AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕಲ್​ನಲ್ಲಿ 26 ದಿನಗಳಲ್ಲಿ 3,500 ಕಿ ಮೀ ಕ್ರಮಿಸಿ ಕಾಶ್ಮೀರ ತಲುಪಿದ ಕನ್ನಡಿಗರು

ಕರ್ನಾಟಕದ ಇಬ್ಬರು ಸೈಕ್ಲಿಸ್ಟ್‌ಗಳು ಪರಿಸರ ಮತ್ತು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಲು ಹೊಸ ದಾರಿಯೊಂದನ್ನು ಹುಡುಕಿಕೊಂಡಿದ್ದಾರೆ.

ಸೈಕಲ್​ನಲ್ಲಿ 26 ದಿನಗಳಲ್ಲಿ 3,500 ಕಿ ಮೀ ಕ್ರಮಿಸಿ ಕಾಶ್ಮೀರ ತಲುಪಿದ ಕನ್ನಡಿಗರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 02, 2022 | 9:41 PM

Share

ಕರ್ನಾಟಕದ ಇಬ್ಬರು ಸೈಕ್ಲಿಸ್ಟ್‌ಗಳು ಪರಿಸರ ಮತ್ತು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಿ ಹೊಸ ದಾರಿಯೊಂದನ್ನು ಹುಡುಕಿಕೊಂಡಿದ್ದಾರೆ. ಇವರು ಸೈಕಲ್​​ ಮೇಲೆ ಕೇವಲ 26 ದಿನಗಳಲ್ಲಿ 3,500 ಕಿಮೀ ಕ್ರಮಿಸಿ ಕಾಶ್ಮೀರವನ್ನು ತಲುಪುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸೈಕ್ಲಿಸ್ಟ್‌ಗಳಾದ 24 ವರ್ಷದ ಜಗದೀಶ್ ಕುಲಾಲ್ ಮತ್ತು 26 ವರ್ಷದ ಶ್ರೀನಿದಿ ಶೆಟ್ಟಿ ಅವರು ಮೆಕ್ಯಾನಿಕಲ್ ಇಂಜಿನಿಯರ್‌ಗಳಾಗಿದ್ದು, ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ಅಕ್ಟೋಬರ್ 1 ರಂದು ಮಂಗಳೂರಿನ ಬಂದರು ನಗರವಾದ ಕುಡ್ಲದಿಂದ ಹೊರಟು ಅಕ್ಟೋಬರ್ 26 ರಂದು ಕಾಶ್ಮೀರದ ಗುಲ್ಮಾರ್ಗ್‌ನ ಸ್ಕೀ ರೆಸಾರ್ಟ್ ತಲುಪಿದರು ಎಂದು ಖಾಸಗಿ ಸುದ್ದಿ ಟೈಂಸ್​ ಆಫ್​​ ಇಂಡಿಯಾ ಸುದ್ದಿ ಸಂಸ್ಥೆಯ ಟ್ರಾವೆಲ್​ ನ್ಯೂಸ್​ ವರದಿ ಮಾಡಿದೆ.

ಕುಲಾಲ್ ಅವರು ಎಂಟು ರಾಜ್ಯಗಳನ್ನು ದಾಟಿ 26 ದಿನಗಳ ಕಾಲ 3,500 ಕಿಮೀ ಸವಾರಿ ಮಾಡಿ ನಂತರ ಅಂತಿಮವಾಗಿ ಕಾಶ್ಮೀರವನ್ನು ತಲುಪಿದ್ದಾರೆ. ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದ ಅವರು, ಪ್ರಕೃತಿಯನ್ನು ಉಳಿಸಿದು ನಮ್ಮ ಕರ್ತವ್ಯವಾಗಿದೆ. ಹಾಗೇ ಅಂಗಾಗ ದಾನ ಕೂಡ ಬಹು ಮುಖ್ಯವಾಗಿದೆ. ದೇಹವು ಒಂದು ಕೊಡುಗೆ ಮತ್ತು ಅದನ್ನು ರವಾನಿಸಬೇಕಾಗಿದೆ ಮತ್ತು ಹೆಚ್ಚಿನ ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸೈಕ್ಲಿಸ್ಟ್‌ಗಳು ತಮ್ಮ ಪ್ರಯಾಣದಲ್ಲಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಯಿತು. ಅವರು ಭಾರೀ ಮಳೆಯ ನಡುವೆ ಕರ್ನಾಟಕದಿಂದ ಪ್ರವಾಸವನ್ನು ಪ್ರಾರಂಭಿಸಿದರು. ಗುಜರಾತ್ ಮತ್ತು ರಾಜಸ್ಥಾನದಲ್ಲಿ ತೀವ್ರ ತಾಪಮಾನವನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಸೈಕ್ಲಿಂಗ್ ಯಾತ್ರೆ ಬಗ್ಗೆ ಕುಲಾಲ್ ಅವರು ಎರಡು ವರ್ಷಗಳ ಹಿಂದೆ ಪ್ರವಾಸವನ್ನು ಯೋಜಿಸಿದ್ದರು. ಆರಂಭದಲ್ಲಿ ಮನಾಲಿ-ಲಡಾಖ್-ಖರ್ದುಂಗ್ಲಾಗೆ ಪ್ರಯಾಣಿಸಲು ನಿರ್ಧರಿಸಿದ್ದರು. ಈ ಸಂಬಂಧ ಕಳೆದ ವರ್ಷ 500 ಕಿಮೀ ಸವಾರಿಯನ್ನು ಪೂರ್ಣಗೊಳಿಸಿದ್ದರು. ಈಗ 3,500 ಕಿಮೀ ಪ್ರಯಾಣ ಮಾಡಿದ್ದಾರೆ.

ಮತ್ತಷ್ಟು ಜೀವನಶೈಲಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Wed, 2 November 22

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!