Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಿನಲ್ಲಿ ನಡೆಯುವುದು ಒಳ್ಳೆಯದೇ? ನಡೆಯುವಾಗ ಈ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ಬರಿಗಾಲಿನಲ್ಲಿ ನಡೆಯುವುದು ಉತ್ತಮವೇ? ಅಥವಾ ಶೂ ಧರಿಕೊಂಡು ನಡೆಯುವುದು ಉತ್ತಮವೇ? ಯಾವುದು ಉತ್ತಮ ಎಂಬ ಪ್ರಶ್ನೆಗಳು ಮೂಡಿರಬಹುದು. ಬರಿಗಾಲಿನಲ್ಲಿ ನಡೆಯುವುದು ಕೆಲವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ, ಆದರೆ ಶೂಗಳು ರಕ್ಷಣೆ ನೀಡುತ್ತವೆ. ಆದರೆ ಯಾವುದು ಉತ್ತಮ..? ಈ ಬಗ್ಗೆ ಇಲ್ಲಿ ಮಾಹಿತಿ ನೀಡಿಲಾಗಿದೆ.

ಬರಿಗಾಲಿನಲ್ಲಿ ನಡೆಯುವುದು ಒಳ್ಳೆಯದೇ? ನಡೆಯುವಾಗ ಈ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 21, 2025 | 3:17 PM

ನಡಿಗೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಬಗ್ಗೆ ನಮಗೆ ತಿಳಿದಿರಬೇಕು. ಅದರಲ್ಲೂ ಬರಿಬರಿಗಾಲಿನಲ್ಲಿ ನಡೆಯುವುದು (walk barefoot) ಒಳ್ಳೆಯದೇ? ಎಂಬುದನ್ನು ಕೂಡ ಅರಿತುಕೊಳ್ಳಬೇಕು. ಬರಿಗಾಲಿನಲ್ಲಿ ನಡೆಯುವುದು ಉತ್ತಮವೇ? ಅಥವಾ ಪಾದರಕ್ಷೆಗಳನ್ನು ಧರಿಸುವುದು ಅಗತ್ಯವೇ? ಪ್ರಶ್ನೆ ಮೂಡಿರದೇ ಇರಬಹುದು. ಆದರೆ ಈ ಬಗ್ಗೆ ತಜ್ಞರು ಕೆಲವೊಂದು ಸಲಹೆಯನ್ನು ನೀಡಿದ್ದಾರೆ. ಅನೇಕರಿಗೆ ಬರಿಗಾಲಿನಲ್ಲಿ ನಡೆಯುವ ಅಭ್ಯಾಸ ಇದೆ. ಇದು ಉತ್ತಮವೇ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕೆಲವರಿಗೆ ಬರಿಗಾಲಿನಲ್ಲಿ ನಡೆಯುವುದು ಆರಾಮದಾಯಕವೆನಿಸುತ್ತದೆ. ಇನ್ನು ಕೆಲವರು ಶೂ ಧರಿಸುವುದು ಅಗತ್ಯ ಎಂದು ಭಾವಿಸುತ್ತಾರೆ. ಈ ವಿಷಯದಲ್ಲಿ ಒಂದೇ ಒಂದು ಸರಿಯಾದ ಉತ್ತರವಿಲ್ಲ. ಅದು ಪ್ರತಿಯೊಬ್ಬ ವ್ಯಕ್ತಿಯ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ಬರಿಗಾಲಿನಲ್ಲಿ ನಡೆಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬರಿಗಾಲಿನಲ್ಲಿ ನಡೆಯುವಾಗ ಪಾದಗಳ ಸ್ನಾಯುಗಳು ಸ್ವಾಭಾವಿಕವಾಗಿ ಚಲಿಸುತ್ತವೆ. ಇದು ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ನಮ್ಮ ಪಾದಗಳಲ್ಲಿರುವ ನರಗಳು ಮೆದುಳಿಗೆ ಪ್ರಮುಖ ಮಾಹಿತಿಯನ್ನು ಕಳುಹಿಸುತ್ತವೆ. ಬರಿಗಾಲಿನಲ್ಲಿ ನಡೆಯುವುದರಿಂದ ಈ ನರಗಳು ಸಕ್ರಿಯಗೊಳ್ಳುತ್ತವೆ ಮತ್ತು ಸಮತೋಲನ ಸುಧಾರಿಸುತ್ತದೆ. ನಡೆಯುವಾಗ ಸೊಂಟ ಮತ್ತು ಮೊಣಕಾಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ.

ಬರಿಗಾಲಿನಲ್ಲಿ ನಡೆಯುವುದು ಒಳ್ಳೆಯದಾದರೂ, ಕೆಲವು ಸಮಸ್ಯೆಗಳು ಉಂಟಾಗಬಹುದು. ಗಟ್ಟಿಯಾದ ಮೇಲ್ಮೈಗಳಲ್ಲಿ ಬಿಸಿಯಾದ, ಚೂಪಾದ ವಸ್ತುಗಳ ಮೇಲೆ ನಡೆಯುವುದರಿಂದ ಗಾಯಗಳು ಉಂಟಾಗಬಹುದು. ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲ ಬರಿಗಾಲಿನಲ್ಲಿ ನಡೆಯುವುದರಿಂದ ಪಾದಗಳ ಸೋಂಕು ಉಂಟಾಗುತ್ತದೆ. ದೇಹವು ಅದಕ್ಕೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಮೊದಲಿಗೆ ನೋವು ಅಥವಾ ಅಸ್ವಸ್ಥತೆ ಉಂಟಾಗಬಹುದು.

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ಪಾದಗಳನ್ನು ರಕ್ಷಿಸಲು ಶೂಗಳನ್ನು ತಯಾರಿಸಲಾಗುತ್ತದೆ. ಅವು ಪಾದಗಳನ್ನು ಚೂಪಾದ ವಸ್ತುಗಳು ಮತ್ತು ಬಿಸಿ ಮೇಲ್ಮೈಗಳಿಂದ ರಕ್ಷಿಸುತ್ತವೆ. ಬೂಟುಗಳಲ್ಲಿರುವ ಕಮಾನು ಬೆಂಬಲ, ಮೆತ್ತನೆ ಮತ್ತು ಆಘಾತ ಹೀರಿಕೊಳ್ಳುವಿಕೆಯು ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಗಟ್ಟಿಯಾದ ಮೇಲ್ಮೈಗಳಲ್ಲಿ ನಡೆಯುವಾಗ ಇವು ಉತ್ತಮ ರಕ್ಷಣೆ ನೀಡುತ್ತವೆ. ಶೂಗಳು ಪಾದಗಳಿಗೆ ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಪ್ರವೇಶಿಸುವುದನ್ನು ತಡೆಯುತ್ತವೆ.

ಇದನ್ನೂ ಓದಿ: ನಿಮ್ಮ ಬ್ಲಡ್ ಗ್ರೂಪ್ ನಲ್ಲಿ ಅಡಗಿದೆ ನಿಗೂಢ ವ್ಯಕ್ತಿತ್ವ

ಶೂಗಳನ್ನು ಬಳಸುವುದು ಒಳ್ಳೆಯದೇ ಆದರೂ, ಅವು ಪಾದದ ಸ್ನಾಯುಗಳನ್ನು ದುರ್ಬಲಗೊಳಿಸುತ್ತವೆ. ದೀರ್ಘಕಾಲದವರೆಗೆ ಶೂಗಳನ್ನು ಧರಿಸುವುದರಿಂದ ಸ್ನಾಯುಗಳು ಬಲ ಕಳೆದುಕೊಳ್ಳುತ್ತವೆ. ಹೈ ಹೀಲ್ಸ್‌ನಂತಹ ಸರಿಯಾಗಿ ಹೊಂದಿಕೊಳ್ಳದ ಬೂಟುಗಳು ಪಾದಗಳ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಮತ್ತು ಗಾಯಗಳಿಗೆ ಕಾರಣವಾಗಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Fri, 21 March 25

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ