ಕೆಮ್ಮು ನೆಗಡಿ ಸಮಸ್ಯೆಗೆ ಈ ಮನೆ ಮದ್ದು ಪರಿಹಾರ, ಇಲ್ಲಿದೆ ಸುಲಭ ವಿಧಾನ

ಹವಾಮಾನದಲ್ಲಾಗುವ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಹಜ. ವಾತಾವರಣದಲ್ಲಾಗುವ ಸ್ವಲ್ಪ ವ್ಯತ್ಯಾಸವಾದರೂ ಹೆಚ್ಚಿನವರಲ್ಲಿ ಕೆಮ್ಮು, ನೆಗಡಿ, ಗಂಟಲು ನೋವು ಸಮಸ್ಯೆಯು ಉಂಟಾಗಿ ಹೈರಾಣಾಗಿಸಿ ಬಿಡುತ್ತದೆ. ಎಷ್ಟೇ ಮದ್ದು ಮಾಡಿದರೂ ಕೂಡ ಗುಣಮುಖವಾಗುವುದೇ ಇಲ್ಲ. ಈ ಸಮಯದಲ್ಲಿ ಹೆಚ್ಚಿನವರು ಹಳ್ಳಿ ಮದ್ದಿನತ್ತ ಒಲವು ತೋರಿಸಿ ಆರೋಗ್ಯವನ್ನು ಸರಿಪಡಿಸಿಕೊಳ್ಳುತ್ತಾರೆ.

ಕೆಮ್ಮು ನೆಗಡಿ ಸಮಸ್ಯೆಗೆ ಈ ಮನೆ ಮದ್ದು ಪರಿಹಾರ, ಇಲ್ಲಿದೆ ಸುಲಭ ವಿಧಾನ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 13, 2024 | 10:14 AM

ಈಗಿನ ಕಾಲದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಕೂಡ ಕಡಿಮೆಯೇ. ವಾತಾವರಣದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾದರೂ ಹೆಚ್ಚಿನವರಲ್ಲಿ ಈ ಕೆಮ್ಮು, ನೆಗಡಿ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಇದು ಗಂಭೀರವಾದ ಆರೋಗ್ಯ ಸಮಸ್ಯೆಯಲ್ಲದೇ ಇದ್ದರೂ ಕೆಲವೊಮ್ಮೆ ತಿಂಗಳುಗಳ ಕಾಲ ಇರುತ್ತದೆ. ಪ್ರಾರಂಭದಲ್ಲಿ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದೆ ಹೋದರೆ ಪರಿಣಾಮ ಜ್ವರ ಹಾಗೂ ತಲೆನೋವು ಕೂಡ ಶುರುವಾಗುತ್ತದೆ. ಹೀಗಾಗಿ ಈ ನೆಗಡಿ ಹಾಗೂ ಕೆಮ್ಮಿನಂತಹ ಸಮಸ್ಯೆಗೆ ಮನೆಯಲ್ಲೇ ಸುಲಭವಾದ ಔಷಧಿಯನ್ನು ತಯಾರಿಸಿ ಸೇವಿಸುವುದು ಉತ್ತಮ.

ಕೆಮ್ಮು ಹಾಗೂ ನೆಗಡಿಗೆ ಮನೆ ಮದ್ದುಗಳು

* ತುಳಸಿ ಎಲೆಗಳ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪವನ್ನು ಬೆರೆಸಿ ಮೂರು ನಾಲ್ಕು ಗಂಟೆಗೊಮ್ಮೆ ಒಂದೊಂದು ಚಮಚ ಸೇವಿಸುತ್ತಿದ್ದರೆ ಕಫ, ಕೆಮ್ಮಿಗೆ ಪರಿಣಾಮಕಾರಿಯಾದ ಮನೆ ಮದ್ದಾಗಿದೆ.

* ವೀಳೆದೆಲೆಗೆ ಕಪ್ಪು ತುಳಸಿ, ಲವಂಗವನ್ನು ಅರೆದು, ಒಂದೆರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.

* ಅಳಲೆಕಾಯಿಯನ್ನು ಜೇನುತುಪ್ಪದಲ್ಲಿ ತೇದು, ಈ ಮಿಶ್ರಣವನ್ನು ಗಂಟಲಿಗೆ ಹಚ್ಚುತ್ತಿದ್ದರೆ ಒಣಕೆಮ್ಮು ಸಮಸ್ಯೆಯು ನಿವಾರಣೆಯಾಗುತ್ತದೆ.

* ತುಳಸಿ ಹೂವುಗಳನ್ನು ಈರುಳ್ಳಿ ರಸ, ಶುಂಠಿ ರಸ, ಜೇನುತುಪ್ಪದೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ ನಿವಾರಣೆ ಆಗುವುದು.

* ಅಳಲೆಕಾಯಿಯನ್ನು ಜೇನುತುಪ್ಪದಲ್ಲಿ ತೇದು, ತಯಾರಿಸಿದ ಗಂಧವನ್ನು ಗಂಟಲಿಗೆ ಹಚ್ಚುತ್ತಿದ್ದರೆ ಒಣಕೆಮ್ಮು ಕಡಿಮೆ ಆಗುವುದು.

ಇದನ್ನೂ ಓದಿ: ಇನ್ಮುಂದೆ ಸ್ಟೌವ್ ಮೇಲೆ ರೊಟ್ಟಿ ಸುಡಬೇಡಿ; ಅದರಿಂದಾಗುವ ಅಪಾಯವಿದು

* ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಶೀತದ ಕೆಮ್ಮು ಗುಣ ಮುಖವಾಗುತ್ತದೆ.

* ದಿನವೂ ಬೆಳ್ಳುಳ್ಳಿ ಅಡುಗೆಯಲ್ಲಿ ಬಳಸುತ್ತಿದ್ದರೆ ಕೆಮ್ಮು ರೋಗ ಸಾಮಾನ್ಯವಾಗಿ ಬರುವ ಸಂಭವವೇ ಕಡಿಮೆ.

* ಕಾಳುಮೆಣಸು ಪುಡಿಯನ್ನು ತುಪ್ಪಕ್ಕೆ ಬೆರೆಸಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

* ಮೆಣಸಿನಕಾಳುಗಳನ್ನು ಮೆಲ್ಲನೆ ಜಗಿದು ರಸ ನುಂಗುತ್ತಿರುವುದರಿಂದ ಕಫವು ಕರಗಿ ಹೊರ ಬಂದು ಕೆಮ್ಮಿನಿಂದ ಮುಕ್ತಿ ಕಾಣಬಹುದು.

* ಕರಿಮೆಣಸಿನ ಕಾಳುಗಳನ್ನು ತುಳಸಿಯ ರಸದಲ್ಲಿ ಅರೆದು ಸೇವಿಸುವುದರಿಂದ ಕೆಮ್ಮಿಗೆ ಪರಿಣಾಮಕಾರಿಯಾದ ಔಷಧಿ.

* ಕಾಳು ಮೆಣಸಿನಕಾಳುಗಳನ್ನು ತುಪ್ಪದಲ್ಲಿ ಹುರಿದು, ಸ್ವಲ್ಪ ಸಕ್ಕರೆ ಸೇರಿಸಿ ಮಿಶ್ರಣವನ್ನು ಚೂರ್ಣ ಮಾಡಿಕೊಂಡು ದಿನಕ್ಕೆರಡು ಸಲ ಜೇನಿನಲ್ಲಿ ಅಥವಾ ಬಿಸಿನೀರಿನಲ್ಲಿ ಸೇವಿಸುವುದರಿಂದ ನೆಗಡಿ ಮತ್ತು ಕೆಮ್ಮು ಗುಣಮುಖವಾಗುತ್ತದೆ.

* ಮಲಗುವ ಸಮಯದಲ್ಲಿ ವಿಪರೀತವಾಗಿ ಕೆಮ್ಮು ಕಾಣಿಸಿಕೊಂಡರೆ ಒಂದೆರಡು ಕಲ್ಲು ಉಪ್ಪು ಬಾಯಿಗೆ ಹಾಕಿ ನೀರನ್ನು ನುಂಗಿದರೆ ಕಕೆಮ್ಮು ಬರುವುದಿಲ್ಲ.

* ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನ ಸೇವಿಸಿದರೆ ಉತ್ತಮ.

* ಮಜ್ಜಿಗೆ ಅನ್ನಕ್ಕೆ ಹಸಿ ಈರುಳ್ಳಿಯನ್ನು ಸೇರಿಸಿ ಸೇವಿಸುವುದರಿಂದ ಉಷ್ಣದಿಂದ ಉಂಟಾದ ಕೆಮ್ಮು ಶಮನವಾಗುತ್ತದೆ.

* ಕೆಮ್ಮು, ನೆಗಡಿಯು ಇದ್ದಾಗ ಒಂದು ಚಮಚದಷ್ಟು ಅರಿಶಿನ ಪುಡಿ ಹಾಗೂ ಕರಿಮೆಣಸಿನ ಪುಡಿ ಸೇರಿಸಿ ಕುದಿಸಿ, ದಿನಕ್ಕೆ ಒಂದೆರಡು ಬಾrರಿ ಸೇವನೆ ಮಾಡುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ