AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hack: ಬೆಳ್ಳುಳ್ಳಿ ಕೊಳೆತು, ಒಣಗದಂತೆ ಕಾಪಾಡಲು ಈ ರೀತಿ ಮಾಡಿ ನೋಡಿ

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು, ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

Kitchen Hack: ಬೆಳ್ಳುಳ್ಳಿ ಕೊಳೆತು, ಒಣಗದಂತೆ ಕಾಪಾಡಲು ಈ ರೀತಿ ಮಾಡಿ ನೋಡಿ
ಬೆಳ್ಳುಳ್ಳಿ
ಸುಷ್ಮಾ ಚಕ್ರೆ
|

Updated on: Jan 24, 2023 | 6:45 PM

Share

ಬೆಳ್ಳುಳ್ಳಿ ನೈಸರ್ಗಿಕ ಉತ್ಪನ್ನವಾಗಿದ್ದು, ಇದು ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಊಟದ ಸುವಾಸನೆಯನ್ನು ಹೆಚ್ಚಿಸುವ ಬೆಳ್ಳುಳ್ಳಿಯನ್ನು (Garlic) ವಿವಿಧ ರೀತಿಯ ಉಪ್ಪಿನಕಾಯಿ, ಅಡುಗೆಯಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ. ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಕೆಲವು ಉಪಾಯಗಳು ಇಲ್ಲಿವೆ.

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು, ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ. ಆ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

ಇದನ್ನೂ ಓದಿ: Health Benefits of Garlic: ಬೆಳ್ಳುಳ್ಳಿಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದಿದೆಯೇ?

ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ. ಬೆಳ್ಳುಳ್ಳಿಯನ್ನು ತಿನ್ನಲು ಉತ್ತಮ ಸಮಯವೆಂದರೆ ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ. ಬೆಳ್ಳುಳ್ಳಿ ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಿಲ್ಲ. ಇದು ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

ಬೆಳ್ಳುಳ್ಳಿಯನ್ನು ನುಣ್ಣಗೆ ರುಬ್ಬಿ ಅದಕ್ಕೆ ವಿನೇಗರ್ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಇದಲ್ಲದೆ, ತಣ್ಣೀರಿನ ಜೊತೆಗೆ ಬೆಳ್ಳುಳ್ಳಿಯ ಎಸಳನ್ನು ತಿನ್ನುವುದು ಸಹ ಪ್ರಯೋಜನಕಾರಿಯಾಗಿದೆ. ಬೆಳ್ಳುಳ್ಳಿಯಿಂದ ತಲೆಹೊಟ್ಟು ಕೂಡ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯ ಎಸಳನ್ನು ಪೇಸ್ಟ್​ ಮಾಡಿ. ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ. ನಂತರ ಅದನ್ನು ತಲೆಗೆ ಹಚ್ಚಿ ಮಸಾಜ್ ಮಾಡಿ. ಅದಾಗಿ 15 ನಿಮಿಷಗಳ ನಂತರ ತೊಳೆಯಿರಿ. ಇದನ್ನು ವಾರಕ್ಕೆ ಎರಡು ಬಾರಿ ಹಚ್ಚಿದರೆ ತಲೆಹೊಟ್ಟು ದೂರವಾಗುತ್ತದೆ.

ಇದನ್ನೂ ಓದಿ: Garlic benefits: ಮಲಗುವ ಮುನ್ನ ದಿಂಬಿನ ಕೆಳಗೆ ಬೆಳ್ಳುಳ್ಳಿ ಎಸಳುಗಳನ್ನು ಇಡುವುದರಿಂದಾಗುವ ಅದ್ಭುತ ಪ್ರಯೋಜನಗಳ ತಿಳಿಯಿರಿ

ಇದಲ್ಲದೆ ಬೆಳ್ಳುಳ್ಳಿಯು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಬೊಜ್ಜು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಗ್ಯಾಸ್, ಮಲಬದ್ಧತೆ, ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನೋವನ್ನು ಕಡಿಮೆ ಮಾಡುತ್ತದೆ ಮಧುಮೇಹವನ್ನು ನಿಯಂತ್ರಿಸುತ್ತದೆ. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಸೋಂಕುಗಳು ಹತ್ತಿರ ಸುಳಿಯುವುದಿಲ್ಲ. ಇದು ಆ್ಯಂಟಿ ವೈರಲ್ ಮತ್ತು ಆ್ಯಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ