AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಮ್ಮು ನೆಗಡಿ ಸಮಸ್ಯೆಗೆ ಈ ಮನೆ ಮದ್ದು ಪರಿಹಾರ, ಇಲ್ಲಿದೆ ಸುಲಭ ವಿಧಾನ

ಹವಾಮಾನದಲ್ಲಾಗುವ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಹಜ. ವಾತಾವರಣದಲ್ಲಾಗುವ ಸ್ವಲ್ಪ ವ್ಯತ್ಯಾಸವಾದರೂ ಹೆಚ್ಚಿನವರಲ್ಲಿ ಕೆಮ್ಮು, ನೆಗಡಿ, ಗಂಟಲು ನೋವು ಸಮಸ್ಯೆಯು ಉಂಟಾಗಿ ಹೈರಾಣಾಗಿಸಿ ಬಿಡುತ್ತದೆ. ಎಷ್ಟೇ ಮದ್ದು ಮಾಡಿದರೂ ಕೂಡ ಗುಣಮುಖವಾಗುವುದೇ ಇಲ್ಲ. ಈ ಸಮಯದಲ್ಲಿ ಹೆಚ್ಚಿನವರು ಹಳ್ಳಿ ಮದ್ದಿನತ್ತ ಒಲವು ತೋರಿಸಿ ಆರೋಗ್ಯವನ್ನು ಸರಿಪಡಿಸಿಕೊಳ್ಳುತ್ತಾರೆ.

ಕೆಮ್ಮು ನೆಗಡಿ ಸಮಸ್ಯೆಗೆ ಈ ಮನೆ ಮದ್ದು ಪರಿಹಾರ, ಇಲ್ಲಿದೆ ಸುಲಭ ವಿಧಾನ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 13, 2024 | 10:14 AM

Share

ಈಗಿನ ಕಾಲದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಕೂಡ ಕಡಿಮೆಯೇ. ವಾತಾವರಣದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾದರೂ ಹೆಚ್ಚಿನವರಲ್ಲಿ ಈ ಕೆಮ್ಮು, ನೆಗಡಿ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಇದು ಗಂಭೀರವಾದ ಆರೋಗ್ಯ ಸಮಸ್ಯೆಯಲ್ಲದೇ ಇದ್ದರೂ ಕೆಲವೊಮ್ಮೆ ತಿಂಗಳುಗಳ ಕಾಲ ಇರುತ್ತದೆ. ಪ್ರಾರಂಭದಲ್ಲಿ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದೆ ಹೋದರೆ ಪರಿಣಾಮ ಜ್ವರ ಹಾಗೂ ತಲೆನೋವು ಕೂಡ ಶುರುವಾಗುತ್ತದೆ. ಹೀಗಾಗಿ ಈ ನೆಗಡಿ ಹಾಗೂ ಕೆಮ್ಮಿನಂತಹ ಸಮಸ್ಯೆಗೆ ಮನೆಯಲ್ಲೇ ಸುಲಭವಾದ ಔಷಧಿಯನ್ನು ತಯಾರಿಸಿ ಸೇವಿಸುವುದು ಉತ್ತಮ.

ಕೆಮ್ಮು ಹಾಗೂ ನೆಗಡಿಗೆ ಮನೆ ಮದ್ದುಗಳು

* ತುಳಸಿ ಎಲೆಗಳ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪವನ್ನು ಬೆರೆಸಿ ಮೂರು ನಾಲ್ಕು ಗಂಟೆಗೊಮ್ಮೆ ಒಂದೊಂದು ಚಮಚ ಸೇವಿಸುತ್ತಿದ್ದರೆ ಕಫ, ಕೆಮ್ಮಿಗೆ ಪರಿಣಾಮಕಾರಿಯಾದ ಮನೆ ಮದ್ದಾಗಿದೆ.

* ವೀಳೆದೆಲೆಗೆ ಕಪ್ಪು ತುಳಸಿ, ಲವಂಗವನ್ನು ಅರೆದು, ಒಂದೆರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.

* ಅಳಲೆಕಾಯಿಯನ್ನು ಜೇನುತುಪ್ಪದಲ್ಲಿ ತೇದು, ಈ ಮಿಶ್ರಣವನ್ನು ಗಂಟಲಿಗೆ ಹಚ್ಚುತ್ತಿದ್ದರೆ ಒಣಕೆಮ್ಮು ಸಮಸ್ಯೆಯು ನಿವಾರಣೆಯಾಗುತ್ತದೆ.

* ತುಳಸಿ ಹೂವುಗಳನ್ನು ಈರುಳ್ಳಿ ರಸ, ಶುಂಠಿ ರಸ, ಜೇನುತುಪ್ಪದೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ ನಿವಾರಣೆ ಆಗುವುದು.

* ಅಳಲೆಕಾಯಿಯನ್ನು ಜೇನುತುಪ್ಪದಲ್ಲಿ ತೇದು, ತಯಾರಿಸಿದ ಗಂಧವನ್ನು ಗಂಟಲಿಗೆ ಹಚ್ಚುತ್ತಿದ್ದರೆ ಒಣಕೆಮ್ಮು ಕಡಿಮೆ ಆಗುವುದು.

ಇದನ್ನೂ ಓದಿ: ಇನ್ಮುಂದೆ ಸ್ಟೌವ್ ಮೇಲೆ ರೊಟ್ಟಿ ಸುಡಬೇಡಿ; ಅದರಿಂದಾಗುವ ಅಪಾಯವಿದು

* ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಶೀತದ ಕೆಮ್ಮು ಗುಣ ಮುಖವಾಗುತ್ತದೆ.

* ದಿನವೂ ಬೆಳ್ಳುಳ್ಳಿ ಅಡುಗೆಯಲ್ಲಿ ಬಳಸುತ್ತಿದ್ದರೆ ಕೆಮ್ಮು ರೋಗ ಸಾಮಾನ್ಯವಾಗಿ ಬರುವ ಸಂಭವವೇ ಕಡಿಮೆ.

* ಕಾಳುಮೆಣಸು ಪುಡಿಯನ್ನು ತುಪ್ಪಕ್ಕೆ ಬೆರೆಸಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

* ಮೆಣಸಿನಕಾಳುಗಳನ್ನು ಮೆಲ್ಲನೆ ಜಗಿದು ರಸ ನುಂಗುತ್ತಿರುವುದರಿಂದ ಕಫವು ಕರಗಿ ಹೊರ ಬಂದು ಕೆಮ್ಮಿನಿಂದ ಮುಕ್ತಿ ಕಾಣಬಹುದು.

* ಕರಿಮೆಣಸಿನ ಕಾಳುಗಳನ್ನು ತುಳಸಿಯ ರಸದಲ್ಲಿ ಅರೆದು ಸೇವಿಸುವುದರಿಂದ ಕೆಮ್ಮಿಗೆ ಪರಿಣಾಮಕಾರಿಯಾದ ಔಷಧಿ.

* ಕಾಳು ಮೆಣಸಿನಕಾಳುಗಳನ್ನು ತುಪ್ಪದಲ್ಲಿ ಹುರಿದು, ಸ್ವಲ್ಪ ಸಕ್ಕರೆ ಸೇರಿಸಿ ಮಿಶ್ರಣವನ್ನು ಚೂರ್ಣ ಮಾಡಿಕೊಂಡು ದಿನಕ್ಕೆರಡು ಸಲ ಜೇನಿನಲ್ಲಿ ಅಥವಾ ಬಿಸಿನೀರಿನಲ್ಲಿ ಸೇವಿಸುವುದರಿಂದ ನೆಗಡಿ ಮತ್ತು ಕೆಮ್ಮು ಗುಣಮುಖವಾಗುತ್ತದೆ.

* ಮಲಗುವ ಸಮಯದಲ್ಲಿ ವಿಪರೀತವಾಗಿ ಕೆಮ್ಮು ಕಾಣಿಸಿಕೊಂಡರೆ ಒಂದೆರಡು ಕಲ್ಲು ಉಪ್ಪು ಬಾಯಿಗೆ ಹಾಕಿ ನೀರನ್ನು ನುಂಗಿದರೆ ಕಕೆಮ್ಮು ಬರುವುದಿಲ್ಲ.

* ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನ ಸೇವಿಸಿದರೆ ಉತ್ತಮ.

* ಮಜ್ಜಿಗೆ ಅನ್ನಕ್ಕೆ ಹಸಿ ಈರುಳ್ಳಿಯನ್ನು ಸೇರಿಸಿ ಸೇವಿಸುವುದರಿಂದ ಉಷ್ಣದಿಂದ ಉಂಟಾದ ಕೆಮ್ಮು ಶಮನವಾಗುತ್ತದೆ.

* ಕೆಮ್ಮು, ನೆಗಡಿಯು ಇದ್ದಾಗ ಒಂದು ಚಮಚದಷ್ಟು ಅರಿಶಿನ ಪುಡಿ ಹಾಗೂ ಕರಿಮೆಣಸಿನ ಪುಡಿ ಸೇರಿಸಿ ಕುದಿಸಿ, ದಿನಕ್ಕೆ ಒಂದೆರಡು ಬಾrರಿ ಸೇವನೆ ಮಾಡುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!