AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಮೇಲಿನ ಒತ್ತಡವೇ ಹೃದಯಾಘಾತಕ್ಕೆ ಕಾರಣವಾಗುತ್ತಿದೆಯೇ? ಹೆತ್ತವರು ಈ ಬಗ್ಗೆ ಗಮನ ಕೊಡಿ

ಇತ್ತೀಚೆಗಿನ ದಿನಗಳಲ್ಲಿ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿಯಾಗುವ ಬದಲಾವಣೆಗಳು ಅನೇಕ ಆರೋಗ್ಯ ಸಮಸ್ಯೆಗಳು ಬಾಧಿಸುತ್ತಿದೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಗೇನು ಕೊರತೆಯಿಲ್ಲ. ಈ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಿದ್ದು, ಮಕ್ಕಳು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತಕ್ಕೆ ಕಾರಣಗಳು ಹಲವಾದರೂ ಪೋಷಕರು ಹೆಚ್ಚು ಜಾಗ್ರತೆ ವಹಿಸುವುದು ಅಗತ್ಯ.

ಮಕ್ಕಳ ಮೇಲಿನ ಒತ್ತಡವೇ ಹೃದಯಾಘಾತಕ್ಕೆ ಕಾರಣವಾಗುತ್ತಿದೆಯೇ? ಹೆತ್ತವರು ಈ ಬಗ್ಗೆ ಗಮನ ಕೊಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 16, 2024 | 6:06 PM

Share

ಕಳೆದ ಮೂರು ನಾಲ್ಕು ವರ್ಷಗಳಿಂದಿಚೆಗೆ ಗಟ್ಟಿಮುಟ್ಟಾಗಿರುವ ಆರೋಗ್ಯವಂತರೂ ಕೂಡ ಏಕಾಏಕಿ ಹೃದಯಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಈ ಹಿಂದೆ ವಯಸ್ಸಾದವರಲ್ಲಿ ಅಥವಾ ಮಧ್ಯ ವಯಸ್ಕರಲ್ಲಿ ಈ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿತ್ತು. ಆದರೆ ಇದೀಗ ಹಿರಿಯರು ಮಾತ್ರವಲ್ಲ, ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು, ಇದು ಹೆತ್ತವರ ಆತಂಕಕ್ಕೆ ಕಾರಣವಾಗಿದೆ.

ಮಕ್ಕಳಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಇವು

* ಆಹಾರ ಕ್ರಮದಲ್ಲಿನ ಬದಲಾವಣೆ: ಇತ್ತೀಚೆಗಿನ ದಿನಗಳಲ್ಲಿ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮಕ್ಕಳ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಗಳು. ಜಂಕ್‌ಫುಡ್‌, ಬೇಕರಿ ಫುಡ್‌ ಗಳ ಅತಿಯಾದ ಸೇವನೆಯಿಂದಾಗಿ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ.

* ದೈಹಿಕ ವ್ಯಾಯಾಮದ ಕೊರತೆ : ಮಕ್ಕಳು ಹೆಚ್ಚಾಗಿ ಮೊಬೈಲ್‌ ಗೇಮ್‌ಗಳನ್ನು ಹೆಚ್ಚಾಗಿ ಆಡುತ್ತಿದ್ದು, ದೈಹಿಕವಾಗಿ ಆಡುವ ಆಟಗಳಿಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ಮಕ್ಕಳಲ್ಲಿ ಅತಿಯಾದ ತೂಕದ ಸಮಸ್ಯೆಯು ಕಾಡುತ್ತಿದೆ. ಇದರಿಂದಾಗಿ ದೈಹಿಕ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತ ಸಮಸ್ಯೆಗಳನ್ನು ತಂದೊಡ್ದುತ್ತಿದೆ.

* ಹೃದಯದ ಮೇಲೆ ಒತ್ತಡ : ಶಿಶುವಿಗೆ ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾದಂತಹ ಕಾಯಿಲೆಗಳಿದ್ದರೆ, ಏಕಾಏಕಿ ಈ ರೋಗಲಕ್ಷಣಗಳು ಹೆಚ್ಚಾದಾಗ ಹೃದಯಕ್ಕೆ ಒತ್ತಡವಾಗಿ ಹೃದಯಾಘಾತವಾಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಹುಟ್ಟಿದ ಮಕ್ಕಳು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿದೆ.

* ಹುಟ್ಟುತ್ತಲೇ ಕಾಡುವ ಹೃದಯ ಸಂಬಂಧಿ ಕಾಯಿಲೆ : ಕೆಲವು ಮಕ್ಕಳಲ್ಲಿ ಹುಟ್ಟುತ್ತಲೇ ಹೃದಯ ಸಂಬಂಧಿ ಕಾಯಿಲೆಗಳು ಇರುತ್ತದೆ. ಉಸಿರಾಟ ತೊಂದರೆ, ಹೃದಯಕ್ಕೆ ಸರಿಯಾಗಿ ರಕ್ತಪೂರೈಕೆ ಆಗದೇ ಇರುವುದು ಈ ರೀತಿಯ ಕಾಯಿಲೆಯಿಂದಾಗಿ ಹೃದಯ ಸ್ತಂಭನ ಆಗುವ ಅಪಾಯದ ಮಟ್ಟ ಹೆಚ್ಚಿರುತ್ತದೆ.

* ಮಕ್ಕಳ ಮೇಲೆ ಪೋಷಕರ ಒತ್ತಡ : ಮಕ್ಕಳ ಮೇಲೆ ಪೋಷಕರು ಓದಿನ ವಿಚಾರದಲ್ಲಿ ಒತ್ತಡ ಹಾಕುತ್ತಿದ್ದಾರೆ. ತಮ್ಮ ಮಕ್ಕಳನ್ನು ಉಳಿದ ಮಕ್ಕಳೊಂದಿಗೆ ಹೋಲಿಕೆ ಮಾಡುವ ಪ್ರವೃತ್ತಿಯಿಂದ ಮಕ್ಕಳು ತೀರಾ ಕುಗ್ಗಿ ಹೋಗುತ್ತಿದ್ದಾರೆ. ಅದಲ್ಲದೇ ಹೆತ್ತವರ ನಡವಳಿಕೆಯಿಂದ ಮಕ್ಕಳು ಒತ್ತಡವನ್ನು ಅನುಭವಿಸುತ್ತಿದ್ದಾರೆ. ಇದು ಕೂಡ ಹೃದಯ ಸ್ತಂಭನವಾಗಲು ಕಾರಣವಾಗುತ್ತಿದೆ.

ಇದನ್ನೂ ಓದಿ: ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?

ಹೆತ್ತವರೇ ಮಕ್ಕಳ ವಿಚಾರದಲ್ಲಿ ಈ ಮುನ್ನೇಚ್ಚರಿಕೆಯ ಕ್ರಮಗಳನ್ನು ಅನುಸರಿಸಿ:

* ಮಕ್ಕಳಿಗೆ ಜಂಕ್‌ ಫ‌ುಡ್‌ ಗಳನ್ನು ಹೆಚ್ಚಾಗಿ ನೀಡಬೇಡಿ.

* ಮಕ್ಕಳನ್ನು ಮೊಬೈಲ್, ಕಂಪ್ಯೂಟರ್‌ನಿಂದ ದೂರವಿರಿಸುತ್ತ ಗಮನ ಕೊಡಿ.

* ದೈಹಿಕವಾಗಿ ಆಡುವ ಆಟಗಳತ್ತ ಮಕ್ಕಳಲ್ಲಿ ಒಲವು ಬೆಳೆಯುವತ್ತ ನೋಡಿಕೊಳ್ಳಿ.

* ಓದಿನ ವಿಷಯದಲ್ಲಿ ಅತಿಯಾದ ಒತ್ತಡ ಹಾಕಬೇಡಿ. ತಡರಾತ್ರಿಯವರೆಗೆ ಮಕ್ಕಳನ್ನು ಓದಿಸುವುದು, ಬರೆಸುವುದು ಅಭ್ಯಾಸವಿದ್ದರೆ ಆದಷ್ಟು ಕಡಿಮೆ ಮಾಡಿ.

* ದಿನಕ್ಕೆ 6 ರಿಂದ 7 ಗಂಟೆಗಳ ಕಾಲವಾದರೂ ಮಕ್ಕಳು ಚೆನ್ನಾಗಿ ನಿದ್ದೆ ಮಾಡಲಿ.

* ಮಕ್ಕಳಿಗೆ ಈಗಾಗಲೇ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಅಥವಾ ಉಸಿರಾಟದ ತೊಂದರೆಯಿದ್ದರೆ ವೈದ್ಯರಿಗೆ ತೋರಿಸಿ ಸರಿಯಾದ ಚಿಕಿತ್ಸೆ ನೀಡಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು