AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jeera Rice Recipe : ಹತ್ತೇ ನಿಮಿಷದಲ್ಲಿ ಮನೆಯಲ್ಲಿ ಮಾಡಿ ರೆಸ್ಟೋರೆಂಟ್ ಸ್ಟೈಲ್ ಜೀರಾ ರೈಸ್, ರೆಸಿಪಿ ಇಲ್ಲಿದೆ

ಬೆಳ್ಳಗೆ ಎದ್ದ ಕೂಡಲೇ ಇವತ್ತು ಏನಪ್ಪಾ ತಿಂಡಿ ಮಾಡೋದು ಎನ್ನುವ ಪ್ರಶ್ನೆಯೊಂದು ಎಲ್ಲಾ ಮಹಿಳೆಯರ ತಲೆಯಲ್ಲಿ ಬರುತ್ತೆ. ದೋಸೆ, ಇಡ್ಲಿ, ಪಲಾವ್, ಚಿತ್ರಾನ್ನ, ಉಪ್ಪಿಟ್ಟು ತಿಂದು ಬೋರ್ ಆಗಿದ್ರೆ ಜೀರಾ ರೈಸ್ ರೆಸಿಪಿಯನ್ನು ಮನೆಯಲ್ಲೇ ಟ್ರೈ ಮಾಡಬಹುದು. ಚುಮುಚುಮು ಚಳಿಗೆ ಜೀರಾ ರೈಸ್ ಮಾಡಿ ಸವಿಯುವುದು ಆರೋಗ್ಯಕ್ಕೂ ಒಳ್ಳೆಯದು. ಹೀಗಾಗಿ ರೆಸ್ಟೋರೆಂಟ್ ಸ್ಟೈಲ್ ನಲ್ಲಿ ಸಿಗುವಂತೆ ರುಚಿಕರವಾದ ಜೀರಾ ರೈಸ್ ಮಾಡೋದು ಹೇಗೆ? ಈ ರೆಸಿಪಿ ಕುರಿತಾದ ಮಾಹಿತಿ ಇಲ್ಲಿದೆ.

Jeera Rice Recipe : ಹತ್ತೇ ನಿಮಿಷದಲ್ಲಿ ಮನೆಯಲ್ಲಿ ಮಾಡಿ ರೆಸ್ಟೋರೆಂಟ್ ಸ್ಟೈಲ್ ಜೀರಾ ರೈಸ್, ರೆಸಿಪಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 04, 2024 | 3:31 PM

Share

ದಿನಾಲೂ ಬೆಳಗ್ಗೆ ಒಂದೇ ಬಗೆಯ ತಿಂಡಿ ತಿಂದು ಬೋರ್ ಆಗಿರುತ್ತದೆ. ಕೆಲವರು ವಿಭಿನ್ನವಾಗಿ ಏನನ್ನಾದರೂ ಮಾಡಲು ಪ್ರಯತ್ನಿಸುತ್ತಾರೆ. ಪಲಾವ್, ಚಿತ್ರಾನ್ನದಂತಹ ರೈಸ್ ಐಟಂಗಳನ್ನು ಮನೆಯ ಸದಸ್ಯರು ಇಷ್ಟ ಪಡುತ್ತಿದ್ದರೆ ಸ್ಪೆಷಲ್ ಆಗಿ ಜೀರಾ ರೈಸ್ ಮಾಡಬಹುದು. ಉತ್ತರ ಭಾರತದ ಫೇಮಸ್ ಖಾದ್ಯವಾಗಿರುವ ಈ ಜೀರಾ ರೈಸ್ ರೆಸಿಪಿಯನ್ನು ಹೆಚ್ಚು ಖರ್ಚುಯಿಲ್ಲದೇ ಮಾಡಬಹುದಾಗಿದೆ. ಮನೆಯಲ್ಲಿರುವ ಈ ಕೆಲವು ಸಾಮಗ್ರಿಗಳಿಂದ ಆರೋಗ್ಯಕರ ಹಾಗೂ ರುಚಿಕರ ಜೀರಾ ರೈಸ್ ಮಾಡಿ ಮನೆ ಮಂದಿಯೆಲ್ಲಾ ಸವಿಯಬಹುದು.

ಜೀರಾ ರೈಸ್ ಮಾಡಲು ಬೇಕಾಗುವ ಸಾಮಗ್ರಿಗಳು

* ಅಕ್ಕಿ- 1ಕಪ್

* ತುಪ್ಪ- 1/2 ಕಪ್

* ಪಲಾವ್ ಎಲೆ

* ಚಕ್ಕೆ

* ಲವಂಗ

* ಜೀರಿಗೆ- 4 ಚಮಚ

* ಹಸಿಮೆಣಸಿನಕಾಯಿ- 2

* ಕೊತ್ತಂಬರಿ ಸೊಪ್ಪು

* ರುಚಿಗೆ ತಕ್ಕಷ್ಟು ಉಪ್ಪು

ಜೀರಾ ರೈಸ್ ಮಾಡುವ ವಿಧಾನ

* ಅಕ್ಕಿಯನ್ನು ಚೆನ್ನಾಗಿ ತೊಳೆದು ಇಪ್ಪತ್ತು ನಿಮಿಷಗಳ ಕಾಲ ನೆನೆಸಿಟ್ಟುಕೊಳ್ಳಿ.

* ಬಾಣಲೆಗೆ ತುಪ್ಪ ಹಾಕಿ ಬಿಸಿಯಾಗುತ್ತಿದ್ದಂತೆ ಪಲಾವ್ ಎಲೆ, ಚಕ್ಕೆ, ಲವಂಗ, ಜೀರಿಗೆ, ಕತ್ತರಿಸಿಟ್ಟ ಹಸಿಮೆಣಸಿನಕಾಯಿಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ.

* ಆ ಬಳಿಕ ಈಗಾಗಲೇ ನೆನೆಸಿಟ್ಟ ಅಕ್ಕಿಯನ್ನು ಹಾಕಿ ಸ್ವಲ್ಪ ಸಣ್ಣ ಉರಿಯಲ್ಲಿ ಫ್ರೈ ಮಾಡಿಕೊಳ್ಳಿ.

* ಅಕ್ಕಿ ಬೇಯಲು ಬೇಕಾಗುವಷ್ಟು ನೀರು ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಒಮ್ಮೆ ಕೈಯಾಡಿಸಿ. ಆ ಬಳಿಕ ಕೊತ್ತಂಬರಿ ಸೇರಿಸಿ ಬೇಯಿಸಿಕೊಂಡರೆ ರುಚಿಯಾದ ಜೀರಾ ರೈಸ್ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ