AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಮನೆಯಲ್ಲಿ ಜೇಡ ಬಲೆ ಕಟ್ಟದಂತೆ ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಮನೆಯ ಸ್ವಚ್ಛತೆಯ ಕಡೆಗೆ ಗೃಹಿಣಿಯರೂ ಹೆಚ್ಚು ಗಮನ ಹರಿಸುತ್ತಾರೆ. ಅದರಲ್ಲಿಯೂ ಜೇಡರ ಬಲೆಯನ್ನು ಎಷ್ಟೇ ತೆಗೆದರೂ ಒಂದೇರಡು ದಿನಗಳಲ್ಲಿ ಮತ್ತೆ ಜೇಡರ ಹುಳು ಬಲೆ ಕಟ್ಟುತ್ತದೆ. ಅದರಲ್ಲಿಯೂ ಕೆಲವರ ಮನೆಯ ಹಂಚುಗಳೆಲ್ಲವು ಜೇಡರ ಬಲೆಯಿಂದಲೇ ತುಂಬಿ ಹೋಗಿರುತ್ತದೆ. ಹೀಗಾದಾಗ ಮನೆಯಲ್ಲೇ ಇದಕ್ಕೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು. ಹೌದು, ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ ಜೇಡರ ಬಲೆಗೆ ಮುಕ್ತಿ ಹಾಡಬಹುದು. ಅದೇಗೆ ಎನ್ನುವುದಕ್ಕೆ ಇಲ್ಲಿದೆ ಉತ್ತರ.

Kitchen Hacks : ಮನೆಯಲ್ಲಿ ಜೇಡ ಬಲೆ ಕಟ್ಟದಂತೆ ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 14, 2025 | 5:01 PM

Share

ಹಬ್ಬ ಹರಿದಿನಗಳಲ್ಲಿ ಇಲ್ಲವಾದರೆ ಬಿಡುವು ಸಿಕ್ಕಾಗಲೆಲ್ಲಾ ಮನೆ ಸ್ವಚ್ಛಗೊಳಿಸುವ ಎಂದು ಹೋದರೆ ಕಣ್ಣಿಗೆ ಮೊದಲು ಕಾಣುವುದೇ ಈ ಜೇಡರ ಬಲೆ. ಈ ಬಲೆಗಳನ್ನು ಎಷ್ಟು ತೆಗೆದರೂ ಕೂಡ ಮತ್ತೆ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಈ ಬಲೆ ತೆಗೆಯುವುದು ಜೇಡರ ಹುಳುವನ್ನು ಓಡಿಸುವುದು ದೊಡ್ಡ ಕೆಲಸವೇ ಸರಿ. ಒಂದು ವೇಳೆ ಬಲೆ ತೆಗೆಯದೇ ಹಾಗೆ ಬಿಟ್ಟರೆ ಮುಗಿದೇ ಹೋಯಿತು, ಮನೆ ತುಂಬಾ ಜೇಡರ ಬಲೆಯೇ ತುಂಬಿ ಹೋಗುತ್ತದೆ. ಎಷ್ಟೇ ಸ್ವಚ್ಛ ಮಾಡಿದ್ರು ಜೇಡ ಬಲೆ ಮತ್ತೆ ಮತ್ತೆ ಕಟ್ಟುತ್ತಿದ್ದರೆ ಈ ಸಮಸ್ಯೆಗೆ ಈ ರೀತಿ ಮನೆಯಲ್ಲೇ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು.

  • ಪುದೀನಾ ಎಣ್ಣೆ : ಜೇಡಗಳನ್ನು ಹಿಮ್ಮೆಟ್ಟಿಸಲು ಪುದೀನಾ ಎಣ್ಣೆ ಉತ್ತಮ ಆಯ್ಕೆ ಎನ್ನಬಹುದು. ನಿಮ್ಮ ಮನೆಯಲ್ಲಿ ಜೇಡಗಳಿದ್ದರೆ ಒಂದು ಸ್ಪ್ರೇ ಬಾಟಲಿಯಲ್ಲಿ 10-15 ಹನಿ ಪುದೀನಾ ಎಣ್ಣೆಯನ್ನು ನೀರಿನೊಂದಿಗೆ ಬೆರೆಸಿ. ಈ ಮಿಶ್ರಣವನ್ನು ಕಿಟಕಿಗಳಿರುವಲ್ಲಿ ಸಿಂಪಡಿಸಿದ್ರೆ, ಇದರ ಬಲವಾದ ವಾಸನೆಗೆ ಜೇಡಗಳು ಹತ್ತಿರ ಕೂಡ ಸುಳಿಯುವುದಿಲ್ಲ.
  • ನಿಂಬೆ ಹಾಗೂ ಪುದೀನಾ :ಸ್ವಲ್ಪ ಪುದೀನಾ ಸೊಪ್ಪನ್ನು ಮಿಕ್ಸಿಗೆ ಹಾಕಿ ನೀರು ಸೇರಿಸಿ ರುಬ್ಬಿ ರಸ ತೆಗೆಯಿರಿ. ಇದಕ್ಕೆ ನಿಂಬೆ ಹಣ್ಣಿನ ರಸವನ್ನು ಹಿಂಡಿಕೊಳ್ಳಿ. ಚೆನ್ನಾಗಿ ಕಲಸಿಕೊಂಡು ಸ್ಪ್ರೇ ಬಾಟಲಿಗೆ ಹಾಕಿಕೊಳ್ಳಿ. ಈ ನೀರನ್ನು ಮನೆಯ ಮೂಲೆ ಮೂಲೆಗೆ ಹಾಗೂ ಜೇಡ ಬಲೆ ಕಟ್ಟುವ ಜಾಗಕ್ಕೆ ಸ್ಪ್ರೇ ಮಾಡಿದ್ರೆ ಆ ಜಾಗದಲ್ಲಿ ಜೇಡರ ಹುಳು ಬಲೆ ಕಟ್ಟುವುದೇ ಇಲ್ಲ.
  • ಬಿಳಿ ವಿನೆಗರ್ ಬಳಸಿ : ಮೊದಲಿಗೆ ಪೊರಕೆಯ ಸಹಾಯದಿಂದ ಜೇಡರ ಬಲೆಯಲ್ಲಿ ಸ್ವಚ್ಛಗೊಳಿಸಿ. ಒಂದು ಪಾತ್ರೆಗೆ ಬಿಳಿ ವಿನೆಗರ್‌ ಹಾಕಿ ಸ್ವಲ್ಪ ನೀರು ಬೆರೆಸಿಕೊಳ್ಳಿ. ಸ್ವಲ್ಪ ಸಮಯ ಬಿಟ್ಟು ಈ ಮಿಶ್ರಣವನ್ನು ಒಂದು ಬಟ್ಟೆಯಲ್ಲಿ ಅದ್ದಿ ಒಂದು ಉದ್ದವಾದ ಕೋಲಿಗೆ ಕಟ್ಟಿ ಜೇಡ ಬಲೆ ಕಟ್ಟುವ ಜಾಗಕ್ಕೆ ಒರೆಸಿ ಕೊಳ್ಳಿ. ಹೀಗೆ ಮಾಡಿದ್ರೆ ಮತ್ತೆ ಆ ಜಾಗದಲ್ಲಿ ಜೇಡರ ಹುಳು ಬಲೆ ಕಟ್ಟುವುದಿಲ್ಲ.
  • ಬೆಳ್ಳುಳ್ಳಿ ಹಾಗೂ ಚೆಕ್ಕೆ : ಮನೆಯಲ್ಲಿ ಜೇಡರ ಹುಳು ಬಲೆ ಕಟ್ಟುತ್ತಿದ್ದರೆ ಬೆಳ್ಳುಳ್ಳಿ ಹಾಗೂ ಚಕ್ಕೆಯ ಮಿಶ್ರಣ ಬಳಸಿ ಬಲೆ ಕಟ್ಟದಂತೆ ತಡೆಯಬಹುದು. ಹೀಗಾಗಿ ಒಂದು ಬಟ್ಟಲಿನಲ್ಲಿ ಬೆಳ್ಳುಳ್ಳಿ ಹಾಗೂ ಚಕ್ಕೆಯ ತುಂಡುಗಳನ್ನು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಇದಕ್ಕೆ ನೀರು ಸೇರಿಸಿ ಚೆನ್ನಾಗಿ ಕಲಸಿಕೊಂಡು ಇದನ್ನು ಮನೆಯ ಮೂಲೆ ಮೂಲೆಗೆ ಹಾಗೂ ಜೇಡ ಬಲೆ ಹೆಣೆಯದಂತೆ ತಡೆಯಲು ಸಹಕಾರಿಯಾಗಿದೆ.
  • ಲ್ಯಾವೆಂಡರ್ ಎಣ್ಣೆ. ಮನೆಯಲ್ಲಿ ಜೇಡರ ಹುಳು ಕಾಟದಿಂದ ಬೇಸೆತ್ತು ಹೋಗಿದ್ರೆ ಲ್ಯಾವೆಂಡರ್ ಎಣ್ಣೆಯನ್ನು ಬಳಸಬಹುದು. ಐದಾರು ಚಮಚ ಲ್ಯಾವೆಂಡರ್ ಎಣ್ಣೆಗೆ ನೀರು ಬೆರೆಸಿಕೊಳ್ಳಿ. ಇದನ್ನು ಜೇಡಗಳು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಸಿಂಪಡಿಸಿದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು