಡಲ ವಲಯಗಳನ್ನು ಸುರಕ್ಷಿತವಾಗಿರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೀಗಾಗಿ ಸಮುದ್ರ ವಲಯಗಳಲ್ಲಿ ರಾಷ್ಟ್ರದ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ಸೇವೆಯು ನಿರ್ವಹಿಸಿದ ಗಮನಾರ್ಹ ಪಾತ್ರವನ್ನು ಪ್ರಶಂಸಿಸುವ ಸಲುವಾಗಿ ಪ್ರತಿ ವರ್ಷ ಫೆಬ್ರವರಿ 1 ರಂದು ಭಾರತೀಯ ಕರಾವಳಿ ಕಾವಲು ಪಡೆಯ ದಿನವನ್ನು ಆಚರಿಸಲಾಗುತ್ತದೆ.

ಭಾರತೀಯ ಕರಾವಳಿ ಕಾವಲು ಪಡೆ ದಿನದ ಇತಿಹಾಸ

ಭಾರತೀಯ ಕರಾವಳಿ ಕಾವಲು ಪಡೆ ದಿನವನ್ನು ಮೊದಲ ಬಾರಿಗೆ ಭಾರತದ ಸಂಸತ್ತು ಆಗಸ್ಟ್ 18, 1978 ರಂದು ಜಾರಿಗೆ ತಂದಿತು. ಆದರೆ ಭಾರತೀಯ ಕರಾವಳಿ ಕಾವಲು ಪಡೆ ದಿನವನ್ನು ಫೆಬ್ರವರಿ 1, 1977 ರಂದು ಪ್ರಾರಂಭವಾಯಿತು. ಭಾರತೀಯ ಕರಾವಳಿ ಕಾವಲು ಪಡೆಗೆ ಮಿಲಿಟರಿಯೇತರ ಕಡಲ ಸೇವೆಗಳನ್ನು ಒದಗಿಸಲು ಭಾರತೀಯ ಕೋಸ್ಟ್ ಗಾರ್ಡ್ ಅನ್ನು ಸ್ಥಾಪಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಫೆಬ್ರವರಿ 1 ರಂದು ಕರಾವಳಿ ಕಾವಲು ಪಡೆ ದಿನ ಆಚರಿಸುತ್ತಾ ಬರಲಾಗುತ್ತಿದೆ. ಆರಂಭದಲ್ಲಿ ಸಮುದ್ರ ಹಾಗೂ ವಿಶೇಷ ಆರ್ಥಿಕ ವಲಯದಲ್ಲಿ ಕಣ್ಗಾವಲುಗಾಗಿ ಏಳು ಹಡಗುಗಳು ಮಾತ್ರ ಇದ್ದವು. ಇದೀಗ ನೌಕಾಪಡೆಯಲ್ಲಿ 158 ಹಡಗುಗಳು ಮತ್ತು 78 ವಿಮಾನಗಳ ದಾಸ್ತಾನು ಹೊಂದಿದ್ದು, ಭಾರತೀಯ ಕೋಸ್ಟ್ ಗಾರ್ಡ್ ವಿಶ್ವದ ನಾಲ್ಕನೇ ಅತಿ ದೊಡ್ಡ ಕೋಸ್ಟ್ ಗಾರ್ಡ್ ಆಗಿ ಬೆಳೆದು ನಿಂತಿದೆ.

ಇದನ್ನೂ ಓದಿ; ಫೆಬ್ರವರಿ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ದಿನಗಳು

ಭಾರತೀಯ ಕರಾವಳಿ ಕಾವಲು ಪಡೆಯ ದಿನದ ಮಹತ್ವ

ಭಾರತೀಯ ಕೋಸ್ಟ್ ಗಾರ್ಡ್ ದಿನದ ಧ್ಯೇಯವಾಕ್ಯವು “ವಯಂ ರಕ್ಷಂ” ವಾಗಿದ್ದು, ‘ನಾವು ರಕ್ಷಿಸುತ್ತೇವೆ’ ಎನ್ನುವ ಅರ್ಥವನ್ನು ನೀಡುತ್ತದೆ. ಭಾರತೀಯ ಕರಾವಳಿ ಕಾವಲು ಪಡೆಗಳು ಕಡಲಾಚೆಯ ನಿಲ್ದಾಣಗಳ ರಕ್ಷಣೆ, ಮೀನುಗಾರರಿಗೆ ರಕ್ಷಣೆ ಹಾಗೂ ನೆರವು, ಸಮುದ್ರ ಸುತ್ತ ಮುತ್ತಲಿನ ಪ್ರದೇಶಗಳ ರಕ್ಷಣೆ, ಕಳ್ಳಸಾಗಣೆ-ವಿರೋಧಿ ಕಾರ್ಯಾಚರಣೆಗಳು, ಕಡಲ ಕಾನೂನುಗಳ ಜಾರಿ ಸೇರಿದಂತೆ ಇನ್ನಿತ್ತರ ಕಾರ್ಯವನ್ನು ನಿರ್ವಹಿಸುತ್ತದೆ. ಕೋಸ್ಟ್ ಗಾರ್ಡ್ ಭಾರತೀಯ ನೌಕಾಪಡೆ, ಮೀನುಗಾರಿಕೆ ಇಲಾಖೆ, ಕಂದಾಯ ಇಲಾಖೆ (ಕಸ್ಟಮ್ಸ್) ಮತ್ತು ಕೇಂದ್ರ ಮತ್ತು ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತದೆ. ದೇಶೀಯ ಆರ್ಥಿಕತೆಗೆ ಸಮಸ್ಯೆಗಳನ್ನು ಉಂಟುಮಾಡುವ ಸರಕುಗಳ ಕಳ್ಳಸಾಗಣೆಯನ್ನು ತಡೆಗಟ್ಟುವ ಕೆಲಸವನ್ನು ಮಾಡುತ್ತದೆ. ಭಾರತೀಯ ಕೋಸ್ಟ್ ಗಾರ್ಡ್ ಭಾರತದ 7,51,660 ಕಿಮೀ ಕರಾವಳಿಯನ್ನು, ಹಲವಾರು ರಾಜ್ಯಗಳಲ್ಲಿ ಹಾಗೂ ಕೆಲವು ಜನನಿಬಿಡ ವ್ಯಾಪಾರ ಮಾರ್ಗಗಳಲ್ಲಿ ರಕ್ಷಿಸಿ, ದೇಶದ ರಕ್ಷಣೆಯನ್ನು ಮಾಡುತ್ತಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ