AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Coffee day 2025: ಕಾಫಿ ಪ್ರಿಯರಿಗೆ ಒಂದು ಕಪ್‌ ಬಿಸಿ ಬಿಸಿ ಕಾಫಿಯೇ ಜೀವಾಮೃತ

ಕಾಫಿ ಎಂದ್ರೆ ಬಹುತೇಕ ಎಲ್ಲರಿಗೂ ಬಲು ಇಷ್ಟ. ಹಲವರ ದಿನ ಆರಂಭವಾಗುವುದೇ ಸ್ವಾದಭರಿತ ಕಾಫಿಯಿಂದ. ಹೌದು ಒಂದು ಕಪ್‌ ಬಿಸಿ ಬಿಸಿ ಕಾಫಿ ಕುಡಿಯಲಿಲ್ಲ ಅಂದ್ರೆ ಅವರ ದಿನವೇ ಪರಿಪೂರ್ಣ ಅನಿಸೋದಿಲ್ಲ. ಇದು ಮನಸ್ಸಿಗೆ ಮುದ ನೀಡುವ ಪೇಯ ಮಾತ್ರವಲ್ಲದೆ ಕಾಫಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಅಡಗಿವೆ. ಕಾಫಿಯ ಈ ಜನಪ್ರಿಯತೆಯನ್ನು ಗಮನಿಸಿ ಪ್ರತಿವರ್ಷ ಅಕ್ಟೋಬರ್‌ 1 ರಂದು ಅಂತಾರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

International Coffee day 2025: ಕಾಫಿ ಪ್ರಿಯರಿಗೆ ಒಂದು ಕಪ್‌ ಬಿಸಿ ಬಿಸಿ ಕಾಫಿಯೇ ಜೀವಾಮೃತ
ಅಂತಾರಾಷ್ಟ್ರೀಯ ಕಾಫಿ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Oct 01, 2025 | 9:33 AM

Share

ಕಾಫಿ (Coffee) ಪ್ರಪಂಚದಲ್ಲೇ ನೆಚ್ಚಿನ ಪಾನೀಯಗಳೊಂದು. ಒತ್ತಡವನ್ನು ಕಡಿಮೆ ಮಾಡಲು, ಸ್ನೇಹಿತರೊಂದಿಗೆ ಟೈಮ್‌ ಪಾಸ್‌ ಮಾಡಲು ಹೆಚ್ಚಿನವರು ಒಂದು ಕಪ್‌ ಬಿಸಿ ಬಿಸಿ ಕಾಫಿಯನ್ನೇ ಕುಡಿತಾರೆ. ಅದರಲ್ಲೂ ಕಾಫಿ ಪ್ರಿಯರಿಗಂತೂ ದಿನದಲ್ಲಿ ಒಂದೆರಡು ಕಪ್‌ ಕಾಫಿ ಕುಡಿಲಿಲ್ಲ ಎಂದ್ರೆ ಅವರಿಗೆ ತಮ್ಮ ದಿನವೇ ಪರಿಪೂರ್ಣ ಎನಿಸೋದಿಲ್ಲ. ಅಷ್ಟು ಇಷ್ಟಪಟ್ಟು ಕಾಫಿ ಕುಡಿತಾರೆ. ಒಟ್ಟಿನಲ್ಲಿ ಕಾಫಿ ಪ್ರತಿಯೊಬ್ಬರ ಜೀವನದ ಭಾಗವಾಗಿ ಹೋಗಿದೆ. ಇದರ ಹೊರತಾಗಿ ಕಾಫಿ ಕುಡಿಯುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಕೂಡ ಇವೆ. ಈ ಎಲ್ಲಾ ಜನಪ್ರಿಯತೆಯನ್ನು ಪರಿಗಣಿಸಿ, ಹಾಗೂ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಅಕ್ಟೋಬರ್‌ 1 ರಂದು ಪ್ರತಿವರ್ಷ ಅಂತಾರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಆರಂಭವಾಯಿತು, ಅದರ ಹಿನ್ನೆಲೆಯೇನು ಎಂಬುದನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಕಾಫಿ ದಿನದ ಇತಿಹಾಸವೇನು?

ಅಂತಾರಾಷ್ಟ್ರೀಯ ಕಾಫಿ ದಿನವನ್ನು ಮೊದಲ ಬಾರಿಗೆ 2015 ರಲ್ಲಿ ಆಚರಿಸಲಾಯಿತು. 1963 ರಲ್ಲಿ ಲಂಡನ್‌ನಲ್ಲಿ ಸ್ಥಾಪನೆಯಾದ ಅಂತಾರಾಷ್ಟ್ರೀಯ ಕಾಫಿ ಸಂಸ್ಥೆಯು ಅಂತಾರಾಷ್ಟ್ರೀಯ ಕಾಫಿ ದಿನವನ್ನು 2015 ರಲ್ಲಿ ಅಧಿಕೃತವಾಗಿ ಪ್ರಾರಂಭಿಸಿತು. ಇಟಲಿಯ ಮಿಲನ್‌ನಲ್ಲಿ ನಡೆದ ಎಕ್ಸ್‌ಪೋ 2015 ರ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಪರಿಚಯಿಸಲಾಯಿತು ಮತ್ತು ಅಂದಿನಿಂದ ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಕಾಫಿ ಬೆಳೆಗಾರರು, ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಅಲ್ಲದೆ ನ್ಯಾಯಯುತ ವ್ಯಾಪಾರ, ಸುಸ್ಥಿರ ಕೃಷಿ ಮತ್ತು ಸಣ್ಣ ಪ್ರಮಾಣದ ರೈತರಿಗೆ ಬೆಂಬಲ ನೀಡುವುದು  ಈ ಆಚರಣೆಗೆ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ
Image
ನದಿಗಳು ಬರೀ ನೀರಿನ ಮೂಲವಲ್ಲ, ಪರಿಸರ ವ್ಯವಸ್ಥೆಯ ಜೀವನಾಡಿ
Image
ಮಾನವನ ಕ್ಷೇಮಕ್ಕೆ ಸುಸ್ಥಿರ, ಆರೋಗ್ಯಕರ ಪರಿಸರ ಅತ್ಯಗತ್ಯ
Image
ವಿಶ್ವ ಘೇಂಡಾಮೃಗ ದಿನದ ಆಚರಣೆಯ ಇತಿಹಾಸ, ಮಹತ್ವ
Image
ಅಳಿವಿನಂಚಿನಲ್ಲಿವೆ ರೆಡ್‌ ಪಾಂಡಾಗಳು, ಅವುಗಳ ರಕ್ಷಣೆ ಅತ್ಯಗತ್ಯ

ಅಂತಾರಾಷ್ಟ್ರೀಯ ಕಾಫಿ ದಿನದ ಮಹತ್ವವೇನು?

  • ಅಂತಾರಾಷ್ಟ್ರೀಯ ಕಾಫಿ ದಿನವು ಲಕ್ಷಾಂತರ ಜನರು ಪ್ರತಿದಿನ ಆನಂದಿಸುವ ಪಾನೀಯವಾದ ಕಾಫಿಯ ಶ್ರೀಮಂತ ಇತಿಹಾಸ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಸುತ್ತದೆ.
  • ಕಾಫಿ ಕೇವಲ ಪಾನೀಯಕ್ಕಿಂತ ಹೆಚ್ಚಿನದ್ದಾಗಿದ್ದು, ಇದು ಸಾಮಾಜಿಕ ಆಚರಣೆಗಳನ್ನು ಪ್ರತಿನಿಧಿಸುತ್ತದೆ, ಎಲ್ಲಾ ಸಂಸ್ಕೃತಿಗಳಲ್ಲಿ ಜನರನ್ನು ಚೈತನ್ಯಗೊಳಿಸುತ್ತದೆ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.
  • ಈ ದಿನ ಕಾಫಿ ಉದ್ಯಮದಲ್ಲಿ ಸುಸ್ಥಿರತೆ ಮತ್ತು ನೈತಿಕ ಅಭ್ಯಾಸಗಳನ್ನು ತರಲು, ಕಾಫಿ ಬೆಳೆಗಾರರು, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

ಭಾರತದಲ್ಲಿ ಕಾಫಿ:

ಭಾರತವು ಏಷ್ಯಾದಲ್ಲಿ ಮೂರನೇ ಅತಿದೊಡ್ಡ ಕಾಫಿ ಉತ್ಪಾದಕ ಮತ್ತು ರಫ್ತುದಾರ ರಾಷ್ಟ್ರವಾಗಿದ್ದು, ವಿಶ್ವದ ಆರನೇ ಅತಿದೊಡ್ಡ ಉತ್ಪಾದಕ ಮತ್ತು ಐದನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ಭಾರತೀಯ ಕಾಫಿ ತನ್ನ ಅತ್ಯುನ್ನತ ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು,  ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇದನ್ನು ಪ್ರೀಮಿಯಂ ಎಂದು ಪರಿಗಣಿಸಲಾಗಿದೆ. ಭಾರತದಲ್ಲಿ ಎರಡು ಪ್ರಮುಖ ವಿಧದ ಕಾಫಿಗಳಿವೆ, ಅರೇಬಿಕಾ ಮತ್ತು ರೋಬಸ್ಟಾ. ಕರ್ನಾಟಕವು ಅತಿದೊಡ್ಡ ಕಾಫಿ ಉತ್ಪಾದಕ ರಾಜ್ಯವಾಗಿದೆ.

ಇದನ್ನೂ ಓದಿ: ಹಿರಿ ಜೀವಗಳ ಬಗ್ಗೆ ತಾತ್ಸಾರ ಬೇಡ, ಇರಲಿ ಗೌರವ

ಕಾಫಿ ಕುಡಿಯುವುದರಿಂದಾಗುವ ಪ್ರಯೋಜನಗಳೇನು?

  1. ಕಾಫಿ ಕುಡಿಯುವುದು ತುಂಬಾ  ಪ್ರಯೋಜನಕಾರಿ, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
  2. ಕಾಫಿ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
  3. ಕಾಫಿ ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುವ ಮೂಲಕ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  4. ಕಾಫಿಯಲ್ಲಿರುವ ಕೆಫೀನ್ ಗಮನ, ಗಮನ ಮತ್ತು ಒಟ್ಟಾರೆ ಅರಿವಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ.
  5. ಕಾಫಿಯು ಉತ್ಕರ್ಷಣ ನಿರೋಧಕಗಳಿಂದ ತುಂಬಿದ್ದು, ಇದು ದೇಹವು ಉರಿಯೂತದ ವಿರುದ್ಧ ಹೋರಾಡಲು ಮತ್ತು ಹಾನಿಕಾರಕ ಸ್ವತಂತ್ರ ರಾಡಿಕಲ್‌ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ, ಕೆಲವು ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!