AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raw Mangoes: ಮಾವಿನಕಾಯಿ ಆರೋಗ್ಯಕರವೇ? ಹಸಿ ಮಾವಿನಕಾಯಿ ಚಟ್ನಿಯ ಊಟಕ್ಕೆ ಸೂಪರ್​​​

ಮಾವಿನ ಹಣ್ಣುಗಳು ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬೇಸಿಗೆಯಲ್ಲಿ ಅತಿಯಾಗಿ ಲಭ್ಯವಿರುವ ಹಸಿ ಮಾವಿನಕಾಯಿಯಿಂದ, ಮಾವಿನಕಾಯಿ ಪನ್ನಾದಂತಹ ಪಾನೀಯ, ಮಾವಿನ ಉಪ್ಪಿನಕಾಯಿ, ಸಲಾಡ್ ಇತ್ಯಾದಿಗಳನ್ನು ತಯಾರಿಸುತ್ತಾರೆ. ಹಾಗೆಯೇ ಮಾವಿನಕಾಯಿಯನ್ನು ಬಳಸಿ ಸುಲಭವಾಗಿ ಚಟ್ನಿಯನ್ನು ತಯಾರಿಸಬಹುದು. ಪೌಷ್ಟಿಕತಜ್ಞೆ ಪೂಜಾ ಮಖಿಜಾ ಅವರು ಇತ್ತೀಚಿಗೆ ಆರೋಗ್ಯಕರ ಹಸಿ ಮಾವಿನಕಾಯಿ ಚಟ್ನಿಯ ಪಾಕವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ.

Raw Mangoes: ಮಾವಿನಕಾಯಿ ಆರೋಗ್ಯಕರವೇ? ಹಸಿ ಮಾವಿನಕಾಯಿ ಚಟ್ನಿಯ ಊಟಕ್ಕೆ ಸೂಪರ್​​​
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: May 03, 2023 | 4:11 PM

Share

ನಮ್ಮಲ್ಲಿ ಅನೇಕ ಜನರು ಬೇಸಿಗೆಯಲ್ಲಿ ಮಾವಿನ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಪಕ್ವವಾದ ಮಾವಿನಹಣ್ಣಿನ ಹೊರತಾಗಿ, ಹಸಿ ಮಾವು ಕೂಡಾ ತಿನ್ನಲು ರುಚಿಕರವಾಗಿರುತ್ತದೆ. ಮಾವಿನಕಾಯಿಯನ್ನು ಸವಿಯಲು ಹಲವು ಮಾರ್ಗಗಳಿವೆ. ಕೆಲವರು ಮಾವಿನಕಾಯಿಯನ್ನು ತುಂಡರಿಸಿ ಉಪ್ಪು, ಮೆಣಸಿನ ಪುಡಿಯೊಂದಿಗೆ ಅದನ್ನು ಮಿಶ್ರಣ ಮಾಡಿ ತಿನ್ನಲು ಇಷ್ಟಪಡುತ್ತಾರೆ. ಇನ್ನು ಕೆಲವರು ಬೆರೆ ಬೇರೆ ಪ್ರಾದೇಶಿಕ ಪಾಕವಿಧಾನಗಳನ್ನು ತಯಾರಿಸಲು ಬಳಸುತ್ತಾರೆ. ಇದರ ಹೊರತಾಗಿ ನೀವು ಮಾವಿನಕಾಯಿಯಿಂದ ತ್ವರಿತ ಮತ್ತು ಸುಲಭ ಪಾಕವಿಧಾನವನ್ನು ಹುಡುಕುತ್ತಿದ್ದರೆ, ಚಟ್ನಿಯನ್ನು ಸುಲಭವಾಗಿ ತಯಾರಿಸಬಹುದು. ಇದು ಊಟದೊಂದಿಗೆ ಸವಿಯಲು ಉತ್ತಮವಾಗಿರುತ್ತದೆ. ಸೆಲೆಬ್ರಿಟಿ ಪೌಷ್ಟಿಕತಜ್ಞೆ ಪೂಜಾ ಮಖಿಜಾ ಇತ್ತೀಚಿಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರುಚಿಕರವಾದ ಹಸಿ ಮಾವಿನಕಾಯಿ ಚಟ್ನಿಯ ಪಾಕ ವಿಧಾನವನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ವಿಟಮಿನ್ ಎ ಮತ್ತು ಸಿ ಯಿಂದ ಸಮೃದ್ಧವಾಗಿರುವ ಹಸಿಮಾವಿನಕಾಯಿ ಹಲವು ಆರೋಗ್ಯ ಪ್ರಯೋಜನಗಳಿಂದ ಕೂಡಿದೆ.

ಮಾವಿನಕಾಯಿ ಆರೋಗ್ಯಕರವೇ? ಹಸಿ ಮಾವಿನಕಾಯಿಯ ಪ್ರಯೋಜನಗಳು:

ವಿಟಮಿನ್ ಸಿ ಯಿಂದ ಸಮೃದ್ಧವಾಗಿದೆ: ಹಸಿ ಮಾವಿನಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಅದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಆರೋಗ್ಯಕರ ಚರ್ಮವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ: ಮಾವಿನಕಾಯಿ ಜೀರ್ಣಕಾರಿ ರಸದ ಸ್ರವಿಸುವಿಕೆಯನ್ನು ಸುಧಾರಿಸುತ್ತದೆ. ಅಜೀರ್ಣ, ಮಲಬದ್ಧತೆ, ಅತಿಸಾರ ಮುಂತಾದ ಹೊಟ್ಟೆ ಸಂಬಂಧಿ ಕಾಯಿಲೆಯನ್ನು ಗುಣಪಡಿಸಲು ಸಹಾಯಕವಾಗಿದೆ.

ಹೃದಯಕ್ಕೆ ಒಳ್ಳೆಯದು: ಮಾವಿನಕಾಯಿ ನಿಯಾಸಿನ್ ಅಂಶವನ್ನು ಹೊಂದಿರುತ್ತದೆ. ಇದು ಉತ್ತಮ ಆರೋಗ್ಯಕರ ಕೊಲೆಸ್ಟಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಒಟ್ಟಾರೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ:Mangoes Benefits: ತಿನ್ನುವ ಮೊದಲು ಮಾವಿನಹಣ್ಣುಗಳನ್ನು ನೆನೆಸುವುದು ಮುಖ್ಯವೇ? ತಜ್ಞರು ಸಲಹೆ ಇಲ್ಲಿದೆ

ಶಾಖದ ಬಳಲಿಕೆಯನ್ನು ತಡೆಯುತ್ತದೆ: ಬೇಸಿಗೆಯ ಶಾಖದ ಬಳಲಿಕೆ ಮತ್ತು ಸೂರ್ಯನ ಶಾಖದ ಬೇಗೆಯಿಂದ ಅಪಾಯವಿರುವವರಿಗೆ ಹಸಿಮಾವಿನಕಾಯಿಯ ರಸವನ್ನು ಸೇವಿಸಲು ಶಿಫಾರಸು ಮಾಡಲಾಗುತ್ತದೆ. ಇದು ದೇಹವನ್ನು ನೈಸರ್ಗಿಕವಾಗಿ ನೀರಿನಾಂಶಕ್ಕೆ ಸಹಾಯ ಮಾಡುತ್ತದೆ.

ತೂಕನಷ್ಟಕ್ಕೆ ಸಹಕಾರಿ: ಹಸಿಮಾವು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಮತ್ತು ಇದರಲ್ಲಿ ಫೈಬರ್ ಅಂಶ ಹೆಚ್ಚಿರುತ್ತದೆ. ಇದು ನಿಮ್ಮನ್ನು ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಮತ್ತು ಚಯಾಪಚಯವನ್ನು ಹೆಚ್ಚಿಸಲು ಸಹಾಯಕವಾಗಿದೆ. ನಿಮ್ಮ ತೂಕನಷ್ಟದ ಆಹಾರ ಕ್ರಮಕ್ಕೆ ಇದು ಉತ್ತಮ ಆಯ್ಕೆಯಾಗಿದೆ.

ಮಾವಿನಕಾಯಿ ಚಟ್ನಿ ಪಾಕವಿಧಾನ:

ಒಂದು ಹಸಿ ಮಾವಿನಕಾಯಿಯನ್ನು ತೆಗೆದುಕೊಂದು ಅದನ್ನು ಚೆನ್ನಾಗಿ ತೊಳೆದು, ಅದರ ಸಿಪ್ಪೆ ಸುಳಿದು ತೆಳುವಾದ ಹೋಳುಗಳನ್ನಾಗಿ ಕತ್ತರಿಸಿ. ನಂತರ ಇದನ್ನು ತಣ್ಣೀರಿನ ಬಟ್ಟಿನಲ್ಲಿ ಸುಮಾರು 15 ರಿಂದ 20 ನಿಮಿಷಗಳ ಕಾಲ ಇರಿಸಿ. ನಂತರ ಹಸಿ ಮೆಣಸಿನಕಾಯಿ ಮತ್ತು ಒಣ ಕಾಶ್ಮೀರಿ ಮೆಣಸಿನಕಾಯಿಯ ಒಗ್ಗರಣೆ ತಯಾರಿಸಿ, ಈ ಮಿಶ್ರಣವನ್ನು ಒಂದು ಮಿಕ್ಸಿ ಜಾರ್​​ಗೆ ಸೇರಿಸಿ. ಮುಂದೆ ಸ್ವಲ್ಪ ಹೆಚ್ಚಿದ ಈರುಳ್ಳಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಅದೇ ಮಿಕ್ಸಿ ಜಾರ್​​​ಗೆ ಸೇರಿಸಿ. ಬಳಿಕ ಬೆಳ್ಳುಳ್ಳಿ, ಲವಂಗ, ತೆಂಗಿನಕಾಯಿ ತುರಿ, ಕರಿಬೇವಿನ ಎಲೆಗಳನ್ನು ಅದಕ್ಕೆ ಸೇರಿಸಿಕೊಳ್ಳಿ. ಕೊನೆಗೆ ನೆನೆಸಿದ ಹಸಿ ಮಾವಿನ ಹೋಳುಗಳನ್ನು ಜಾರ್​​ಗೆ ಸೇರಿಸಿ, ಚೆನ್ನಾಗಿ ರುಬ್ಬಿ ನಯವಾದ ಚಟ್ನಿಯನ್ನು ತಯಾರಿಸಿಕೊಳ್ಳಿ. ಈ ಮಾವಿನಕಾಯಿ ಚಟ್ನಿ ಊಟದ ಜೊತೆ ಸವಿಯಲು ಉತ್ತಮವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ