Womens Day 2023: ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ

48ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮಹಿಳೆಯರಿಗೆ ಭರ್ಜರಿ ಕೊಡುಗೆಯನ್ನು ಘೋಷಿಸಿದೆ.

Womens Day 2023: ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Mar 06, 2023 | 7:17 AM

ಬೆಂಗಳೂರು: ಇದೇ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು (International Women’s Day) ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಮಹಿಳೆಯರಿಗೆ ಭರ್ಜರಿ ರಿಯಾಯಿತಿ ನೀಡಿದೆ. ಸರ್ಕಾರಿ ಹೋಟೆಲ್‌ಗಳಿಗೆ ಭೇಟಿ ನೀಡುವ ಮಹಿಳೆಯರಿಗೆ ವಿಶೇಷ ಕೊಡುಗೆಯನ್ನು ಪ್ರಕಟಿಸಿದ್ದು, ಹೋಟೆಲ್‌ಗಳ ರೂಮ್ ಬುಕ್ಕಿಂಗ್‌ಗಳಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ಘೋಷಿಸಿದೆ. ಇದರ ಜೊತೆಗೆ ಫುಡ್​ ಮೇಲೂ ಸಹ ಶೇಕಡಾ 20 ರಷ್ಟು ಡಿಸ್ಕೌಂಟ್​ ನೀಡಿದೆ.

ಇದನ್ನೂ ಓದಿ: International Women’s Day 2023: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಹಾಗೂ ಧ್ಯೇಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ(Women’s Day 2023) ಪ್ರಯುಕ್ತ ಕರ್ನಾಟಕ ಸರ್ಕಾರದ ಮಯೂರ ಗ್ರೂಪ್ ಆಫ್ ಹೊಟೇಲ್‌ಗಳಲ್ಲಿ ರೂಮ್ ಬುಕ್ಕಿಂಗ್‌ನಲ್ಲಿ ವಿಶೇಷ ಶೇಕಡಾ 50 ರಷ್ಟು ರಿಯಾಯಿತಿ ಮತ್ತು ಆಹಾರದ ಮೇಲೆ ಶೇಕಡಾ 20 ರಷ್ಟು ರಿಯಾಯಿತಿಯನ್ನು ಎಲ್ಲಾ ಮಹಿಳೆಯರಿಗೆ ನೀಡಲಾಗಿದೆ. ಮಾರ್ಚ್ 6 ರಿಂದ ಮಾರ್ಚ್ 10ರ ವರೆಗೆ ಈ ಕೊಡುಗೆಯನ್ನು ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ತಿಳಿಸಿದೆ.

ಇದನ್ನೂ ಓದಿ: Best Credit Cards for Women: ಮಹಿಳೆಯರಿಗೆ ಸೂಕ್ತವಾದ ಕ್ರೆಡಿಟ್ ಕಾರ್ಡ್​ಗಳಿವು

ರಾಜ್ಯದ ಮೈಸೂರು, ಹಂಪಿ, ಶ್ರೀರಂಗಪಟ್ಟಣ, ಆಲಮಟ್ಟಿ, ಮಡಿಕೇರಿ, ನಂದಿ ಬೆಟ್ಟ, ವಿಜಯಪುರ ಹಾಗೂ ಊಟಿಯಲ್ಲೂ ಸಹ ಮಯೂರ ಹೋಟೆಲ್‌ಗಳಿವೆ. 06.03.2023 ರಿಂದ 10.03.2023 ರವರೆಗೆ ಈ ಆಫರ್ ಇರಲಿದ್ದು,  ಸಿಂಗಲ್, ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರಯಾಣಿಸುವ ಮಹಿಳಾ ಪ್ರವಾಸಿಗರಿಗೆ 50% ರಿಯಾಯಿತಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲಾ ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಎಂದು ಕೆಎಸ್‌ಟಿಡಿಸಿ ಮನವಿ ಮಾಡಿಕೊಂಡಿದೆ.

Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ