AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jallianwala Bagh Massacre : ಇದು ದೇಶ ಕಂಡ ಅತ್ಯಂತ ದುರಂತ ಘಟನೆ, ಇದನ್ನು ಭಾರತ ಎಂದಿಗೂ ಮರೆಯದು

ದೇಶದಲ್ಲಿ ನಡೆದ ಅದೆಷ್ಟೋ ದುರಂತ ಘಟನೆಗಳು ಇಂದಿಗೂ ಭಾರತೀಯ ಕಣ್ಣನ್ನು ಒದ್ದೆ ಮಾಡುತ್ತದೆ. ಅಂತಹ ದುರಂತ ಘಟನೆಗಳಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಕೂಡ ಒಂದು. ಭಾರತೀಯ ಮನದಲ್ಲಿ ಅಚ್ಚಳಿಯದೇ ಉಳಿದಿರುವ ಈ ಘಟನೆಯು ನಡೆದು ನಾಳೆಗೆ 105 ವರ್ಷಗಳು. ಏಪ್ರಿಲ್ 13, 1919 ರಂದು ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದ ಈ ಘಟನೆಯು ಸ್ವಾತಂತ್ರ ಹೋರಾಟದ ತೀವ್ರತೆಗೆ ಕಾರಣವಾಯಿತು.

Jallianwala Bagh Massacre : ಇದು ದೇಶ ಕಂಡ ಅತ್ಯಂತ ದುರಂತ ಘಟನೆ, ಇದನ್ನು ಭಾರತ ಎಂದಿಗೂ ಮರೆಯದು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 12, 2024 | 5:08 PM

Share

ಇಡೀ ದೇಶವು ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ವೇಳೆಯಲ್ಲಿ ಅಂದು ಕಹಿ ಘಟನೆಯೊಂದು ನಡೆದೇ ಹೋಯಿತು. ನೂರು ವರ್ಷಗಳ ಹಿಂದೆ ಪಂಜಾಬ್‌ನ ಅಮೃತಸರದಲ್ಲಿ 1919ರ ಏಪ್ರಿಲ್ 13ರಂದು ನಡೆದ ಜಲಿಯನ್ ವಾಲಾ ಬಾಗ್ ಭೀಕರ ಹತ್ಯಾಕಾಂಡ ಈ ಗಾಯದ ಗುರುತು ಮಾತ್ರ ಇಂದಿಗೂ ಹಾಗೆಯೇ ಉಳಿದಿದೆ.

ಅಂದು ಏಪ್ರಿಲ್ 13ರಂದು ನಡೆದಿದ್ದೇನು?

1919ರ ಏಪ್ರಿಲ್ 13ರಂದು ಪಂಜಾಬ್ ನಲ್ಲಿ ಸಿಖ್ಖರು ಬೈಸಾಕಿ ಹಬ್ಬದ ಸಂಭ್ರಮದಲ್ಲಿದ್ದರು. ಹಬ್ಬವನ್ನು ಆಚರಿಸಲು ಅಮೃತಸರದಲ್ಲಿನ ಜಲಿಯನ್ ವಾಲಾ ಬಾಗ್ ನಲ್ಲಿರುವ ಉದ್ಯಾನದಲ್ಲಿ ಜನರು ಸೇರಿದ್ದರು. ಆದರೆ ಅಂದು ಶಾಸನಬದ್ಧವಾಗಿ ಅಂದು ಅಮೃತಸರದಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪು ಗೂಡುವಂತಿಲ್ಲ ಎಂದು ಬ್ರಿಟಿಷ್ ಸರ್ಕಾರ ಆಜ್ಞೆ ಹೊರಡಿಸಿತ್ತು.

ಈ ಬಗ್ಗೆ ಈ ಜನರಿಗೆ ಮಾಹಿತಿ ತಿಳಿದಿರಲಿಲ್ಲ. ಈ ವೇಳೆಯಲ್ಲಿ ಬ್ರಿಟಿಷ್ ಸೈನಿಕರ ತುಕಡಿ ಉದ್ಯಾನವನಕ್ಕೆ ಬಂದಿತ್ತು. ತುಕಡಿಯ ನಿಯಂತ್ರಕನಾಗಿದ್ದ ಬ್ರಿಗೇಡಿಯರ್ ಜನರಲ್ ರೆಗಿನಾಲ್ಡ್ ಡೈಯರ್ ಅಲ್ಲಿದ್ದ ಜನರಿಗೆ ಯಾವುದೇ ಎಚ್ಚರಿಕೆ ನೀಡಲಿಲ್ಲ. ಬದಲಾಗಿ ಏಕಾಏಕಿ ಗುಂಡಿನ ದಾಳಿ ನಡೆಸುವಂತೆ ಆದೇಶ ನೀಡಿಯೇ ಬಿಟ್ಟನು. ಹತ್ತರಿಂದ ಹದಿನೈದು ನಿಮಿಷಗಳ ನಡೆದ ಗುಂಡಿನ ದಾಳಿಯ ಪರಿಣಾಮವಾಗಿ ಅದೆಷ್ಟೋ ಜನರು ಪ್ರಾಣಬಿಟ್ಟರು.

ಗುಂಡಿನ ದಾಳಿಗೆ ಹೆದರಿದ ಜನರು ಉದ್ಯಾನದೊಳಗಿದ್ದ ಬಾವಿಯೊಳಕ್ಕೆ ಹಾರಿದ್ದರು. ಈ ಹತ್ಯಾಕಾಂಡ ಸ್ಮಾರಕದಲ್ಲಿರುವ ಉಲ್ಲೇಖದಲ್ಲಿ ಅಂದು ಬಾವಿಯಿಂದ ಸುಮಾರು 120 ಶವಗಳನ್ನು ಹೊರತೆಗೆಯಲಾಗಿತ್ತು ಎನ್ನುವುದಿದೆ. ಆದರೆ ಸರ್ಕಾರಿ ಮೂಲಗಳ ಪ್ರಕಾರ 379 ಮಂದಿ ಅಂದು ಸಾವನ್ನಪ್ಪಿದ್ದರು. ಆದರೆ ಸಾವಿರಾರು ಜನರು ಈ ಹತ್ಯಾಕಾಂಡಕ್ಕೆ ಬಲಿಯಾದರು.

ಇದನ್ನೂ ಓದಿ: ಹೊಸ ಮನೆ ಕಟ್ಟಿದ್ದೀರಾ? ಹಾಗಾದರೆ ಮನೆಯ ಪ್ರವೇಶದ್ವಾರದಲ್ಲಿ ಈ ವಿನ್ಯಾಸದ ನಾಮಫಲಕ ಇರಲಿ

ಈ ಡೈಯರ್​ನ ಅಮಾನವೀಯ ಕೃತ್ಯಕ್ಕೆ ವಿಶ್ವದಾದಂತ್ಯ ಆಕ್ರೋಶ ವ್ಯಕ್ತವಾಗಿತ್ತು. ಇದರ ಪರಿಣಾಮವಾಗಿ 1920ರಲ್ಲಿ ಆತ ರಾಜೀನಾಮೆ ನೀಡಿದ್ದನು. ಸ್ವಾತಂತ್ರ ಹೋರಾಟಗಾರ ಉದಮ್ ಸಿಂಗ್ ಎನ್ನುವವರು, ಸಾವಿರಾರು ಭಾರತೀಯರನ್ನು ಬಲಿ ಪಡೆದುಕೊಂಡಿದ್ದ ಈ ಮೈಕೇಲ್ ಡೈಯರ್ ನನ್ನು ಲಂಡನ್​ನಲ್ಲಿ ಹತ್ಯೆ ಮಾಡಿ ಬಿಟ್ಟರು. 1940ರ ಜುಲೈ 31ರಂದು ಪ್ರತೀಕಾರ ತೀರಿಸಿಕೊಂಡಿದ್ದ ಉದಮ್ ಸಿಂಗ್ ಅವರನ್ನು ಗಲ್ಲಿಗೇರಿಸಲಾಯಿತು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ