AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಿದ ಮೂಗಿನ ಸಮಸ್ಯೆಗೆ ಮನೆಮದ್ದು ರಾಮಬಾಣ, ಇಲ್ಲಿದೆ ನೋಡಿ

ಮಳೆಗಾಲ, ಚಳಿಗಾಲ ಹೀಗೆ ಯಾವುದೇ ಋತುವಿನಲ್ಲಾದರೂ ಶೀತದ ಸಮಸ್ಯೆ ನಮ್ಮನ್ನು ಭಾದಿಸುತ್ತದೆ. ಇದು ಎಷ್ಟು ಕಿರಿಕಿರಿ ಉಂಟುಮಾಡುತ್ತದೆ ಎಂದರೆ ಅನೇಕ ಸಂದರ್ಭದಲ್ಲಿ ಶೀತದ ಸಮಸ್ಯೆಯಿಂದ ಮೂಗು ಕಟ್ಟಿದಂತಾಗುತ್ತದೆ. ಇದರಿಂದ ಉಸಿರಾಡಲು ಕೂಡಾ ತೊಂದರೆಯಾಗುತ್ತದೆ. ಕಟ್ಟಿದ ಮೂಗಿನ ಸಮಸ್ಯೆಗೆ ನೀವು ಮನೆಯಲ್ಲಿಯೇ ಪರಿಹಾರ ಕಂಡುಕೊಳ್ಳಬಹುದು ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕಟ್ಟಿದ ಮೂಗಿನ ಸಮಸ್ಯೆಗೆ ಮನೆಮದ್ದು ರಾಮಬಾಣ, ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 05, 2023 | 6:42 PM

Share

ನಿರಂತರವಾಗಿ ಬದಲಾಗುತ್ತಿರುವ ಹವಾಮಾನ, ಅನಾರೋಗ್ಯಕರ ಜೀವನಶೈಲಿಯಿಂದಾಗಿ ಶೀತ ಮತ್ತು ಜ್ವರದ ಸಮಸ್ಯೆ ವರ್ಷವಿಡೀ ನಮ್ಮನ್ನು ಕಾಡುತ್ತಿರುತ್ತದೆ. ಅದರಲ್ಲೂ ಶೀತದಿಂದ ಮೂಗಿನಲ್ಲಿ ಸೋರುವಿಕೆ ಮತ್ತು ಮೂಗುಕಟ್ಟುವಿಕೆಯ ಸಮಸ್ಯೆಯೂ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ಕಾರಣದಿಂದ ರಾತ್ರಿಯಿಡಿ ಉಸಿರಾಡಲು ಸಾಧ್ಯವಾಗದೆ ನಿದ್ದೆಗೆಡಬೇಕಾಗುತ್ತದೆ. ಕಟ್ಟಿದ ಮೂಗಿನ ಸಮಸ್ಯೆಯನ್ನು ಸೈನುಟಿಸ್ ಎಂದು ಕರೆಯಲಾಗುತ್ತದೆ. ಮತ್ತು ಸಾಮಾನ್ಯ ಭಾಷೆಯಲ್ಲಿ ಇದನ್ನು ಸೈನಸ್ ಎಂದು ಕರೆಯಲಾಗುತ್ತದೆ.

ಮೂಗುಗಟ್ಟುವಿಕೆಯ ಸಮಸ್ಯೆಗೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ತಲೆಯ ನೆತ್ತಿಯ (ತಲೆ ಬುರುಡೆ) ನರಗಳಲ್ಲಿ ಲೆಕ್ಕವಿಲ್ಲದಷ್ಟು ಸೂಕ್ಷ್ಮ ರಂಧ್ರಗಳಿವೆ. ಅದರ ಮೂಲಕ ಆಮ್ಲಜನಕವು ಮೆದುಳನ್ನು ತಲುಪುತ್ತದೆ. ಶೀತ ಮತ್ತು ಜ್ವರದ ಸಂದರ್ಭದಲ್ಲಿ ಈ ರಂಧ್ರಗಳಲ್ಲಿ ಕಫವು ತುಂಬಿರುತ್ತದೆ. ಇದರಿಮದಾಗಿ ವ್ಯಕ್ತಿಯು ಉಸಿರಾಡಲು ಕಷ್ಟಪಡುತ್ತಾನೆ. ಮತ್ತು ತಲೆಭಾರವನ್ನು ಅನುಭವಿಸುತ್ತಾನೆ. ಈ ಸ್ಥಿತಿಯನ್ನು ಸುನೈಟಿಸ್ ಎಂದು ಕರೆಯುತ್ತಾರೆ. ಈ ಸಮಸ್ಯೆ ಒಬ್ಬ ವ್ಯಕ್ತಿಗೆ ಅತಿಯಾದ ಕಿರಿಕಿರಿಯನ್ನು ಉಂಟುಮಾಡುವುದರ ಜೊತೆಗೆ ಮೂಗಿನ ಮೂಲಕ ಉಸಿರಾಡಲು ಕೂಡಾ ಕಷ್ಟವಾಗುತ್ತದೆ. ಈ ಸಮಸ್ಯೆಗೆ ನೀವು ಮನೆಯಲ್ಲಿಯೇ ಪರಿಹಾರ ಕಂಡುಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕಟ್ಟಿದ ಮೂಗಿನ ಸಮಸ್ಯೆಯನ್ನು ಹೋಗಲಾಡಿಸುವ ಸುಲಭ ವಿಧಾನಗಳು:

ಹಬೆ (ಸ್ಟೀಮ್) ತೆಗೆದುಕೊಳ್ಳಿ:

ನೀವು ಕಟ್ಟಿದ ಮೂಗಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಬಯಸಿದರೆ, ಸ್ಟೀಮ್ ತೆಗೆದುಕೊಳ್ಳುವುದು ಉತ್ತಮ ಮಾರ್ಗವಾಗಿದೆ. ಸ್ಟೀಮ್ ತೆಗೆದುಕೊಳ್ಳುವುದರಿಂದ ಮೂಗಿನಲ್ಲಿ ಸಂಗ್ರಹವಾಗಿರುವ ಲೋಳೆಗಳನ್ನು (ಸಿಂಬಳ) ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ನೀವು ಸ್ಟೀಮರ್ ನಿಂದ ಅಥವಾ ಒಂದು ಪಾತ್ರೆಯಲ್ಲಿ ನೀರನ್ನು ಚೆನ್ನಾಗಿ ಕುದಿಸಿ ಅದರಿಂದ ಸ್ಟೀಮ್ ತೆಗೆದುಕೊಳ್ಳಬಹುದು. ಹೀಗೆ ಮಾಡುವುದರಿಂದ ಬಿಸಿಯಾದ ಹಬೆಯು ಮೂಗಿನ ಮೂಲಕ ದೇಹದೊಳಗೆ ಹೋದಾಗ ಮುಚ್ಚಿಹೋದ ಮೂಗು ತೆರೆಯಲು ಸಹಾಯವಾಗುತ್ತದೆ.

ಇದನ್ನೂ ಓದಿ:

ಬಿಸಿ ನೀರಿನಿಂದ ಸ್ನಾನ ಮಾಡಿ:

ಹಬೆಯನ್ನು ತೆಗೆದುಕೊಳ್ಳುವುದರಿಂದ ನಿಮಗೆ ಅನುಕೂಲವಾಗದಿದ್ದರೆ, ನೀವು ಬಿಸಿ ನೀರಿನಿಂದ ಸ್ನಾನ ಕೂಡ ಮಾಡಬಹುದು. ಹೀಗೆ ಮಾಡುವುದರಿಂದ ಕಟ್ಟಿರುವ ಮೂಗು ತೆರೆಯುತ್ತದೆ. ಬಿಸಿನೀರಿನಲ್ಲಿ ಸ್ನಾನ ಮಾಡುವಾಗ ಹೊರಬರುವ ಹಬೆಯು ಮೂಗಿನ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಮತ್ತು ಮೂಗಿನ ಮೂಲಕ ಉಸಿರಾಡಲು ಅನುವು ಮಾಡಿಕೊಡುತ್ತದೆ.

ಬಿಸಿ ಚಹಾ ಅಥವಾ ಸೂಪ್ ಕುಡಿಯಿರಿ:

ಬಿಸಿ ಚಹಾ ಅಥವಾ ಬಿಸಿ ಬಿಸಿ ಸೂಪ್ ಕುಡಿಯುವಾಗ ಅದರ ಬಿಸಿ ಹಬೆ ಮೂಗಿನೊಳಗೆ ಪ್ರವೇಶಿಸುತ್ತದೆ. ಇದರಿಂದ ಕಟ್ಟಿಕೊಂಡ ಮೂಗು ತೆರೆಯುತ್ತದೆ ಹಾಗೂ ಉಸಿರಾಟವು ಕೂಡ ಸರಾಗವಾಗಿ ಸಾಗುತ್ತದೆ. ಅಲ್ಲದೆ ನೀವು ಬಿಸಿ ನೀರನ್ನು ಕೂಡ ಕುಡಿಯಬಹದು.

ಇದನ್ನೂ ಓದಿ: ಶೀತದಿಂದ ಮೂಗು ಕಟ್ಟಿದ್ದರೆ ಮಕ್ಕಳೂ ಕೂಡ ಹಬೆಯ ಸಹಾಯ ಪಡೆಯಬಹುದೇ? ವೈದ್ಯರು ಏನಂತಾರೆ?

ಜೇನು ತುಪ್ಪ ಮತ್ತು ಕರಿ ಮೆಣಸು:

ಜೇನು ತುಪ್ಪ ಮತ್ತು ಕರಿಮೆಣಸಿನ ಸೇವನೆಯು ಕಟ್ಟಿದ ಮೂಗಿನ ಸಮಸ್ಯೆಯಿಂದ ಪರಿಹಾರ ಪಡೆಯಲು ಪರಿಣಾಮಕಾರಿ ಮನೆಮದ್ದಾಗಿದೆ. ಇದಕ್ಕಾಗಿ ಎರಡು ಚಮಚ ಜೇನು ತುಪ್ಪಕ್ಕೆ ಎರಡು ಚಿಟಿಕೆ ಕರಿಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ. ಇದು ನಿಮಗೆ ಕಟ್ಟಿದ ಮೂಗಿನ ಸಮಸ್ಯೆಯಿಂದ ಶೀಘ್ರ ಪರಿಹಾರ ಒದಗಿಸುತ್ತದೆ.

ಶುಂಠಿ ತುಳಸಿ ಟೀ ಸೇವಿಸಿ:

ಶುಂಠಿ ಮತ್ತು ತುಳಸಿ ಎರಡರಲ್ಲೂ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಫಗಲ್ ಗುಣಗಳಿವೆ. ಆದ್ದರಿಂದ ಶುಂಠಿ-ತುಳಸಿ ಚಹಾ ತಯಾರಿಸಿ ಕುಡಿಯಿರಿ. ಇದು ಸಿಂಬಳ (ಮ್ಯೂಕಸ್) ವನ್ನು ಸಡಿಲಗೊಳಿಸಲು ಮತ್ತು ಮೂಗು ತೆರೆದುಕೊಳ್ಳಲು ಸಹಾಯ ಮಾಡುತ್ತದೆ.

ವ್ಯಾಯಾಮ:

ನಿಮಗೆ ಕಟ್ಟಿದ ಮೂಗಿನ ಸಮಸ್ಯೆ ಭಾದಿಸಿದಾಗ ನೀವು ಉಸಿರಾಟದ ವ್ಯಾಯಾಮ ಮಾಡುವ ಮೂಲಕ ಈ ಸಮಸ್ಯೆಯನ್ನು ಹೋಗಲಾಡಿಬಹುದು. ಅದಕ್ಕಾಗಿ ನೀವು ಮೊದಲು ಆಳವಾದ ಉಸಿರನ್ನು ತೆಗೆದುಕೊಳ್ಳಿ, ತಲೆಯನ್ನು ಹಿಂದಕ್ಕೆ ತಿರುಗಿಸಿ ಮತ್ತು ಸ್ವಲ್ಪ ಸಮಯದವರೆಗೆ ಉಸಿರನ್ನು ಹಿಡಿದುಕೊಳ್ಳಿ. ಇದರ ನಂತರ ಮೂಗು ತೆರೆದುಕೊಳ್ಳುವ ಮೂಲಕ ಉಸಿರಾಡಲು ಸುಲಭವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು