AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranayama to stay Active: ಬದಲಾಗುತ್ತಿರುವ ಹವಾಮಾನದಿಂದ ಸೋಮಾರಿತನ ಹೆಚ್ಚಾಗುತ್ತಿದೆಯೇ? ಕ್ರಿಯಾಶೀಲವಾಗಿರಲು ಈ  ಪ್ರಾಣಾಯಾಮ ಸಹಕಾರಿ

ಪ್ರಸ್ತುತ ದಿನಗಳಲ್ಲಿ ಒಮ್ಮೆ ಮಳೆ, ಇನ್ನೊಮ್ಮೆ ಬಿಸಿಲು ಹೀಗೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ.  ವಾತಾವರಣದಲ್ಲಿನ ಈ ಬದಲಾವಣೆಯ ಕಾರಣದಿಂದಾಗಿ ಹೆಚ್ಚಿನ ಜನರು ಸೋಮಾರಿತನವನ್ನು ಅನುಭವಿಸುತ್ತಿದ್ದಾರೆ. ನೀವು ಕೂಡ ಈ ಸಮಯದಲ್ಲಿ ತುಂಬಾ ಸೋಮಾರಿತನವನ್ನು ಅನುಭವಿಸುತ್ತಿದ್ದರೆ, ನಿಮ್ಮನ್ನು ಸಕ್ರಿಯವಾಗಿ ಇರಿಸಿಕೊಳ್ಳಲು ಈ ಎರಡು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿ.

Pranayama to stay Active: ಬದಲಾಗುತ್ತಿರುವ ಹವಾಮಾನದಿಂದ ಸೋಮಾರಿತನ ಹೆಚ್ಚಾಗುತ್ತಿದೆಯೇ? ಕ್ರಿಯಾಶೀಲವಾಗಿರಲು ಈ  ಪ್ರಾಣಾಯಾಮ ಸಹಕಾರಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 12, 2023 | 3:04 PM

ಮಳೆಯಿಂದಾಗಿ ಮತ್ತೊಮ್ಮೆ ವಾತಾರಣ ಬದಲಾಗಿದೆ. ಮಳೆಗಾಲ ಬಂದಾಗಲೆಲ್ಲಾ ಹೆಚ್ಚಿನವರ ಮನಸ್ಥಿತಿ ಬದಲಾಗುತ್ತದೆ. ಹೆಚ್ಚಿನವರು ಈ ಸಮಯದಲ್ಲಿ ಕೆಲಸದಲ್ಲಿ ಜಡ ಮತ್ತು ಸೋಮಾರಿತನವನ್ನು ಅನುಭವಿಸಲು ಪ್ರಾರಂಭಿಸುತ್ತಾರೆ.  ಈ ಅವಧಿಯಲ್ಲಿ ಜನರ ಚಟುವಟಿಕೆಗಳು ಕಡಿಮೆಯಾಗುತ್ತದೆ. ಹೀಗಿರುವಾಗ ನಿಮ್ಮನ್ನು ನೀವು ಸಕ್ರಿಯಾವಾಗಿಟ್ಟುಕೊಳ್ಳುವುದು ತುಂಬಾ ಕಷ್ಟಕರವಾಗಿರುತ್ತದೆ. ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ ಆರೋಗ್ಯಕ್ಕೂ ಹಾನಿಯುಂಟಾಗಬಹುದು, ಅಂತಹ ಪರಿಸ್ಥಿತಿಯಲ್ಲಿ ಕೆಲವು ಸರಳ ಪ್ರಾಣಾಯಾಮವು ನಿಮಗೆ ಸಕ್ರಿಯವಾಗಿರಲು ಸಹಾಯ ಮಾಡುತ್ತದೆ. ನಿಮ್ಮನ್ನು ಕ್ರಿಯಾಶೀಲರನ್ನಾಗಿ ಮಾಡುವ ಎರಡು ಪ್ರಾಣಾಯಾಮ ಭಂಗಿಗಳ ಬಗ್ಗೆ ತಿಳಿದುಕೊಳ್ಳಿ.

ಸೋಮಾರಿತನವನ್ನು ಹೋಗಲಾಡಿಸಲು ಸಹಕಾರಿ ಈ ಪ್ರಾಣಾಯಾಮಗಳು:

ನಾಡಿಶೋಧನ ಪ್ರಾಣಾಯಾಮ:

ಈ ಪ್ರಾಣಾಯಾಮವು ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ನರಮಂಡಲವನ್ನು ಶಾಂತಗೊಳಿಸುತ್ತದೆ.  ಇದರ ನಿಯಮಿತ ಅಭ್ಯಾಸವು ಅಧಿಕ ರಕ್ತದೊತ್ತಡ, ನಿದ್ರಾಹೀನತೆ, ಮೈಗ್ರೇನ್, ಒತ್ತಡ, ಕೋಪ ಮತ್ತು ಮಾನಸಿಕ ಅಸ್ವಸ್ಥತೆಗಳಿಗೆ ಪರಿಹಾರ ನೀಡುತ್ತದೆ. ಅಲ್ಲದೆ ಇದು ತಾಳ್ಮೆ, ಮಾನಸಿಕ ಶಾಂತಿ, ನಿರ್ಧಾರ ತೆಗೆದುಕೊಳ್ಳುವ ಸಾಮಾರ್ಥ್ಯ ಮತ್ತು ಏಕಾಗ್ರತೆಯನ್ನು ಬೆಳೆಸಲು ಸಹಕಾರಿ.
ಈ ಪ್ರಾಣಾಯಾಮವನ್ನು ಮಾಡಲು ನೀವು ನಿಮ್ಮ ಬೆನ್ನುಮೂಳೆಯನ್ನು ನೇರವಾಗಿ ಮತ್ತು ಭುಜಗಳನ್ನು ಸಡಿಲಗೊಳಿಸಿ ಪದ್ಮಾಸನ ಸ್ಥಿತಿಯಲ್ಲಿ  ಕುಳಿತುಕೊಳ್ಳಿ. ಈಗ ನಿಮ್ಮ ಬಲ ಮೂಗಿನ ಹೊಳ್ಳೆಯನ್ನು ನಿಮ್ಮ ಬಲ ಹೆಬ್ಬೆರಳಿನಿಂದ ಮುಚ್ಚಿ ಮತ್ತು ಎಡ ಮೂಗಿನ ಹೊಳ್ಳೆಯ ಮೂಲಕ ಆಳವಾದ ಉಸಿರನ್ನು ತೆಗೆದುಕೊಳ್ಳಿ. ನಂತರ ಬಲ ಮೂಗಿನಿಂದ ನಿಧಾನಕ್ಕೆ ಉಸಿರನ್ನು ಬಿಡಿ. ನಂತರ ನಿಮ್ಮ ಬಲಗೈಯ ಉಂಗುರ ಹಾಕುವ ಬೆರಳಿನಿಂದ ನಿಮ್ಮ ಎಡ ಮೂಗಿನ ಹೊಳ್ಳೆಯನ್ನು ಮುಚ್ಚಿ, ಬಲ ಮೂಗಿನ ಹೊಳ್ಳೆಯ ಮೂಲಕ ಆಳವಾದ ಉಸಿರನ್ನು ತೆಗೆದುಕೊಳ್ಳಿ.  ಹಾಗೂ ಎಡ ಮೂಗಿನ ಮೂಲಕ ಉಸಿರನ್ನು ಬಿಡಿ. ಈ ಪ್ರಾಣಾಯಾಮವನ್ನು 4 ರಿಂದ 5 ನಿಮಿಷಗಳ ಕಾಲ ಮಾಡಿ. ಇದು ನಿಮ್ಮ ಸೋಮಾರಿತನವನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

ಕಪಾಲಭಾತಿ ಪ್ರಾಣಾಯಾಮ:

ಈ ಪ್ರಾಣಾಯಾಮವು ದೇಹದಿಂದ ವಿಷವನ್ನು ಹೊರಹಾಕಲು ಸಹಕಾರಿಯಾಗಿದೆ. ಅಲ್ಲದೆ ಉಸಿರಾಟವನ್ನು ಸರಾಗಗೊಳಿಸಲು ಮತ್ತು ದೇಹವನ್ನು ಶಕ್ತಿಯುತಗೊಳಿಸಲು, ರಕ್ತವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಈ ಪ್ರಾಣಾಯಾಮವು ಆಯಾಸವನ್ನು ಕಡಿಮೆ ಮಾಡಿ ದೇಹದವನ್ನು ಕ್ರಿಯಾಶೀಲವಾಗಿಡಲು ಸಹಾಯ ಮಾಡುತ್ತದೆ.
ಈ ಪ್ರಾಣಾಯಾಮವನ್ನು ಮಾಡಲು  ಪದ್ಮಾಸನ ಸ್ಥಿತಿಯಲ್ಲಿ ಕುಳಿತುಕೊಂಡು ನಂತರ ನಿಮ್ಮ ಕೈಗಳನ್ನು ನಿಮ್ಮ ಮೊಣಕಾಲುಗಳ ಮೇಲೆ ನಿಮ್ಮ ಆಯ್ಕೆಯ ಭಂಗಿಯಲ್ಲಿ ಇರಿಸಿ. ಈಗ ಆಳವಾದ ಉಸಿರನ್ನು ತೆಗೆದುಕೊಂಡು ಉಸಿರನ್ನು ನಿಧಾನಕ್ಕೆ ಬಿಡಿ. ಇದನ್ನು ಕನಿಷ್ಟ 20 ರಿಂದ 30 ಬಾರಿ ಪುನರಾವರ್ತಿಸಿ.  ಈ ಪ್ರಾಣಾಯಾಮವು ನಿಮ್ಮ ಸೋಮಾರಿತನವನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಹೀಗೆ ನಿಯಮಿತ ಪ್ರಾಣಾಯಾಮ ಮತ್ತು ಯೋಗಾಭ್ಯಾಸವು ಸೋಮಾರಿತನವನ್ನು ಹೋಗಲಾಡಿಸುವುದು ಮಾತ್ರವಲ್ಲದೆ ಹಲವು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:02 pm, Tue, 12 September 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು