AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಏಕಾಗಿ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವ

International Mine Awareness Day 2025: ಗಣಿಗಾರಿಕೆ ಒಂದು ಅಪಾಯಕಾರಿ ಉದ್ಯಮವಾಗಿದ್ದು, ಇದು ಶಬ್ಧ ಮಾಲಿನ್ಯ, ಭೂ ನಾಶ ಮಾಡುವ ಮೂಲಕ ಪರಿಸರಕ್ಕೆ ಹಾನಿ ಮಾಡುವುದು ಮಾತ್ರವಲ್ಲದೆ, ಈ ಗಣಿಗಾರಿಕೆಯಿಂದ ಜನ ಜೀವನಕ್ಕೂ ಕೂಡಾ ಸಾಕಷ್ಟು ತೊಂದರೆಯಾಗುತ್ತಿದೆ. ಹೀಗಾಗಿ ಗಣಿಗಾರಿಕೆ ಹಾಗೂ ಭೂಮಿಯ ಒಡಲಲ್ಲಿ ಅವಿತಿರುವ ನೆಲಬಾಂಬ್‌ಗಳ ಅಪಾಯದಿಂದ ಪರಿಸರ ಹಾಗೂ ಜೀವ ಸಂಕುಲವನ್ನು ರಕ್ಷಣೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್‌ 04 ರಂದು ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಮಹತ್ವ ಮತ್ತು ಇತಿಹಾಸವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಏಕಾಗಿ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 04, 2025 | 11:23 AM

ಚಿನ್ನ (gold), ಉಕ್ಕು, ಕಬ್ಬಿಣ (iron) ಸೇರಿದಂತೆ ಖನಿಜ (mineral) ಅದಿರುಗಳನ್ನು (ore) ಭೂಮಿಯಿಂದ (earth) ಹೊರ ತೆಗೆಯುವ ಸಲುವಾಗಿ ಅಪಾಯಕಾರಿ ಸ್ಫೋಟಕಗಳನ್ನು (explosive) ಬಳಸಿ ಭೂಮಿಯನ್ನು ಆಳವಾಗಿ ಅಗೆಯುವ ಮೂಲಕ ಗಣಿಗಾರಿಕೆಯನ್ನು ಮಾಡುತ್ತಾರೆ. ಈ ಗಣಿಗಾರಿಕೆ (mining) ಅಪಾಯಕಾರಿ ಉದ್ಯಮವಾಗಿದ್ದು, ಇದರಿಂದ ಪರಿಸರ (environment) ಹಾಗೂ ಜೀವಸಂಕುಲದ (biodiversity) ಮೇಲೆ ಸಾಕಷ್ಟು ಹಾನಿ (damage) ಮತ್ತು ಅಪಾಯ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಈ ಸ್ಫೋಟಕಗಳ ಜೊತೆಗೆ ಭೂಮಿಯ ಒಡಲಲ್ಲಿ ಅಡಗಿರುವ ನೆಲಬಾಂಬ್‌ಗಳಂತಹ ಯುದ್ಧಕಾಲದ ಅವಶೇಷಗಳ ಅಸ್ತಿತ್ವವು ಜೀವ ಸಂಕುಲಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಇದು ಸುರಕ್ಷತೆ ಮತ್ತು ಆರೋಗ್ಯ ಎರಡಕ್ಕೂ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಗಣಿಗಾರಿಕೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್‌ 04 ರಂದು ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು (International Mine Awareness Day) ಆಚರಣೆ ಮಾಡಲಾಗುತ್ತದೆ. ಈ ವಿಶೇಷ ದಿನದ ಇತಿಹಾಸವನ್ನು ತಿಳಿಯಿರಿ.

ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನದ ಇತಿಹಾಸ:

ನೆಲಬಾಂಬ್‌ಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಗಣಿ ಕಾರ್ಯಾಚರಣೆ ಮತ್ತು ಅವುಗಳ ನಿರ್ಮೂಲನೆಗಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಡಿಸೆಂಬರ್ 8, 2005 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಘೋಷಿಸಿತು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಆಚರಣೆಯನ್ನು ಘೋಷಿಸಿತು. ಮೊದಲ ಬಾರಿಗೆ ಈ ದಿನವನ್ನು ಏಪ್ರಿಲ್ 4, 2006 ರಂದು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಏಪ್ರಿಲ್‌ 04 ರಂದು ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನದ ಉದ್ದೇಶ:

ಅಪಾಯಕಾರಿ ಗಣಿಗಳು ಮತ್ತು ಯುದ್ಧ ಸ್ಫೋಟಕ ಅವಶೇಷಗಳು ಜನರ ಸುರಕ್ಷತೆ, ಆರೋಗ್ಯ ಮತ್ತು ಜೀವನಕ್ಕೆ ಗಂಭೀರ ಬೆದರಿಕೆಯನ್ನುಂಟುಮಾಡುವ ಅಂಶಗಳಾಗಿವೆ. ಈ ಅಂಶಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ
Image
ಹೊಸ ವರ್ಷ ಆಚರಿಸಿ ಫೂಲ್ ಆದ ದೇಶ ಯಾವುದು?
Image
ದೇಹ ಆಕಾರವೇ ನಿಮ್ಮ ವ್ಯಕ್ತಿತ್ವ ಬಹಿರಂಗ ಪಡಿಸುತ್ತೆ
Image
ಬೇಸಿಗೆಯ ದಾಹ ನೀಗಿಸಲು ಎಳನೀರು ಕುಲುಕ್ಕಿ ಶರ್ಬತ್‌ ಒಮ್ಮೆ ಟ್ರೈ ಮಾಡಿ…
Image
ಭಾರತದ ಹೊರತುಪಡಿಸಿ ವಿದೇಶದಲ್ಲಿರುವ ಪ್ರಮುಖ ಶಿವ ದೇವಾಲಯಗಳಿವು

ಇದನ್ನೂ ಓದಿ: ಪುರುಷರಿಗೆ ಈ ಬೇಸಿಗೆಯಲ್ಲಿ ಯಾವ ಅಂಡರ್‌ವೇರ್‌ ಉತ್ತಮ? ಒಳ ಉಡುಪಿನ ವಿಚಾರದಲ್ಲಿ ಈ ತಪ್ಪುಗಳನ್ನು ಮಾಡದಿರಿ

ಅಂತಾರಾಷ್ಟ್ರೀಯ ಗಣಿ ಜಾಗೃತಿ ದಿನದ ಮಹತ್ವ:

ಪ್ರತಿ ವರ್ಷ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ, ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಗಣಿಗಳು, ಯುದ್ಧದ ಸ್ಫೋಟಕ ಅವಶೇಷಗಳು ಮತ್ತು ಸುಧಾರಿತ ಸ್ಫೋಟಕ ಸಾಧನಗಳಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಮಲ್ಟಿಮೀಡಿಯಾ ಪ್ರದರ್ಶನವನ್ನು ಆಯೋಜಿಸುತ್ತದೆ. ಮತ್ತು ಗಣಿಗಳು, ಸ್ಫೋಟಕಗಳು ಜೀವ ಸಂಕುಲದ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡುವ ದೇಶಗಳಲ್ಲಿ ರಾಷ್ಟ್ರೀಯ ಗಣಿ-ಕ್ರಿಯೆ ಸಾಮರ್ಥ್ಯವನ್ನು ಸ್ಥಾಪಿಸುವ ಮತ್ತು ಅಭಿವೃದ್ಧಿಪಡಿಸುವ ಉದ್ದೇಶವನ್ನು ಕೂಡಾ ಹೊಂದಿದೆ. ಅಪಾಯಕಾರಿ ಸ್ಫೋಟಕಗಳು ಈ ಪ್ರಪಂಚದಾದ್ಯಂತದ ಜನ ಸಮುದಾಯಗಳಿಗೆ ಒಡ್ಡುವ ಅಪಾಯಗಳನ್ನು ಎತ್ತಿ ತೋರಿಸುವ ಮೂಲಕ, ಗಣಿ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳು ಮತ್ತು ಹೆಚ್ಚಿನ ಜಾಗರೂಕತೆಯನ್ನು ಉತ್ತೇಜಿಸುವ ಮಹತ್ವವನ್ನೂ ಹೊಂದಿದೆ.

ಹೀಗೆ ನೆಲಬಾಂಬ್‌ಗಳು ಮತ್ತು ಯುದ್ಧದ ಸ್ಫೋಟಕ ಅವಶೇಷಗಳನ್ನು ತೆಗೆದುಹಾಕಲು ಹಾಗೂ ಗಣಿಗಾರಿಕೆಯ ಅಪಾಯಗಳನ್ನು ಕಡಿಮೆ ಮಾಡಿಸುವ ಮೂಲಕ, ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವು ಪೀಡಿತ ಪ್ರದೇಶಗಳಲ್ಲಿ ಶಾಶ್ವತ ಶಾಂತಿಯನ್ನು ನಿರ್ಮಿಸಲು ಕೊಡುಗೆ ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ