AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಕೊತ್ತಂಬರಿ ಸೊಪ್ಪು ಬೇಗನೇ ಕೊಳೆತು ಹೋಗುತ್ತಾ? ಹಾಗಾದ್ರೆ ಈ ಸಲಹೆ ಪಾಲಿಸಿ

ಮನೆಯಲ್ಲಿ ಯಾವುದೇ ಅಡುಗೆ ತಯಾರಿಸಲಿ, ಅದರ ಘಮ ಹೆಚ್ಚಿಸಲು ಕೊತ್ತಂಬರಿ ಸೊಪ್ಪು ಇರಲೇಬೇಕು. ಈ ಮಾಂಸದ ಅಡುಗೆಗೆ ಈ ಸೊಪ್ಪನ್ನು ಹಾಕಿದರೆ ರುಚಿಯೊಂದಿಗೆ ಪರಿಮಳವು ಹೆಚ್ಚಾಗುತ್ತದೆ. ಹಸಿರು ಬಣ್ಣದ ತಾಜಾ ಕೊತ್ತಂಬರಿ ಸೊಪ್ಪನ್ನು ಹಾಗೆಯೇ ಇಟ್ಟರೆ ಬೇಗನೇ ಕೊಳೆತು ಹೋಗುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ತಂದ ಕೊತ್ತಂಬರಿ ಸೊಪ್ಪು ತಾಜಾವಾಗಿರಿಸಲು ಈ ಕೆಳಗಿನ ಸಲಹೆಗಳನ್ನು ಆದಷ್ಟು ತಪ್ಪಿಸಿ.

Kitchen Hacks : ಕೊತ್ತಂಬರಿ ಸೊಪ್ಪು ಬೇಗನೇ ಕೊಳೆತು ಹೋಗುತ್ತಾ? ಹಾಗಾದ್ರೆ ಈ ಸಲಹೆ ಪಾಲಿಸಿ
ಸಾಯಿನಂದಾ
| Edited By: |

Updated on: Oct 16, 2024 | 3:44 PM

Share

ಭಾರತೀಯ ಪಾಕಪದ್ಧತಿಯಲ್ಲಿ ಆಹಾರದ ಘಮ ಹಾಗೂ ರುಚಿಯನ್ನು ಹೆಚ್ಚಿಸಲು ಕೊತ್ತಂಬರಿ ಸೊಪ್ಪನ್ನು ಹೆಚ್ಚಾಗಿ ಬಳಸಲಾಗುತ್ತದೆ ಸೂಪ್‌, ಸಲಾಡ್, ರಸಂ, ಚಟ್ನಿ, ದಾಲ್ ಹೀಗೆ ವಿವಿಧ ಖಾದ್ಯಗಳ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಘಮ, ಬಣ್ಣ ಹಾಗೂ ರುಚಿಯಿಂದಾಗಿ ಎಲ್ಲರೂ ಇದನ್ನು ಇಷ್ಟ ಪಡುತ್ತಾರೆ. ಆದರೆ ಈ ಸೊಪ್ಪು ಎರಡು ಮೂರು ದಿನಕ್ಕಿಂತ ಹೆಚ್ಚು ಹಾಗೆಯೇ ಬಿಟ್ಟರೆ ಹಾಳಾಗಿ ಬಿಡುತ್ತದೆ. ಇದನ್ನು ಫ್ರಿಡ್ಜ್‌ನಲ್ಲಿಟ್ಟರೂ ಇದರ ತಾಜಾತನ ಉಳಿಯುವುದಿಲ್ಲ. ಎಷ್ಟೋ ಬಾರಿ ಹಾಳಾದ ಕೊತ್ತಂಬರಿ ಸೊಪ್ಪನ್ನೆಲ್ಲಾ ಎಸೆಯುತ್ತೇವೆ. ಆದರೆ ಈ ಕೆಲವು ಟಿಪ್ಸ್ ಬಗ್ಗೆ ತಿಳಿದಿದ್ದರೆ ಇದನ್ನು ಫ್ರೆಶ್ ಆಗಿರಿಸಿಕೊಳ್ಳಬಹುದು.

  1. ತಾಜಾ ವಾಸನೆ ಮತ್ತು ತಿಳಿ ಹಸಿರು ಮತ್ತು ಸಣ್ಣ ಎಲೆಗಳನ್ನು ಹೊಂದಿರುವ ಕೊತ್ತಂಬರಿ ಸೊಪ್ಪನ್ನು ಖರೀದಿಸಿದರೆ ಇದನ್ನು ಹೆಚ್ಚು ಕಾಲ ತಾಜಾವಾಗಿಡಬಹುದು.
  2. ಕೊತ್ತಂಬರಿ ಸೊಪ್ಪನ್ನು ಫ್ರೆಶ್ ಆಗಿರಿಸಲು ಅದರ ಬೇರನ್ನು ಕತ್ತರಿಸಿ ಸ್ವಲ್ಪ ಬೆಣ್ಣೆ ಅಥವಾ ಎಣ್ಣೆಯಲ್ಲಿ ಬೆರೆಸಿದ ಐಸ್ ಟ್ರೇಯಲ್ಲಿ ಸಂಗ್ರಹಿಸಿಟ್ಟರೆ ಹಾಳಾಗುವುದಿಲ್ಲ.
  3. ತಾಜಾ ಕೊತ್ತಂಬರಿ ಸೊಪ್ಪಿನಿಂದ ಬೇರು ಹಾಗೂ ಹಳದಿ ಎಲೆಗಳನ್ನು ತೆಗೆದುಹಾಕಬೇಕು. ಆ ಬಳಿಕ ಒಂದು ಪಾತ್ರೆಯಲ್ಲಿ ನೀರು ಮತ್ತು ಒಂದು ಚಮಚ ಅರಿಶಿನ ಪುಡಿಯನ್ನು ಸೇರಿಸಿ, ಈ ಸೊಪ್ಪನ್ನು 30 ನಿಮಿಷಗಳ ಕಾಲ ನೆನೆಸಿಡಬೇಕು. ಆ ಬಳಿಕ ನೀರು ಆರಲು ಬಿಟ್ಟು ಡಬ್ಬಿಯಲ್ಲಿ ಹಾಕಿ ಮುಚ್ಚಿಡಿ. ಆ ಡಬ್ಬವನ್ನು ಫ್ರಿಜ್ ನಲ್ಲಿಟ್ಟರೆ ಸೊಪ್ಪು ಹಾಳಾಗುವುದಿಲ್ಲ.
  4. ಕೊತ್ತಂಬರಿ ಸೊಪ್ಪಿನ ಬೇರನ್ನು ಕತ್ತರಿಸಿ ಪ್ರತ್ಯೇಕಿಸಿ, ಹಳದಿ ಎಲೆಗಳನ್ನು ತೆಗೆದುಹಾಕಬೇಕು. ಆ ಬಳಿಕ ಗಾಳಿಯಾಡದ ಬಿಗಿಯಾದ ಪಾತ್ರೆಯಲ್ಲಿ ಮುಚ್ಚಿ, ಫ್ರಿಜ್‌ನಲ್ಲಿ ಇರಿಸಿದರೆ ತಾಜಾವಾಗಿರುತ್ತದೆ.
  5. ಕೊತ್ತಂಬರಿಯನ್ನು ತಾಜಾವಾಗಿಡಲು, ಒಂದು ಗಾಜಿನ ಜಾರ್ ನಲ್ಲಿ ನೀರು ತುಂಬಿ, ಸೊಪ್ಪಿನ ಕಾಂಡವು ನೀರಿಗೆ ತಾಕುತ್ತಿರಲಿ. ಆ ನೀರಿಗೆ ಪಾಲಿಥಿನ್ ಅನ್ನು ಹಾಕಿದರೆ ಸೊಪ್ಪು ದೀರ್ಘಕಾಲದವರೆಗೆ ತಾಜಾವಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್