Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಮಾರ್ಚ್ 22ಕ್ಕೆ ಕರ್ನಾಟಕ ಬಂದ್, ಈ ಕೆಲಸ ಮೊದಲೇ ಮುಗಿಸಿಕೊಳ್ಳಿ

ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಓಲಾ, ಉಬರ್, ಆಟೋ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಹೋಟೆಲ್‌ಗಳು ಮತ್ತು ಅಗತ್ಯ ಸೇವೆಗಳು ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿದೆ. ಆದರೆ ಮಾರ್ಚ್ 22 ರಂದು ಬಂದ್ ಇರುವ ಕಾರಣ ಈ ಕೆಲ ಕೆಲಸವನ್ನು ಇಂದೇ ಮಾಡಿ ಮುಗಿಸುವುದು ಒಳ್ಳೆಯದು, ಈ ಕುರಿತಾದ ಮಾಹಿತಿ ಇಲ್ಲಿದೆ.

Karnataka Bandh: ಮಾರ್ಚ್ 22ಕ್ಕೆ ಕರ್ನಾಟಕ ಬಂದ್, ಈ ಕೆಲಸ ಮೊದಲೇ ಮುಗಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: Digi Tech Desk

Updated on:Mar 20, 2025 | 4:56 PM

ಮಹಾರಾಷ್ಟ್ರ (Maharastra) ದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ, ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಿದೆ. ಈ ಹಿನ್ನಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್​ಗೆ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್​​ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ

ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ

ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ಇದನ್ನೂ ಓದಿ: ನಾಳೆಯಿಂದ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಆರಂಭ, ಒಂದು ದಿನದ ಸಿದ್ಧತೆ ಹೀಗಿರಲಿ

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?

ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 20 March 25

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ