AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava 2024 : ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಕೋರಲು ಇಲ್ಲಿದೆ ಸಂದೇಶಗಳು

ಕನ್ನಡವೇ ಸತ್ಯ. ಕನ್ನಡವೇ ನಿತ್ಯ'. ಕನ್ನಡ ಎಂಬುದು ಬರೀ ಭಾಷೆಯಲ್ಲ, ಅದು ನಮ್ಮೆಲ್ಲರ ಉಸಿರು. ಹೀಗಾಗಿ ನವೆಂಬರ್ 1 ಬಂತೆಂದರೆ ಸಾಕು, ಎಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮವು ಮನೆ ಮಾಡುತ್ತದೆ. ಸುಮಾರು ಒಂದು ತಿಂಗಳುಗಳ ಕಾಲ ಕನ್ನಡ ರಾಜ್ಯೋತ್ಸವದ ಆಚರಣೆಗಳಿರುತ್ತದೆ. ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಆತ್ಮೀಯರಿಗೆ ಹಾಗೂ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಶುಭಾಶಯಗಳು ಕೋರಬೇಕೆಂದು ಬಯಸಿದ್ದರೆ ಸಂದೇಶಗಳು ಇಲ್ಲಿದೆ.

Kannada Rajyotsava 2024 : ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಕೋರಲು ಇಲ್ಲಿದೆ ಸಂದೇಶಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Oct 31, 2024 | 2:57 PM

Share

ಇಡೀ ಕರ್ನಾಟಕ ರಾಜ್ಯದ ಜನರು ಪ್ರತಿ ವರ್ಷ ಎದುರು ನೋಡುವ ಕರುನಾಡಿನ ಹಬ್ಬವೇ ಕನ್ನಡ ರಾಜ್ಯೋತ್ಸವ. ನಮ್ಮ ರಾಜ್ಯ ಒಗ್ಗೂಡಿದ ನೆನಪಿಗಾಗಿ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಈ ದಿನದ ಅಧಿಕೃತ ಆಚರಣೆಯು 1956 ರಲ್ಲಿ ಪ್ರಾರಂಭಿಸಲಾಗಿದ್ದು, ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳು ಒಗ್ಗೂಡಿ ಒಂದೇ ರಾಜ್ಯವನ್ನು ರಚಿಸಿದ ಸವಿನೆನಪಿನ ದಿನವಾಗಿದೆ. ಈ ವಿಶೇಷ ದಿನದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ವಿಶೇಷ ಸಂದೇಶಗಳನ್ನು ಕಳುಹಿಸಿ ಕನ್ನಡ ರಾಜ್ಯೋತ್ಸವದ ದಿನದ ಶುಭಾಶಯಗಳನ್ನು ಕೋರಬಹುದು.

  • ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ನಮ್ಮಂತರಂಗದ ಮಾತು, ಸರ್ವರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯಗಳು.
  • ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಭಾಷೆಯನ್ನು ಹೆಮ್ಮೆಯಿಂದ ಆಚರಿಸೋಣ ಮತ್ತು ನಮ್ಮ ರಾಜ್ಯ ಮತ್ತು ದೇಶವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಭರವಸೆ ಇರಲಿ. ಮತ್ತೊಮ್ಮೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇ ಸತ್ಯ ಕನ್ನಡವೇ ನಿತ್ಯ. ಸಮಸ್ತ ಕನ್ನಡಿಗ ಕುಟುಂಬಕ್ಕೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ, ತಾಯಿ ಕನ್ನಡಾಂಬೆಗೆ ಜಯವಾಗಲಿ. ಸಮಸ್ತ ಕನ್ನಡಿಗ ಕುಟುಂಬಕ್ಕೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಕಲಿಯೋಕೆ ಕೋಟಿ ಭಾಷೆ, ಆಡೂಕೇ ಒಂದೆ ಭಾಷೆ, ಕನ್ನಡ.. ಕನ್ನಡ.. ಕಸ್ತೂರಿ ಕನ್ನಡ… ಎಲ್ಲರಿಗೂ ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ನುಡಿ ಕನ್ನಡ, ನಡೆ ಕನ್ನಡ, ಅಕ್ಷರ ಅಕ್ಷರದಲ್ಲಿ ಅರಿವು ಕನ್ನಡ.. ಎಲ್ಲಾ ಕನ್ನಡಿಗರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.
  • ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ.. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Tue, 29 October 24

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ