AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Jaguar Day 2025: ಕ್ಷೀಣಿಸುತ್ತಿದೆ ಜಾಗ್ವಾರ್‌ ಸಂತತಿ

ಜಾಗ್ವಾರ್‌ ನೋಡಲು ಚಿರತೆಯಂತೆಯೇ ಕಾಣುವ ಶಕ್ತಿಶಾಲಿ ಪ್ರಾಣಿ. ಇಂದು ಹವಾಮಾನ ಬದಲಾವಣೆ, ಕಾಡುಗಳ ನಾಶ, ಬೇಟೆ ಇವೆಲ್ಲದರ ಕಾರಣದಿಂದ ಜಾಗ್ವಾರ್‌ ಸಂತತಿ ಅಳಿವಿನಂಚಿನತ್ತ ಸಾಗಿದೆ. ಈ ನಿಟ್ಟಿನಲ್ಲಿ ಇವುಗಳ ಪ್ರಭೇದವನ್ನು ಸಂರಕ್ಷಿಸಲು ಪ್ರತಿವರ್ಷ ನವೆಂಬರ್‌ 29 ರಂದು ಅಂತಾರಾಷ್ಟ್ರೀಯ ಜಾಗ್ವಾರ್‌ ದಿನವನ್ನು ಆಚರಿಸಲಾಗುತ್ತದೆ.

International Jaguar Day 2025: ಕ್ಷೀಣಿಸುತ್ತಿದೆ ಜಾಗ್ವಾರ್‌ ಸಂತತಿ
ಅಂತಾರಾಷ್ಟ್ರೀಯ ಜಾಗ್ವಾರ್‌ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Nov 29, 2025 | 10:01 AM

Share

ಪ್ಯಾಂಥೆರಾ ಓಂಕಾ ಎಂದೂ ಕರೆಯಲ್ಪಡುವ ಜಾಗ್ವಾರ್‌ (Jaguar)ಕೂಡ ಹುಲಿ, ಸಿಂಹ, ಚಿರತೆಯಂತೆ  ಬೆಕ್ಕಿನ ಸಂತತಿಗೆ ಸೇರಿದ ದೈತ್ಯ ಪ್ರಾಣಿಯಾಗಿದ್ದು, ಇದು ತನ್ನ ಶಕ್ತಿಶಾಲಿ ಗುಣಕ್ಕೆ ಹೆಸರುವಾಸಿಯಾಗಿದೆ. ಆದರೆ ಇಂದು ಇವುಗಳು ಕಾಡಿನಲ್ಲಿ ಕಾಣ ಸಿಗುವುದೇ ಅಪರೂಪವಾಗಿದೆ. ಏಕೆಂದರೆ ಹವಾಮಾನ ಬದಲಾವಣೆ, ಕಾಡಿನ ನಾಶ, ಆವಾಸಸ್ಥಾನದ ನಷ್ಟ, ಬೇಟೆಯಾಡುವಿಕೆ ಇವೆಲ್ಲದರ ಕಾರಣದಿಂದ ಆನೆ, ಹುಲಿ, ಸಿಂಹಗಳಂತೆ ಇವುಗಳ ಸಂತತಿ ಕೂಡ ಅಳಿವಿನಂಚಿನತ್ತ ಸಾಗಿದೆ. ಹಾಗಾಗಿ ಇವುಗಳ ಸಂತತಿಯನ್ನು ಸಂರಕ್ಷಿಸುವ ಸಲುವಾಗಿ ಪ್ರತಿವರ್ಷ ನವೆಂಬರ್‌ 29 ರಂದು ಅಂತಾರಾಷ್ಟ್ರೀಯ ಜಾಗ್ವಾರ್‌ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಜಾಗ್ವಾರ್‌ ದಿನದ ಇತಿಹಾಸವೇನು?

ಅಂತಾರಾಷ್ಟ್ರೀಯ ಜಾಗ್ವಾರ್ ದಿನವನ್ನು 2018 ರಲ್ಲಿ ಸ್ಥಾಪಿಸಲಾಯಿತು. ಇದು ಜಾಗ್ವಾರ್‌ಗಳನ್ನು ಸಂರಕ್ಷಿಸುವ ಜಾಗತಿಕ ಪ್ರಯತ್ನದ ಭಾಗವಾಗಿದೆ. ಈ ಉಪಕ್ರಮವನ್ನು ಬೆಕ್ಕಿನ ಜಾತಿಗೆ ಸೇರಿದ ಕಾಡುಪ್ರಾಣಿಗಳನ್ನು ರಕ್ಷಿಸಲು ಮೀಸಲಾಗಿರುವ ಪ್ಯಾಂಥೆರಾ ಎಂಬ ಸಂಸ್ಥೆಯು ಹಲವಾರು ಸರ್ಕಾರಗಳು ಮತ್ತು ಸಂರಕ್ಷಣಾ ಗುಂಪುಗಳ ಸಹಯೋಗದೊಂದಿಗೆ ಮುನ್ನಡೆಸಿತು. ಮೆಕ್ಸಿಕೋದಿಂದ ಅರ್ಜೆಂಟೀನಾವರೆಗಿನ 18 ದೇಶಗಳಲ್ಲಿ ಜಾಗ್ವಾರ್‌ಗಳ ನೈಸರ್ಗಿಕ ಆವಾಸಸ್ಥಾನವನ್ನು ರಕ್ಷಿಸಲು ವಿನ್ಯಾಸಗೊಳಿಸಲಾದ ʼಜಾಗ್ವಾರ್ ಕಾರಿಡಾರ್ ಇನಿಶಿಯೇಟಿವ್ʼ ಕಾರ್ಯಕ್ರಮವನ್ನು ಅಳವಡಿಸಿಕೊಂಡ ನೆನಪಿಗಾಗಿ ಈ ದಿನದ ಆಚರಣೆಗೆ  ನವೆಂಬರ್ 29 ಅನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಟ್ಟ ಹೈನುಗಾರಿಕೆ

ಅಂತಾರಾಷ್ಟ್ರೀಯ ಜಾಗ್ವಾರ್‌ ದಿನದ ಮಹತ್ವವೇನು?

  • ಜಾಗ್ವಾರ್‌ಗಳ ಪರಿಸರ ಪ್ರಾಮುಖ್ಯತೆ ಮತ್ತು ಅವು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು.
  • ಜಾಗ್ವಾರ್‌ಗಳು ಮುಕ್ತವಾಗಿ ವಿಹರಿಸಲು ಅನುವು ಮಾಡಿಕೊಡುವ ಸಂರಕ್ಷಿತ ಮೀಸಲು ಪ್ರದೇಶಗಳು ಮತ್ತು ವನ್ಯಜೀವಿ ಕಾರಿಡಾರ್‌ಗಳಂತಹ ಉಪಕ್ರಮಗಳನ್ನು ಅಳವಡಿಸಲು ಪ್ರೇರೇಪಿಸುವುದು.
  • ಸರ್ಕಾರಗಳು, ಸಂಸ್ಥೆಗಳು ಜಾಗ್ವಾರ್ ಸಂರಕ್ಷಣೆಗೆ ಹಣಕಾಸು ಇತ್ಯಾದಿ ಸಹಾಯ ಮಾಡುವ ಮೂಲಕ ಇವುಗಳ ರಕ್ಷಣೆಗೆ ಕೊಡುಗೆ ನೀಡಲು ಪ್ರೇರೇಪಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?