AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 16 ರಂದು ಅಂತಾರಾಷ್ಟ್ರೀಯ ಸಹಿಷ್ಣುತೆ ದಿನವನ್ನು ಆಚರಿಸುವುದು ಏಕೆ?

International day for tolerance 2024: ಸಹಿಷ್ಣುತೆ ಮತ್ತು ತಾರತಮ್ಯದಂತಹ ನಕಾರಾತ್ಮಕ ಭಾವನೆಗಳನ್ನು ತೊಡೆದುಹಾಕಲು ಹಾಗೂ ಸಹಿಷ್ಣುತೆ ಮತ್ತು ಅಹಿಂಸೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನವೆಂಬರ್ 16 ರಂದು ಅಂತಾರಾಷ್ಟ್ರೀಯ ಸಹಿಷ್ಣುತೆ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯು ಹುಟ್ಟಿಕೊಂಡದ್ದು? ಏನಿದರ ವಿಶೇಷ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ನವೆಂಬರ್ 16 ರಂದು ಅಂತಾರಾಷ್ಟ್ರೀಯ ಸಹಿಷ್ಣುತೆ ದಿನವನ್ನು ಆಚರಿಸುವುದು ಏಕೆ?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 16, 2024 | 10:03 AM

Share

ಇಂದಿನ ವೇಗದ ಜಗತ್ತಿನಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಕೆಲಸದಲ್ಲಿ ನಿರತರಾಗಿರುವುದರಿಂದ ತಾಳ್ಮೆ, ಸಹನೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಮಾಜದಲ್ಲಿ ಅಹಿಂಸೆ ಹಾಗೂ ಹಿಂಸಾಚಾರದಂತಹ ಘಟನೆಗಳು ಹೆಚ್ಚು ನಡೆಯುತ್ತಲೇ ಇದೆ. ಈ ದಿನವೂ ಸಮಾಜದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವನ್ನು ತಡೆಯಲು ಸಹಿಷ್ಣುತೆಯನ್ನು ಉತ್ತೇಜಿಸುವುದು ಹಾಗೂ ಅಸಹಿಷ್ಣುತೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮುಖ್ಯವಾಗಿದೆ. ಸಹಿಷ್ಣುತೆ ಎಂದರೆ ಭಿನ್ನಾಭಿಪ್ರಾಯಗಳನ್ನು ಸ್ವೀಕರಿಸುವುದು, ಇತರರ ಭಾವನೆಗಳನ್ನು ಗೌರವಿಸುವುದು ಹಾಗೂ ಶಾಂತಿಯುತವಾಗಿ ವರ್ತಿಸುವುದು. ಇದು ವ್ಯಕ್ತಿಗಳಿಗೆ ಮಾತ್ರವಲ್ಲ ಸಮಾಜಕ್ಕೂ ಅತ್ಯಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ನವೆಂಬರ್ 16 ರಂದು ಅಂತಾರಾಷ್ಟ್ರೀಯ ಸಹಿಷ್ಣುತೆ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಸಹಿಷ್ಣುತೆ ದಿನದ ಇತಿಹಾಸ ಹಾಗೂ ಮಹತ್ವ

ಮಹಾತ್ಮಾ ಗಾಂಧಿಯವರ 125 ನೇ ಜನ್ಮದಿನದ ಸಂದರ್ಭದಲ್ಲಿ ಯುನೈಟೆಡ್ ನ್ಯಾಶನಲ್ ಜನರಲ್ ಅಸೆಂಬ್ಲಿಯು 1995 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಹಿಷ್ಣುತೆಯ ವರ್ಷವೆಂದು ಘೋಷಿಸಿತು. ಅದೇ ವರ್ಷ ಜಗತ್ತಿನಲ್ಲಿ ಅಹಿಂಸೆ ಮತ್ತು ಸಹಿಷ್ಣುತೆಯ ಜಾಗೃತಿಯನ್ನು ಉತ್ತೇಜಿಸುವುದರೊಂದಿಗೆ “ಯುನೆಸ್ಕೋ ಮದನ್‌ಜಿತ್ ಸಿಂಗ್ ಪ್ರಶಸ್ತಿ” ನೀಡಲು ಮುಂದಾಯಿತು. ಆ ಬಳಿಕ 1996 ರಲ್ಲಿ, ಯುನೈಟೆಡ್ ನ್ಯಾಶನಲ್ ಜನರಲ್ ಅಸೆಂಬ್ಲಿಯು ನವೆಂಬರ್ 16 ರಂದು ಅಂತಾರಾಷ್ಟ್ರೀಯ ಸಹಿಷ್ಣುತೆ ದಿನವನ್ನಾಗಿ ಆಚರಿಸಲು ಘೋಷಿಸಿತು. ಅಂದಿನಿಂದ ಜಾಗತಿಕ ಮಟ್ಟದಲ್ಲಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಕರ್ತವ್ಯವೇನು? ಇಲ್ಲಿದೆ ಮಾಹಿತಿ

ಅಂತಾರಾಷ್ಟ್ರೀಯ ಸಹಿಷ್ಣುತೆ ದಿನದ ಮಹತ್ವ ಹಾಗೂ ಆಚರಣೆ

ಸಮಾಜವು ಅನೇಕ ದುಷ್ಕೃತ್ಯಗಳು ಮತ್ತು ಹಿಂಸೆಗಳಿಂದ ಸುತ್ತುವರೆದಿದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳು, ಹಿಂಸೆ ಮತ್ತು ಅನ್ಯಾಯವನ್ನು ನಿಲ್ಲಿಸುವುದು ಹಾಗೂ ಸಹಿಷ್ಣುತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಜಗತ್ತಿನಲ್ಲಿ ಹಿಂಸೆ ಮತ್ತು ನಕಾರಾತ್ಮಕತೆಯ ಭಾವನೆಯನ್ನು ತೊಡೆದುಹಾಕುವ ಮೂಲಕ ಅಹಿಂಸೆಯನ್ನು ಉತ್ತೇಜಿಸುವ ಸಲುವಾಗಿ ಈ ದಿನವೂ ಮಹತ್ವದ್ದಾಗಿದೆ. ಈ ದಿನವನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದ್ದು, ಅನೇಕ ಸಭೆಗಳು ಮತ್ತು ಚರ್ಚಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​