AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Labour Day 2026: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು

ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಪ್ರತಿ ವರ್ಷ ಮೇ 1 ರಂದು ಆಚರಿಸಲಾಗುತ್ತದೆ. ಕಾರ್ಮಿಕ ದಿನವು ಕಾರ್ಮಿಕರ ಕಠಿಣ ಪರಿಶ್ರಮದ ಆಚರಣೆಯಷ್ಟೇ ಅಲ್ಲ, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವ ಪ್ರಮುಖ ದಿನವೂ ಆಗಿದೆ. ಅಲ್ಲದೆ ಈ ದಿನದಂದು ಸಮಾಜ ಮತ್ತು ಆರ್ಥಿಕತೆಯನ್ನು ಮುನ್ನಡೆಸಲು ಶ್ರಮಿಸಿದ ಕಾರ್ಮಿಕರು ಮತ್ತು ಕಾರ್ಮಿಕ ವರ್ಗವನ್ನು ಗೌರವಿಸಲಾಗುತ್ತದೆ. ಶ್ರಮಜೀವಿಗಳಿಗೆ ಮೀಸಲಾಗಿರುವ ಈ ವಿಶೇಷ ದಿನದ ಆಚರಣೆ ಪ್ರಾರಂಭವಾದದ್ದು ಹೇಗೆ ಎಂಬುದನ್ನು ನೋಡೋಣ ಬನ್ನಿ.

International Labour Day 2026: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು
ಅಂತಾರಾಷ್ಟ್ರೀಯ ಕಾರ್ಮಿಕರ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: May 01, 2026 | 10:13 AM

Share

ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ (Labour) ಮೇಲೆ ಅವಲಂಬಿತವಾಗಿರುತ್ತದೆ. ಹೌದು ರಸ್ತೆ ನಿರ್ಮಾಣಗಳಿಂದ ಹಿಡಿದು ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಗಳ ವರೆಗೆ ಪ್ರತಿಯೊಂದು ಕೆಲಸವನ್ನು ಶ್ರಮವಹಿಸಿ ಮಾಡುವ ಮೂಲಕ ದೇಶದ ಪ್ರಗತಿಗೆ ಕಾರ್ಮಿಕರು ಕೊಡುಗೆ ನೀಡುತ್ತಾರೆ. ಕಾರ್ಮಿಕರು ಹಗಲು ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮ ವಹಿಸಿ ದುಡಿಯುತ್ತಾರೆ. ಇವರು ತಮ್ಮ ಶ್ರಮದ ಮೂಲಕ ಸಮಾಜ ಮತ್ತು ಆರ್ಥಿಕತೆಯ ಅಡಿಪಾಯವನ್ನು ಬಲಪಡಿಸುತ್ತಾರೆ. ಹೀಗೆ ಸಮಾಜ ಮತ್ತು ಆರ್ಥಿಕತೆಯನ್ನು ಮುನ್ನಡೆಸಲು ಶ್ರಮಿಸಿದ ಕಾರ್ಮಿಕರು ಮತ್ತು ಕಾರ್ಮಿಕ ವರ್ಗವನ್ನು ಗೌರವಿಸಲು ಪ್ರತಿ ವರ್ಷ ಮೇ 1 ರಂದು ಪ್ರಪಂಚದಾದ್ಯಂತ ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಶ್ರಮಜೀವಿಗಳಿಗೆ ಸಮರ್ಪಿಸಲಾದ ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಇತಿಹಾಸವೇನು?

ಪ್ರತಿ ವರ್ಷ ಮೇ 1 ರಂದು ಆಚರಿಸಲಾಗುವ ಕಾರ್ಮಿಕರ ದಿನವು 19 ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕನ್ ಕಾರ್ಮಿಕ ಚಳುವಳಿಯೊಂದಿಗೆ ಪ್ರಾರಂಭವಾಯಿತು. ಮೇ 1, 1886 ರಂದು,  15 ಗಂಟೆಗಳ ಕಾಲ ಇದ್ದ ಕೆಲಸದ ಸಮಯವನ್ನು 8 ಗಂಟೆಗಳ ಅವಧಿಗೆ ತರಬೇಕು ಎಂಬ ಬೇಡಿಕೆಯೊಂದಿದೆ ಕಾರ್ಮಿಕರು ಅಮೆರಿಕದ ಚಿಕಾಗೋ ನಗರದಲ್ಲಿ ಮುಷ್ಕರವನ್ನು ಪ್ರಾರಂಭಿಸಿದರು. ನಂತರ ಈ ಪ್ರತಿಭಟನೆ ಚಿಕಾಗೋದ ಹೇಮಾರ್ಕೆಟ್ ಪ್ರದೇಶದಲ್ಲಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು. ಈ ಘಟನೆಯಲ್ಲಿ ಏಳು ಪೊಲೀಸರು ಮತ್ತು ನಾಲ್ವರು ನಾಗರಿಕರು ಪ್ರಾಣ ಕಳೆದುಕೊಂಡರು. ಈ ಘಟನೆಯ ಸ್ಮರಣಾರ್ಥವಾಗಿ, ಮೇ 1 ಅನ್ನು ಅಂತಾರಾಷ್ಟ್ರೀಯ ಕಾರ್ಮಿಕರ ದಿನವನ್ನಾಗಿ ಆಚರಿಸಲು ಪ್ರಾರಂಭಿಸಲಾಯಿತು. 1889 ರಲ್ಲಿ, ಯುರೋಪಿನ ಅನೇಕ ಸಮಾಜವಾದಿ ಪಕ್ಷಗಳು ಮೇ 1 ಅನ್ನು ಅಂತಾರಾಷ್ಟ್ರೀಯ ಕಾರ್ಮಿಕರ ದಿನವನ್ನಾಗಿ ಆಚರಿಸಲು ಒಟ್ಟಾಗಿ ಬಂದವು. ಅಂದಿನಿಂದ  ಪ್ರತಿ ವರ್ಷ ಈ ದಿನವನ್ನು  ಆಚರಿಸುತ್ತಾ ಬರಲಾಗುತ್ತಿದೆ.

ಭಾರತದಲ್ಲಿ ಕಾರ್ಮಿಕರ ದಿನ ಆರಂಭವಾದದ್ದು ಯಾವಾಗ?

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕರ ದಿನವನ್ನು 1923 ರಲ್ಲಿ ಆಚರಿಸಲಾಯಿತು. ಈ ದಿನವನ್ನು ಕಮ್ಯುನಿಸ್ಟ್ ನಾಯಕ ಸಿಂಗಾರವೇಲು ಚೆಟ್ಟಿಯಾರ್ ಅವರು ಚೆನ್ನೈನಲ್ಲಿ ಪ್ರಾರಂಭಿಸಿದರು. ಕಾರ್ಮಿಕರ ಹಕ್ಕುಗಳು ಮತ್ತು ರಕ್ಷಣೆಯ  ಬಗ್ಗೆ ಒತ್ತಾಯಿಸಿ ಅವರು ಮದ್ರಾಸ್ ಹೈಕೋರ್ಟ್ ಮುಂದೆ ಮೊದಲ ಕಾರ್ಮಿಕ ದಿನಾಚರಣೆಯ ಸಭೆಯನ್ನು ಆಯೋಜಿಸಿದರು. ಈ ಸಭೆಯಲ್ಲಿ, ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕರ ದಿನವನ್ನು ಆಚರಿಸಲಾಯಿತು.

ಇದನ್ನೂ ಓದಿ: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ಅಂತಾರಾಷ್ಟ್ರೀಯ ಕಾರ್ಮಿಕದ ದಿನದ ಮಹತ್ವವೇನು?

  • ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಉದ್ದೇಶವು ಕಾರ್ಮಿಕರ ಕಠಿಣ ಪರಿಶ್ರಮವನ್ನು ಗುರುತಿಸುವುದು ಮಾತ್ರವಲ್ಲದೆ, ಶೋಷಣೆಯನ್ನು ತಪ್ಪಿಸಲು ಅವರ ಹಕ್ಕುಗಳ ಬಗ್ಗೆ ಅವರಿಗೆ ಶಿಕ್ಷಣ ನೀಡುವುದಾಗಿದೆ.
  • ಈ ದಿನವು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯತೆ ಮತ್ತು ಕಾರ್ಮಿಕರಿಗೆ ಉತ್ತಮ ಕೆಲಸದ ಪರಿಸ್ಥಿತಿಗಳ ಮೇಲೆ ಕೇಂದ್ರೀಕರಿಸುತ್ತದೆ.
  • ಈ ದಿನವು ನ್ಯಾಯಯುತ ವೇತನ, ಸುರಕ್ಷಿತ ಕೆಲಸದ ವಾತಾವರಣ, ನ್ಯಾಯಯುತ ಕೆಲಸದ ಸಮಯ ಮತ್ತು ಶೋಷಣೆ ನಿರ್ಮೂಲನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.
  • ಈ ದಿನದ ಸಂದರ್ಭದಲ್ಲಿ, ಕಾರ್ಮಿಕರ ಕೊಡುಗೆಯನ್ನು ಗೌರವಿಸಲು ಮತ್ತು ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸ್ಥಳಗಳಲ್ಲಿ ರ್ಯಾಲಿಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು