AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Mine Awareness Day 2024 : ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

ಇತ್ತೀಚೆಗಿನ ದಿನಗಳಲ್ಲಿ ಅಕ್ರಮ ಗಣಿಗಾರಿಕೆಯಂತಹ ಸುದ್ದಿಗಳನ್ನು ಕೇಳುತ್ತಿದ್ದೇವೆ. ಇದೊಂದು ಬೆಟ್ಟ ಗುಡ್ಡಗಳನ್ನು ಕೊರೆತು ವಿವಿಧ ಲೋಹಗಳನ್ನು ಹೊರ ತೆಗೆಯುವ ಚಟುವಟಿಕೆಯಾಗಿದ್ದು, ಈ ಗಣಿಗಾರಿಕೆಯಂತಹ ಸರ್ಕಾರಕ್ಕೆ ಆದಾಯವೇನು ಬರುತ್ತಿದೆ. ಆದರೆ ಲಾಭಕ್ಕಿಂತ ಸುತ್ತಮುತ್ತಲಿನ ಜನರಿಗೆ ತೊಂದರೆಯೇ ಹೆಚ್ಚು. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 4 ರಂದು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಹಿಂದಿನ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

International Mine Awareness Day 2024 : ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 04, 2024 | 10:46 AM

Share

ಗಣಿಗಾರಿಕೆಯಂತಹ ಕೆಲವು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿ ಲಾಭಗಳಿಸಿರುವವರು ಸಂಖ್ಯೆಯು ಅಧಿಕವಾಗಿದೆ. ಹೀಗಾಗಿ ಗಣಿಗಾರಿಕೆ ಸಂಬಂಧಪಟ್ಟ ಸುದ್ದಿಗಳನ್ನು ಆಗಾಗ ಕೇಳುತ್ತಿರುತ್ತೇವೆ. ಭೂಮಿಯ ಒಡಲಲ್ಲಿ ಇರುವ ವಿವಿಧ ಲೋಹಗಳನ್ನು ಅಗೆದು ಹೊರತೆಗೆಯುವ ಪ್ರಕ್ರಿಯೆಯು ಇದಾಗಿದೆ. ಈ ಲೋಹಗಳನ್ನು ಹೊರ ತೆಗೆಯಲು ಗಣಿಯನ್ನು ಸ್ಫೋಟಿಸುವಂತಹ ವಿಧಾನಗಳನ್ನು ಬಳಸುತ್ತಾರೆ. ಇದರಿಂದಾಗಿ ಶಬ್ದ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯದಿಂದ ಅಲ್ಲಿ ವಾಸಿಸುತ್ತಿರುವ ಸುತ್ತ ಮುತ್ತಲಿನ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಇತಿಹಾಸ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2005 ಡಿಸೆಂಬರ್ 8 ರಂದು ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಿತು. ಈ ನಿರ್ಣಯದಂತೆ 2006 ಏಪ್ರಿಲ್ 4 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿ ವರ್ಷವು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ವಿಪರೀತ ಗಂಟಲು ಕೆರೆತವೇ, ಈ ಪದಾರ್ಥ ಸೇವಿಸಿದರೆ ನೋವೆಲ್ಲವು ಮಾಯಾ!

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಮಹತ್ವ

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಆಚರಣೆಯ ಹಿಂದಿನ ಮುಖ್ಯ ಉದ್ದೇಶವೇನೆಂದರೆ, ಗಣಿಗಾರಿಕೆಯಂತಹ ಚಟುವಟಿಕೆಗಳಿಂದ ಸುತ್ತ ಮುತ್ತಲಿನ ಜನರಿಗೆ ಆಗುವ ಸಮಸ್ಯೆಗಳು ಹಾಗೂ ಪರಿಸರಕ್ಕೆ ಆಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಗಣಿ ಜಾಗೃತಿ ದಿನದಂದು ಈ ಬಗ್ಗೆ ಅರಿವು ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?