AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಕಪ್ಪೆಗಳು ಮನೆಯೊಳಗೆ ಬಂದ್ರೆ ಅದೃಷ್ಟ ಖುಲಾಯಿಸುತ್ತಾ?

ಮಳೆಗಾಲ ಆರಂಭವಾಗುತ್ತಿದ್ದಂತೆ ವಟ ವಟ ಎನ್ನುವ ತಾವಿದ್ದೇವೆ ಎಂದು ನೆನಪಿಸುತ್ತೆ ಈ ಕಪ್ಪೆಗಳು. ಮಳೆಗಾಲದ ಅನುಭವ ನೀಡುವ ಈ ಕಪ್ಪೆಗಳು ಹಾಗೂ ಹಳ್ಳ ಕೊಳ್ಳಗಳಲ್ಲಿ ಮಾತ್ರವಲ್ಲದೇ ಮನೆಯೊಳಗೆ ಮೆಲ್ಲನೆ ಎಂಟ್ರಿ ಕೊಟ್ಟು ಮೂಲೆಯಲ್ಲಿ ಅವಿತುಕೊಳ್ಳುವುದಿದೆ. ಆದರೆ ಮನೆ ಯೊಳಗೆ ಕಪ್ಪೆ ಏನಾದ್ರು ಕಾಣಿಸಿಕೊಂಡರೆ ಅದನ್ನು ಹೊರಗೆ ಹಾಕದೇ ಇದ್ದರೆ ಕೆಲವರಿಗೆ ಸಮಾಧಾನ ಅನ್ನೋದೇ ಇರಲ್ಲ. ಆದರೆ ಕಪ್ಪ ಮನೆಯೊಳಗೆ ಬರುವುದು ಅದೃಷ್ಟದ ಸಂಕೇತನಾ? ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಮಳೆಗಾಲದಲ್ಲಿ ಕಪ್ಪೆಗಳು ಮನೆಯೊಳಗೆ ಬಂದ್ರೆ ಅದೃಷ್ಟ ಖುಲಾಯಿಸುತ್ತಾ?
ಮಳೆಗಾಲದಲ್ಲಿ ಕಪ್ಪೆಗಳು ಮನೆಯೊಳಗೆ ಬಂದ್ರೆ ಅದೃಷ್ಟ
ಸಾಯಿನಂದಾ
| Edited By: |

Updated on:Jun 17, 2025 | 5:19 PM

Share

ಮಳೆಗಾಲ (rainy season) ಶುರುವಾಗುತ್ತಿದ್ದಂತೆ ಈ ಕಪ್ಪೆಗಳ ವಟಗುಟ್ಟುವಿಕೆ ಶುರುವಾಗುತ್ತದೆ. ಜೋರಾದ ಸುರಿದ ಮಳೆಗೆ ಬಾವಿ, ನದಿ, ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದಂತೆ ಅಡಗಿ ಕುಳಿತ ಕಪ್ಪೆಗಳು ನಾವಿದ್ದೇವೆ ಎಂದು ನೆನಪಿಸುವಂತೆ ಕಣ್ಣ ಮುಂದೆ ಕಾಣಿಸಿಕೊಳ್ಳುತ್ತವೆ. ಮಳೆಗಾಲದಲ್ಲಿ ಈ ಕಪ್ಪೆ (frog) ಗಳು ಮನೆಯೊಳಗೆ ಎಂಟ್ರಿ ಕೊಡುವುದಿದೆ. ದೊಡ್ಡ ಕಪ್ಪೆಗಳು ಮನೆಯ ಮೂಲೆಗಳಲ್ಲಿ ಅವಿತು ಕುಳಿತು ಕೊಂಡರೆ ಸಣ್ಣ ಸಣ್ಣ ಕಪ್ಪೆಗಳು ಗೋಡೆಗಳ ಮೇಲೆ ಜಿಗಿಯುತ್ತ ಕಣ್ಣಿಗೆ ಬೀಳುತ್ತದೆ. ಕೆಲವರು ಈ ಕಪ್ಪೆಗಳು ಕಂಡೊಡನೆ ಸಾಯಿಸುತ್ತಾರೆ. ಮನೆಯೊಳಗೆ ಕಪ್ಪೆಗಳು ಎಂಟ್ರಿ ಕೊಟ್ಟರೆ ಅದೃಷ್ಟ (good luck) ಖುಲಾಯಿಸುತ್ತಾ? ಈ ಕುರಿತಾದ ಕುತೂಹಲಕಾರಿ ಸಂಗತಿಗಳನ್ನು ನೀವು ತಿಳಿದುಕೊಳ್ಳಿ.

ಮನೆಯೊಳಗೆ ಕಪ್ಪೆ ಎಂಟ್ರಿ ಕೊಟ್ಟರೆ ಅದನ್ನು ಎತ್ತಿ ಹೊರಗೆ ಚೆಲ್ಲುವವರೇ ಹೆಚ್ಚು. ಆದರೆ ಹಿಂದೂ ಧರ್ಮ ಹಾಗೂ ಶಾಸ್ತ್ರದ ಪ್ರಕಾರವಾಗಿ ಕಪ್ಪೆ ಮಂಗಳಕರವಂತೆ. ಮನೆಯೊಳಗೆ ಕಪ್ಪೆ ಏನಾದ್ರು ಬಂತೆಂದರೆ ಅದು ಸಮೃದ್ಧಿ, ಪ್ರಗತಿ ಹಾಗೂ ಆರೋಗ್ಯವನ್ನು ಹೊತ್ತು ತರುತ್ತದೆ ಎನ್ನಲಾಗಿದೆ.  ಕಪ್ಪೆ ಬಂದರೆ ಸ್ವಚ್ಛತೆಯ ಕಡೆಗೆ ಹೆಚ್ಚು ಗಮನ ಹರಿಸುವುದು ಮುಖ್ಯ.

ಇದನ್ನೂ ಓದಿ
Image
ಬೆಕ್ಕು ಆದಾಗೇ ನಿಮ್ಮ ಮನೆಗೆ ಬಂದ್ರೆ ಏನರ್ಥ, ಅದೃಷ್ಟ ಕೈ ಹಿಡಿಯುತ್ತಾ?
Image
ಪರ್ಸ್‌ನಲ್ಲಿ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?
Image
ವರ್ಷಕ್ಕೊಮ್ಮೆ ಮಾತ್ರ ಮೊಟ್ಟೆ ಇಡಲು ಹೊರಗೆ ಬರುತ್ತೆ ಈ ಮಹಾಬಲಿ ಕಪ್ಪೆ
Image
ಪಾರಿವಾಳದ ಗರಿಯನ್ನು ಮನೆಯಲ್ಲಿಟ್ಟರೆ ಏನಾಗುತ್ತೆ ಗೊತ್ತಾ?

Frog Rainy Season

ಒಂದು ವೇಳೆ ಕಪ್ಪೆ ಮನೆಯೊಳಗೆ  ಬಂದ ಮೇಲೆ ನಿಮ್ಮ ಮನೆ ಸ್ವಚ್ಛವಾಗಿಲ್ಲದಿದ್ದರೆ ಮನೆಗೆ ದರಿದ್ರ ಲಕ್ಷ್ಮಿಯನ್ನು ಆಕರ್ಷಿಸುತ್ತದೆ. ಹೀಗಾದಾಗ ಮನೆಯಲ್ಲಿ ಸಮೃದ್ಧಿ ನೆಲೆಸುವುದಿಲ್ಲ. ಹಣವು ನೀರಿನಂತೆ ಹರಿದು ಹೋಗುತ್ತದೆ ಎನ್ನಲಾಗಿದೆ. ಅದೃಷ್ಟದ ಸಂಕೇತವೆಂದು ಪರಿಗಣಿಸುವ ಈ ಕಪ್ಪೆಯೂ ಮನೆಯ ಹೊರಭಾಗದಲ್ಲಿ ಏಕಾಏಕಿ ನೋಡಿದರೆ ಆದರಿಂದಲೂ ಸಕಾರಾತ್ಮಕ ಬದಲಾವಣೆಗಳಾಗುತ್ತದೆಯಂತೆ. ನಿಮ್ಮ ಮುಂಭಾಗದಲ್ಲಿ ಕಪ್ಪೆಗಳು ಹಾರಿ ಹೋದರೆ ನಿಮ್ಮ ಜೀವನದಲ್ಲಿ ಸಮೃದ್ಧಿಯನ್ನು ತರುತ್ತದೆ ಎಂದು ಸೂಚಿಸುತ್ತದೆ.

Frog On Tree

ಮನೆಯಲ್ಲಿ ಕಪ್ಪೆ ವಾಸವಿದ್ದರೆ ಮನೆಯಲ್ಲಿ ಏಳಿಗೆಯನ್ನು ಕಾಣಬಹುದು. ಸಂಬಂಧಗಳು ಗಟ್ಟಿಗೊಳ್ಳುತ್ತದೆ ಹಾಗೂ ಉತ್ತಮ ಸ್ನೇಹ ಸಂಬಂಧಗಳು ಬೆಳೆಯುತ್ತದೆ. ಸದಾ ಮನೆಯಲ್ಲಿ ಸಂಪತ್ತು ತುಂಬಿರಲು ಮನೆಯಲ್ಲಿ ಕಪ್ಪೆಯ ವಿಗ್ರಹವನ್ನು ಇಡುತ್ತಾರೆ. ಹೀಗಾಗಿ ಮನೆಯೊಳಗೆ ಕಪ್ಪೆ ಬಂತೆಂದು ಓಡಿಸುವ ಮುನ್ನ ಅದೃಷ್ಟ ಸಂಕೇತ ಎನ್ನುವುದನ್ನು ಮರೆಯಬೇಡಿ.

ಇದನ್ನೂ ಓದಿ :ಬೆಕ್ಕು ಆದಾಗೇ ನಿಮ್ಮ ಮನೆಗೆ ಕಾಲಿಟ್ರೆ ಅದೃಷ್ಟವೋ ಅದೃಷ್ಟ, ಹೇಗೆ ಗೊತ್ತಾ?

Frog

ಅಷ್ಟೇ ಅಲ್ಲದೇ, ಮನೆಯಲ್ಲಿ ಕಪ್ಪೆಯಿದ್ರೆ ರೋಗಗಳು ಹತ್ತಿರವೇ ಸುಳಿಯುವುದಿಲ್ಲ ಎನ್ನಲಾಗಿದೆ. ಕಪ್ಪೆ ರೋಗದಿಂದ ನಮ್ಮನ್ನು ರಕ್ಷಿಸುವುದರಿಂದ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುತ್ತವೆ.   ಹೀಗಾಗಿ ಮಳೆಗಾಲದಲ್ಲಿ ಕಪ್ಪೆಗಳು ಮನೆಯೊಳಗೆ ಬರುತ್ತವೆ ಎಂದು ಟೆನ್ಶನ್ ಮಾಡಿಕೊಳ್ಳುವ ಇದರಿಂದ ಇರುವ ಪ್ರಯೋಜನಗಳ ಬಗ್ಗೆ ತಿಳಿದು ಖುಷಿ ಪಡಿ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Tue, 17 June 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!