AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024: ಗುರುವಿನ ಬಗೆಗೆ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳಿವು

ಪ್ರತಿಯೊಬ್ಬರ ಜೀವನದಲ್ಲಿಯು ಗುರುವಿನ ಸ್ಥಾನವು ಬಹುದೊಡ್ಡದು. ಗುರುವಿನ ಮಾರ್ಗದರ್ಶನವಿದ್ದರೆ ಮಾತ್ರ ಆ ವ್ಯಕ್ತಿಯು ಒಂದೊಳ್ಳೆ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಈ ಗುರುವಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿ ವರ್ಷವು ಗುರುಪೂರ್ಣಿಮಾವನ್ನು ಆಚರಿಸಲಾಗುತ್ತದೆ. ಈಗಾಗಲೇ ಅನೇಕ ವ್ಯಕ್ತಿಗಳು ಗುರುವಿನ ಬಗೆಗೆ ಹೇಳಲಾದ ಕೋಟ್ಸ್ ಗಳು ಇಲ್ಲಿವೆ.

Guru Purnima 2024: ಗುರುವಿನ ಬಗೆಗೆ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳಿವು
ಸ್ವಾಮಿ ವಿವೇಕಾನಂದರು, ಡಾ ಎಪಿಜೆ ಅಬ್ದುಲ್ ಕಲಾಂ, ಡಾ.ಸರ್ವಪಲ್ಲಿ ರಾಧಾಕೃಷ್ಣನ್
ಸಾಯಿನಂದಾ
| Edited By: |

Updated on: Jul 19, 2024 | 9:43 AM

Share

ಆಷಾಢ ಮಾಸದ ಹುಣ್ಣಿಮೆಯ ದಿನ ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ ಅದುವೇ “ಗುರು ಪೂರ್ಣಿಮೆ”. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನವಾಗಿದೆ. ವೇದವ್ಯಾಸರು ಈ ದಿನವೇ ಹುಟ್ಟಿದ ಕಾರಣ ಅವರ ಜನ್ಮದಿನವು ಹೌದು. ಈ ಬಾರಿ ಗುರು ಪೂರ್ಣಿಮಾವನ್ನು ಜುಲೈ 21ರಂದು ಆಚರಣೆ ಮಾಡಲಾಗುತ್ತಿದೆ. ಸರಿ ದಾರಿಯನ್ನು ತೋರಿ ಸನ್ಮಾರ್ಗದಲ್ಲಿ ನಡೆಸಿದ ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ಮತ್ತು ಕೃತಜ್ಞತೆಯನ್ನು ಸಲ್ಲಿಸಲು ಇದೊಂದು ಒಳ್ಳೆಯ ಅವಕಾಶವಾಗಿದೆ. ಈಗಾಗಲೇ ಹಲವಾರು ಮಹಾನ್ ವ್ಯಕ್ತಿಗಳು ಗುರು ಹಾಗೂ ಶಿಕ್ಷಣವನ್ನು ವಿವಿಧ ರೀತಿಯಲ್ಲಿ ಬಣ್ಣಿಸಿದ್ದಾರೆ.

  • ನಮ್ಮ ಬಗ್ಗೆ ಯೋಚಿಸಲು ಸಹಾಯ ಮಾಡುವವರೇ ನಿಜವಾದ ಶಿಕ್ಷಕರು – ಡಾ.ಸರ್ವಪಲ್ಲಿ ರಾಧಾಕೃಷ್ಣನ್
  • ಶಿಕ್ಷಣ ಎಂಬುವುದು ಅತ್ಯುತ್ತಮವಾದ ಸ್ನೇಹಿತ ವಿದ್ಯಾವಂತನಿಗೆ ಎಲ್ಲಾ ಕಡೆಯೂ ಗೌರವ ಸಿಗಲಿದೆ ಸೌಂದರ್ಯ, ಯೌವನ ಎರಡನ್ನೂ ಮೀರಿಸುವ ಶಕ್ತಿ ಶಿಕ್ಷಣಕ್ಕಿದೆ – ಚಾಣಕ್ಯ
  • ವಿದ್ಯೆ ಗುರುಗಳ ಗುರು – ಭ್ರತೃ ಹರಿ.
  • ಒಂದು ದೇಶ ಭ್ರಷ್ಟಾಚಾರ ಮುಕ್ತ ಮತ್ತು ಸುಂದರ ಮನಸ್ಸುಗಳಿರುವ ರಾಷ್ಟ್ರವಾಗಿ ರೂಪುಗೊಳಿಸಲು ಮೂವರು ಪ್ರಮುಖ ಸಾಮಾಜಿಕ ಸದಸ್ಯರಾದ ತಂದೆ, ತಾಯಿ ಮತ್ತು ಶಿಕ್ಷಕರಿಂದ ಸಾಧ್ಯ ಎಂಬುದು ನನ್ನ ಬಲವಾದ ನಂಬಿಕೆ – ಡಾ ಎಪಿಜೆ ಅಬ್ದುಲ್ ಕಲಾಂ.
  • ಒಬ್ಬ ವ್ಯಕ್ತಿಯ ನಡತೆ, ಕೌಶಲ್ಯ, ಭವಿಷ್ಯನ್ನು ರೂಪಿಸುವ ಶಿಕ್ಷಕ ವೃತ್ತಿ ತುಂಬಾ ಶ್ರೇಷ್ಠವಾದದ್ದು – ಎಪಿಜೆ ಅಬ್ದುಲ್ ಕಲಾಂ.
  • ವಿದ್ಯಾರ್ಥಿಗೆ ಅವನ ಶಿಕ್ಷಕರೇ ನಿಜವಾದ ಪಠ್ಯ ಪುಸ್ತಕ ಎಂಬುದನ್ನು ನಾನು ಯಾವಾಗಲೂ ನಂಬುತ್ತೇನೆ – ಮಹಾತ್ಮ ಗಾಂಧೀಜಿ.
  • ಗುರುವಿಗಿಂತ ಶ್ರೇಷ್ಠವಾದ ದೇವರಿಲ್ಲ, ಗುರುವಿನ ಅನುಗ್ರಹಕ್ಕಿಂತ ಉತ್ತಮವಾದ ಲಾಭವಿಲ್ಲ, ಗುರುವಿನ ಧ್ಯಾನಕ್ಕಿಂತ ಉನ್ನತವಾದ ಸ್ಥಿತಿಯಿಲ್ಲ – ಮುಕ್ತಾನಂದ.
  • ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನದಲ್ಲಿ ಸಂತೋಷವನ್ನು ಜಾಗೃತಗೊಳಿಸುವುದು ಶಿಕ್ಷಕರ ಸರ್ವೋಚ್ಚ ಕಲೆ – ಆಲ್ಬರ್ಟ್ ಐನ್‌ಸ್ಟೈನ್
  • ಶಿಕ್ಷಣವು ಈಗಾಗಲೇ ಮನುಷ್ಯನಲ್ಲಿರುವ ಪರಿಪೂರ್ಣತೆಯ ದ್ಯೋತಕವಾಗಿದೆ – ಸ್ವಾಮಿ ವಿವೇಕಾನಂದರು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್