AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಗು 9 ತಾಸಿಗಿಂತ ಕಡಿಮೆ ನಿದ್ರೆ ಮಾಡುತ್ತಾ? ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡಬಹುದು

ನಿಮ್ಮ ಮಗು ಸರಿಯಾಗಿ ನಿದ್ರೆ ಮಾಡುತ್ತಿಲ್ಲವೇ?, ಅಥವಾ ನಿದ್ರೆ ಮಾಡಿದರೂ ಪದೇ ಪದೇ ಎಚ್ಚರಗೊಳ್ಳುತ್ತಿದೆಯೇ? ಈ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ನಿಮ್ಮ ಮಗು 9 ತಾಸಿಗಿಂತ ಕಡಿಮೆ ನಿದ್ರೆ ಮಾಡುತ್ತಾ? ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡಬಹುದು
Sleep
TV9 Web
| Edited By: |

Updated on:Aug 01, 2022 | 2:58 PM

Share

ನಿಮ್ಮ ಮಗು ಸರಿಯಾಗಿ ನಿದ್ರೆ ಮಾಡುತ್ತಿಲ್ಲವೇ?, ಅಥವಾ ನಿದ್ರೆ ಮಾಡಿದರೂ ಪದೇ ಪದೇ ಎಚ್ಚರಗೊಳ್ಳುತ್ತಿದೆಯೇ? ಈ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ಹೊಸ ಅಧ್ಯಯನದ ಪ್ರಕಾರ, ಮಗು ದಿನಕ್ಕೆ ಒಂಭತ್ತು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದು ಅರಿವಿನ ದುರ್ಬಲತೆ, ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ. ಲ್ಯಾನ್ಸೆಟ್ ಚೈಲ್ಡ್ ಅಂಡ್ ಅಡೋಲೆಸೆಂಟ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರಾಥಮಿಕ ಶಾಲಾ ವಯಸ್ಸಿನ ಮಕ್ಕಳು ರಾತ್ರಿಯಲ್ಲಿ 9 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದು ಮೆದುಳಿನ ಕೆಲವು ಭಾಗಗಳಲ್ಲಿ ಗಮನಾರ್ಹ ವ್ಯತ್ಯಾಸಗಳನ್ನು ಹೊಂದುತ್ತಾರೆ.

ಇದು ನೆನಪಿನ ಶಕ್ತಿ, ಬುದ್ಧಿವಂತಿಕೆ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಯೂನಿವರ್ಸಿಟಿ ಆಫ್ ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ (UMSOM) ಸಂಶೋಧಕರ ನೇತೃತ್ವದ ಹೊಸ ಅಧ್ಯಯನದ ಪ್ರಕಾರ, ಮಗು ಪ್ರತಿ ರಾತ್ರಿ 9ರಿಂದ 12 ಗಂಟೆಗಳ ಕಾಲ ನಿದ್ರೆಯನ್ನು ಮಾಡಬೇಕು.

ನಿದ್ರೆಯ ಕೊರತೆ ಕಂಡು ಬಂದಾಗ ಖಿನ್ನತೆ, ಆತಂಕ ಮತ್ತು ಗಾಬರಿ ಸೇರಿದಂತೆ ಹೆಚ್ಚಿನ ಮಾನಸಿಕ ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗಬಹುದು ಎಂದು ಹೇಳಲಾಗಿದೆ. ಅಮೇರಿಕನ್ ಅಕಾಡೆಮಿ ಆಫ್ ಸ್ಲೀಪ್ ಮೆಡಿಸಿನ್ 6 ರಿಂದ 12 ವರ್ಷ ವಯಸ್ಸಿನ ಮಕ್ಕಳು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿ ರಾತ್ರಿ 9 ರಿಂದ 12 ಗಂಟೆಗಳ ಕಾಲ ನಿದ್ರಿಸಬೇಕೆಂದು ಶಿಫಾರಸು ಮಾಡುತ್ತದೆ.

ಅಧ್ಯಯನದಲ್ಲಿ 9 ರಿಂದ 10 ವರ್ಷ ವಯಸ್ಸಿನ 8,300 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಅಮೇರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ತಮ್ಮ ಮಕ್ಕಳಲ್ಲಿ ಉತ್ತಮ ನಿದ್ರೆಯ ಅಭ್ಯಾಸವನ್ನು ಉತ್ತೇಜಿಸಲು ಪೋಷಕರ ಬಳಿ ಮಕ್ಕಳಿಗೆ ಹಗಲಿನಲ್ಲಿ ದೈಹಿಕ ಚಟುವಟಿಕೆಗಳನ್ನು ನೀಡುವ ಕುರಿತು ಸಲಹೆ ನೀಡಿದೆ.

ಈ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಅಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

Published On - 2:57 pm, Mon, 1 August 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!