AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Zebra Day 2025: ಪರಿಸರ ಸಮತೋಲನಕ್ಕೆ ಜೀಬ್ರಾಗಳ ಸಂರಕ್ಷಣೆ ಅತ್ಯಗತ್ಯ, ಎಲ್ಲರಿಗೂ ಬೇಕು ಜಾಗೃತಿ

ಸ್ವಾರ್ಥ ಭರಿತ ಮಾನವನ ಚಟುವಟಿಕೆಗಳಿಂದಾಗಿ ಜೀವ ಸಂಕುಲದಲ್ಲಿರುವ ಪ್ರಾಣಿ ಪಕ್ಷಿಗಳ ಸಂತತಿಗಳು ನಶಿಸಿ ಹೋಗುತ್ತಿವೆ. ಅದರಲ್ಲಿಯೂ ಈ ಪರಿಸರ ನಾಶಗಳ ಕಾರಣದಿಂದಾಗಿ ಜೀಬ್ರಾಗಳ ಸಂತತಿ ಅಳಿವಿನಂಚಿನಲ್ಲಿವೆ. ಈ ನಿಟ್ಟಿನಲ್ಲಿ ಈ ಪ್ರಾಣಿಗಳ ಸಂರಕ್ಷಣೆಗಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜನವರಿ 31 ರಂದು ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗ ಶುರುವಾಯಿತು? ಈ ದಿನದ ಮಹತ್ವವೇನು? ಎನ್ನುವ ಮಾಹಿತಿ ಇಲ್ಲಿದೆ.

International Zebra Day 2025: ಪರಿಸರ ಸಮತೋಲನಕ್ಕೆ ಜೀಬ್ರಾಗಳ ಸಂರಕ್ಷಣೆ ಅತ್ಯಗತ್ಯ, ಎಲ್ಲರಿಗೂ ಬೇಕು ಜಾಗೃತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 30, 2025 | 6:07 PM

Share

ಮನುಷ್ಯನ ದುರಾಸೆಗೆ ಕೊನೆಯಿಲ್ಲ, ತನ್ನ ಸ್ವಾರ್ಥಕ್ಕಾಗಿ ಜೀವ ಸಂಕುಲಗಳು ನಶಿಸಿ ಹೋಗುತ್ತಿದೆ. ಅದರಲ್ಲಿ ಸಾಧು ಜೀವಿಗಳೆನಿಸಿಕೊಂಡಿರುವ ಜೀಬ್ರಾಗಳು ಅವನತಿಯ ಅಂಚಿನಲ್ಲಿದೆ. ಈ ಜೀಬ್ರಾಗಳು ಹೆಚ್ಚಾಗಿ ಆಫ್ರಿಕನ್ ಖಂಡ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ ಮರುಭೂಮಿ ಪ್ರದೇಶ, ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಕಳೆದ ಮೂರು ದಶಕಗಳಲ್ಲಿ ಜೀಬ್ರಾಗಳನ್ನು ಚರ್ಮಕ್ಕಾಗಿ ಹಾಗೂ ಮಾಂಸಕ್ಕಾಗಿ ಬೇಟೆಯಾಡಿದ ಪರಿಣಾಮದಿಂದ ಜೀಬ್ರಾ ಸಂತತಿಗಳು ದೊಡ್ಡ ಪ್ರಮಾಣದಲ್ಲಿ ನಶಿಸಿ ಹೋಗಿವೆ. ಹೀಗಾಗಿ ಈ ಜೀಬ್ರಾಗಳ ಸಂತತಿಯೂ ಸರಿಸುಮಾರು 54% ರಷ್ಟು ಕಡಿಮೆಯಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಜೀಬ್ರಾ ದಿನದ ಇತಿಹಾಸ

ಸ್ಮಿತ್ಸೋನಿಯನ್ ರಾಷ್ಟ್ರೀಯ ಮೃಗಾಲಯ ಹಾಗೂ ಕನ್ಸರ್ವೇಶನ್ ಬಯಾಲಜಿ ಇನ್‌ಸ್ಟಿಟ್ಯೂಟ್‌ ನಂತಹ ಸಂರಕ್ಷಣಾ ಸಂಸ್ಥೆಗಳ ಒಕ್ಕೂಟವು ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸಲು ಆರಂಭಿಸಿತು. ಅಂದಿನಿಂದ ಪ್ರತಿ ವರ್ಷ ಜನವರಿ 31 ರಂದು ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ನಿಂಬೆಯೊಂದಿಗೆ ಬೀಟ್ರೂಟ್ ಜ್ಯೂಸ್: ಇದನ್ನು ಕುಡಿಯುವುದರಿಂದ ಹಲವು ಆರೋಗ್ಯ ಪ್ರಯೋಜನ

ಅಂತಾರಾಷ್ಟ್ರೀಯ ಜೀಬ್ರಾ ದಿನದ ಮಹತ್ವ ಹಾಗೂ ಆಚರಣೆ

ಜೀಬ್ರಾಗಳ ಕ್ಷೀಣಿಸುತ್ತಿರುವ ಜನಸಂಖ್ಯೆಯ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮತ್ತು ಅವುಗಳ ಸಂರಕ್ಷಣೆಗಾಗಿ ಪ್ರಯತ್ನ ಮಾಡುವುದು ಈ ದಿನದ ಉದ್ದೇಶವಾಗಿದೆ. ಸಾಧುಜೀವಿಗಳಾಗಿರುವ ಜೀಬ್ರಾಗಳ ಸಂತತಿ ಸಂರಕ್ಷಣೆಗಾಗಿ ಈ ದಿನವೂ ಮಹತ್ವದ್ದಾಗಿದೆ. ಪ್ರಾಣಿಗಳನ್ನು ರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನಕ್ಕೆ ಹೇಗೆ ಸಹಕಾರಿಯಾಗಲಿದೆ ಎನ್ನುವ ಕುರಿತಾಗಿ ಅರಿವು ಮೂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಜಾಗೃತಿ ಕಾರ್ಯಕ್ರಮ ಸೇರಿದಂತೆ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್