AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jackfruit: ಮಧುಮೇಹಿಗಳು ಹಲಸಿನ ಹಣ್ಣು ಸೇವನೆ ಮಾಡಬಹುದು, ಆದರೆ…

ಮಧುಮೇಹ-ಸ್ನೇಹಿ ಆಹಾರಗಳಲ್ಲಿ ಒಂದು ಹಲಸಿನ ಹಣ್ಣು, ಹೌದು  ಹಲಸಿನ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ, ರೈಬೋಫ್ಲಾವಿನ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಉತ್ಕರ್ಷಣ ನಿರೋಧಕಗಳು ತುಂಬಿವೆ. ಇದು 100 ಪ್ರಮಾಣದಲ್ಲಿ ಸುಮಾರು 50-60 ರ ಮಧ್ಯಮ ಗ್ಲೈಸೆಮಿಕ್ ಇಂಡೆಕ್ಸ್ (GI) ಅನ್ನು ಹೊಂದಿದೆ ಎಂದು ಮುಂಬೈನ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆಯ ಆಹಾರ ತಜ್ಞ ಡಾ.ಜಿನಾಲ್ ಪಟೇಲ್ ಹೇಳಿದ್ದಾರೆ.

Jackfruit: ಮಧುಮೇಹಿಗಳು ಹಲಸಿನ ಹಣ್ಣು ಸೇವನೆ ಮಾಡಬಹುದು, ಆದರೆ...
Jackfruit
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 25, 2022 | 7:07 PM

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಭಾರತದಲ್ಲಿ 20 ಮತ್ತು 70 ವರ್ಷ ವಯಸ್ಸಿನ ಸುಮಾರು 8.7 ಶೇಕಡಾ ಜನರು ಮಧುಮೇಹ – ದೀರ್ಘಕಾಲದ ಚಯಾಪಚಯ ರೋಗದಿಂದ ಬಳಲುತ್ತಿದ್ದರೆ ಎಂದು ಹೇಳಲಾಗುತ್ತಿದೆ. ಇದೀಗ ಭಾರತಕ್ಕೆ ದೊಡ್ಡ ಸವಾಲು ಈ ಕಾರಣಕ್ಕೆ ಮಧುಮೇಹ ಕಾಯಿಲೆ ಸರಿಯಾದ ಚಿಕಿತ್ಸೆ ಸಿಗದೇ ಈ ರೋಗದಿಂದ ತುಂಬಾ ಆಂತಕ ಸೃಷ್ಟಿಯಾಗಿತ್ತು. ಒಂದು ವೇಳೆ ಇದನ್ನು ಹೀಗೆ ಬಿಟ್ಟರೆ ಕಣ್ಣುಗಳು, ಹೃದಯ, ಮೂತ್ರಪಿಂಡಗಳು ಮತ್ತು ದೇಹದ ಇತರ ಅನೇಕ ಭಾಗಗಳ ಮೇಲೆ ಪರಿಣಾಮ ಬೀರಬಹುದು. ಮಧುಮೇಹ ಅಥವಾ ಪೂರ್ವ-ಮಧುಮೇಹವನ್ನು ಹೊಂದಿರುವವರು ತಮ್ಮ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಏಕೆಂದರೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಹಾರದಲ್ಲಿ ಬದಲಾವಣೆ ಅಗತ್ಯ ಎಂದು ವೈದ್ಯರ ಅಧ್ಯಯನ ಹೇಳುತ್ತದೆ. ಮಧುಮೇಹ-ಸ್ನೇಹಿ ಆಹಾರಗಳನ್ನು ಸೇವನೆ ಮಾಡುವುದು ಉತ್ತಮ.

ಮಧುಮೇಹ-ಸ್ನೇಹಿ ಆಹಾರಗಳಲ್ಲಿ ಒಂದು ಹಲಸಿನ ಹಣ್ಣು, ಹೌದು  ಹಲಸಿನ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ, ರೈಬೋಫ್ಲಾವಿನ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ, ಮ್ಯಾಂಗನೀಸ್ ಮತ್ತು ಉತ್ಕರ್ಷಣ ನಿರೋಧಕಗಳು ತುಂಬಿವೆ. ಇದು 100 ಪ್ರಮಾಣದಲ್ಲಿ ಸುಮಾರು 50-60 ರ ಮಧ್ಯಮ ಗ್ಲೈಸೆಮಿಕ್ ಇಂಡೆಕ್ಸ್ (GI) ಅನ್ನು ಹೊಂದಿದೆ ಎಂದು ಮುಂಬೈನ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆಯ ಆಹಾರ ತಜ್ಞ ಡಾ.ಜಿನಾಲ್ ಪಟೇಲ್ ಹೇಳಿದ್ದಾರೆ. ಆದರೆ, ಮಧುಮೇಹಿಗಳು ಕಡಿಮೆ ಗ್ಲೈಸೆಮಿಕ್ ಲೋಡ್ ಅನ್ನು ಹೊಂದಿರುವ  ಹಲಸಿನ ಹಣ್ಣಗಳನ್ನು ಸೇವನೆ ಮಾಡಬೇಕು. ಇದು ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ.

ತಜ್ಞರು ಹೇಳುವಂತೆ ಮಧುಮೇಹ ರೋಗಿಳು ಇದನ್ನು   ಹೆಚ್ಚು ಸೇವನೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. “ಮಧುಮೇಹ ರೋಗಿಗಳು ಹಸಿ ಹಲಸಿನ ಹಣ್ಣನ್ನು ಮಿತವಾಗಿ ಸೇವಿಸಬೇಕು. ಇದರಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಇದೆ, ಇದು ದೇಹದ ದೈನಂದಿನ ಚಟುವಟಿಕೆಗಳನ್ನು ಪೂರೈಸಲು ನಿಮಗೆ ಸಹಾಯ ಮಾಡುತ್ತದೆ.  ಹಸಿ ಹಲಸು ಮಧುಮೇಹಿಗಳಿಗೆ ಉತ್ತಮ ಆಯ್ಕೆಯಾಗಿದೆ. ಇದು ಇತರ ಆಹಾಗಳಿಗಿಂತ  ಕಡಿಮೆ ಸಕ್ಕರೆ ಅಂಶವನ್ನು ಹೊಂದಿದೆ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಆದರೆ, ಇದನ್ನು ಸೇವಿಸಿದ ನಂತರ ಸಕ್ಕರೆಯ ಮಟ್ಟವನ್ನು ಗಮನಿಸಬೇಕು ಎಂದಿದ್ದಾರೆ.

ಹಲಸಿನ ಹಣ್ಣ ಮಧುಮೇಹಿಗೆ ಉತ್ತಮ ಮತ್ತು ಇದನ್ನು ಹೇಗೆ ತಿನ್ನಬೇಕು , ಮಧುಮೇಹಿಗೆ ಇದು ಆರೋಗ್ಯ ಸ್ನೇಹಿ ಆಹಾರವೇ ಎಂದು ಹೇಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂಜೀವ್ ಕಪೂರ್ ಈ ಬಗ್ಗೆ ಒಂದು ಪೋಸ್ಟ್ ನ್ನು ಕೂಡ ಹಾಕಿಕೊಂಡಿದ್ದಾರೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ: ಆಯುರ್ವೇದಕ್ಕೆ ಸಂಬಂಧಿಸಿದ ಈ ಮಿಥ್ಯಗಳಿಗೆ ಎಂದೂ ಕಿವಿಗೊಡಬೇಡಿ

ಹಲಸಿನ ಹಣ್ಣನ್ನು ಯಾರು ಸೇವಿಸಬಾರದು?

ಜಾಕ್‌ಫ್ರೂಟ್ ಕೆಲವರಲ್ಲಿ  ಉರಿಯೂತವನ್ನು ಮತ್ತು ಅಸ್ವಸ್ಥತೆಗಳನ್ನು ಉಂಟುಮಾಡಬಹುದು.  ನಿಮಗೆ ಯಾವುದೇ ಅಲರ್ಜಿ ಇದ್ದರೆ ನೀವು ಹಲಸಿನ ಹಣ್ಣನ್ನು ಸೇವನೆ ಮಾಡವಾರದು,  ಎಂದು ಡಾ ಜಿನಾಲ್ ಸಲಹೆ ನೀಡಿದರು. ಇದಲ್ಲದೆ, ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳನ್ನು ಹೊಂದಿರುವವರು ಹಲಸಿನ ಹಣ್ಣನ್ನು ತಿನ್ನಬಾರದು. ಏಕೆಂದರೆ ಇದು ರಕ್ತದಲ್ಲಿ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ.

ಯಾವುದೇ ಶಸ್ತ್ರಚಿಕಿತ್ಸೆಯ ಮೊದಲು ಮತ್ತು ನಂತರ ಹಲಸಿನ ಹಣ್ಣನ್ನು ಸೇವಿಸಬಾರದು. ಇದು ಮಾತ್ರವಲ್ಲದೆ ನೀವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಅಥವಾ ತೀವ್ರವಾದ ಮೂತ್ರಪಿಂಡ ವೈಫಲ್ಯದಂತಹ ಮೂತ್ರಪಿಂಡದ ಸಮಸ್ಯೆಗಳನ್ನು ಹೊಂದಿದ್ದರೆ ಇದನ್ನು ತಿನ್ನಬಾರದು, ಏಕೆಂದರೆ ಹಲಸಿನ ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ರಕ್ತದಲ್ಲಿ ಪೊಟ್ಯಾಸಿಯಮ್ ಅನ್ನು ನಿರ್ಮಿಸಲು ಕಾರಣವಾಗುತ್ತದೆ, ಇದು ಹೈಪರ್‌ಕೆಲೆಮಿಯಾ ಎಂಬ ಸ್ಥಿತಿಗೆ ಕಾರಣವಾಗುತ್ತದೆ.

Published On - 7:07 pm, Sat, 25 June 22

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್