AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕಲ್​ನಲ್ಲಿ 26 ದಿನಗಳಲ್ಲಿ 3,500 ಕಿ ಮೀ ಕ್ರಮಿಸಿ ಕಾಶ್ಮೀರ ತಲುಪಿದ ಕನ್ನಡಿಗರು

ಕರ್ನಾಟಕದ ಇಬ್ಬರು ಸೈಕ್ಲಿಸ್ಟ್‌ಗಳು ಪರಿಸರ ಮತ್ತು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಲು ಹೊಸ ದಾರಿಯೊಂದನ್ನು ಹುಡುಕಿಕೊಂಡಿದ್ದಾರೆ.

ಸೈಕಲ್​ನಲ್ಲಿ 26 ದಿನಗಳಲ್ಲಿ 3,500 ಕಿ ಮೀ ಕ್ರಮಿಸಿ ಕಾಶ್ಮೀರ ತಲುಪಿದ ಕನ್ನಡಿಗರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 02, 2022 | 9:41 PM

Share

ಕರ್ನಾಟಕದ ಇಬ್ಬರು ಸೈಕ್ಲಿಸ್ಟ್‌ಗಳು ಪರಿಸರ ಮತ್ತು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಿ ಹೊಸ ದಾರಿಯೊಂದನ್ನು ಹುಡುಕಿಕೊಂಡಿದ್ದಾರೆ. ಇವರು ಸೈಕಲ್​​ ಮೇಲೆ ಕೇವಲ 26 ದಿನಗಳಲ್ಲಿ 3,500 ಕಿಮೀ ಕ್ರಮಿಸಿ ಕಾಶ್ಮೀರವನ್ನು ತಲುಪುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸೈಕ್ಲಿಸ್ಟ್‌ಗಳಾದ 24 ವರ್ಷದ ಜಗದೀಶ್ ಕುಲಾಲ್ ಮತ್ತು 26 ವರ್ಷದ ಶ್ರೀನಿದಿ ಶೆಟ್ಟಿ ಅವರು ಮೆಕ್ಯಾನಿಕಲ್ ಇಂಜಿನಿಯರ್‌ಗಳಾಗಿದ್ದು, ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ಅಕ್ಟೋಬರ್ 1 ರಂದು ಮಂಗಳೂರಿನ ಬಂದರು ನಗರವಾದ ಕುಡ್ಲದಿಂದ ಹೊರಟು ಅಕ್ಟೋಬರ್ 26 ರಂದು ಕಾಶ್ಮೀರದ ಗುಲ್ಮಾರ್ಗ್‌ನ ಸ್ಕೀ ರೆಸಾರ್ಟ್ ತಲುಪಿದರು ಎಂದು ಖಾಸಗಿ ಸುದ್ದಿ ಟೈಂಸ್​ ಆಫ್​​ ಇಂಡಿಯಾ ಸುದ್ದಿ ಸಂಸ್ಥೆಯ ಟ್ರಾವೆಲ್​ ನ್ಯೂಸ್​ ವರದಿ ಮಾಡಿದೆ.

ಕುಲಾಲ್ ಅವರು ಎಂಟು ರಾಜ್ಯಗಳನ್ನು ದಾಟಿ 26 ದಿನಗಳ ಕಾಲ 3,500 ಕಿಮೀ ಸವಾರಿ ಮಾಡಿ ನಂತರ ಅಂತಿಮವಾಗಿ ಕಾಶ್ಮೀರವನ್ನು ತಲುಪಿದ್ದಾರೆ. ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದ ಅವರು, ಪ್ರಕೃತಿಯನ್ನು ಉಳಿಸಿದು ನಮ್ಮ ಕರ್ತವ್ಯವಾಗಿದೆ. ಹಾಗೇ ಅಂಗಾಗ ದಾನ ಕೂಡ ಬಹು ಮುಖ್ಯವಾಗಿದೆ. ದೇಹವು ಒಂದು ಕೊಡುಗೆ ಮತ್ತು ಅದನ್ನು ರವಾನಿಸಬೇಕಾಗಿದೆ ಮತ್ತು ಹೆಚ್ಚಿನ ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸೈಕ್ಲಿಸ್ಟ್‌ಗಳು ತಮ್ಮ ಪ್ರಯಾಣದಲ್ಲಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಯಿತು. ಅವರು ಭಾರೀ ಮಳೆಯ ನಡುವೆ ಕರ್ನಾಟಕದಿಂದ ಪ್ರವಾಸವನ್ನು ಪ್ರಾರಂಭಿಸಿದರು. ಗುಜರಾತ್ ಮತ್ತು ರಾಜಸ್ಥಾನದಲ್ಲಿ ತೀವ್ರ ತಾಪಮಾನವನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಸೈಕ್ಲಿಂಗ್ ಯಾತ್ರೆ ಬಗ್ಗೆ ಕುಲಾಲ್ ಅವರು ಎರಡು ವರ್ಷಗಳ ಹಿಂದೆ ಪ್ರವಾಸವನ್ನು ಯೋಜಿಸಿದ್ದರು. ಆರಂಭದಲ್ಲಿ ಮನಾಲಿ-ಲಡಾಖ್-ಖರ್ದುಂಗ್ಲಾಗೆ ಪ್ರಯಾಣಿಸಲು ನಿರ್ಧರಿಸಿದ್ದರು. ಈ ಸಂಬಂಧ ಕಳೆದ ವರ್ಷ 500 ಕಿಮೀ ಸವಾರಿಯನ್ನು ಪೂರ್ಣಗೊಳಿಸಿದ್ದರು. ಈಗ 3,500 ಕಿಮೀ ಪ್ರಯಾಣ ಮಾಡಿದ್ದಾರೆ.

ಮತ್ತಷ್ಟು ಜೀವನಶೈಲಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Wed, 2 November 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?