AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆಯ ರುಚಿ ಹೆಚ್ಚಿಸುವ ಶುಂಠಿಯನ್ನು ಆಹಾರದಲ್ಲಿ ಎಲ್ಲರೂ ಬಳಸುತ್ತಾರೆ. ಆದರೆ ಮಾರುಕಟ್ಟೆ, ಅಂಗಡಿಗಳಿಂದ ತರುವ ಶುಂಠಿಯಂತೂ ಮಣ್ಣಿನಿಂದ ಕೂಡಿರುತ್ತದೆ. ಎಷ್ಟೇ ತೊಳೆದರೂ ಕೂಡ ಇದರ ಮೇಲಿರುವ ಮಣ್ಣು ಹೋಗುವುದೇ ಇಲ್ಲ, ಹೀಗಾಗಿ ಶುಂಠಿ ಸಿಪ್ಪೆ ತೆಗೆದೇ ಅಡುಗೆಗೆ ಬಳಸಬೇಕು. ಆದರೆ ಈ ಶುಂಠಿಯೂ ಬೇರಾಗಿದ್ದು, ಇದರಲ್ಲಿ ಕವಲುಗಳು ಇರುತ್ತದೆ. ಸಿಪ್ಪೆ ತೆಗೆಯುವುದೇ ಕಷ್ಟದ ಕೆಲಸ. ಈ ಕೆಲವು ಟ್ರಿಕ್ಸ್ ಬಳಸಿಕೊಂಡರೆ ಸಿಪ್ಪೆ ತೆಗೆಯುವುದು ಸುಲಭದಾಯಕವಾಗಿದೆ.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 04, 2024 | 3:23 PM

Share

ವೆಜ್ ಇರಲಿ, ನಾನ್ ವೆಜ್ ಇರಲಿ ಎಲ್ಲಾ ವಿಧದ ಅಡುಗೆಗೂ ಶುಂಠಿ ಇರಲೇಬೇಕು. ಅಡುಗೆಗೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗೂ ಔಷಧವಾಗಿ ಇದನ್ನು ಬಳಸಲಾಗುತ್ತದೆ. ಕೆಲವರಂತೂ ಶುಂಠಿ ಟೀಯನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆದರೆ ಅಡುಗೆಗೆ ಬಳಸುವ ಮುನ್ನ ಇದರ ಸಿಪ್ಪೆ ಸುಲಿದು ಬಳಸುವುದು ಉತ್ತಮ. ಈ ಸಿಪ್ಪೆಯೂ ಅಂಟಿಕೊಂಡಿರುವುದರಿಂದ ಇದನ್ನು ಸುಲಿಯುವುದು ತುಂಬಾ ಕಿರಿಕಿರಿ ಉಂಟುಮಾಡುವ ಕೆಲಸವಾಗಿದೆ. ಎಳೆ ಶುಂಠಿಯ ಸಿಪ್ಪೆಯನ್ನು ಕೈ ಬೆರಳು ಸಹಾಯದಿಂದಲೇ ಸುಲಿಯ ಬಹುದು. ಆದರೆ ಬಲಿತ ಶುಂಠಿ ಸಿಪ್ಪೆಯನ್ನು ಕೈ ಬೆರಳಿನಲ್ಲಿ ತೆಗೆಯಲು ಹೋದರೆ ಕೈ ನೋವು ಶುರುವಾಗುತ್ತದೆ. ಹೀಗಾಗಿ ಸಿಪ್ಪೆ ತೆಗೆಯಲು ಇಲ್ಲಿದೆ ಕೆಲವು ಟಿಪ್ಸ್

  • ಶುಂಠಿ ಮಣ್ಣಿನೊಳೆಗೆ ಬೆಳೆಯುವುದರಿಂದ, ಶುಂಠಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ಸ್ವಲ್ಪ ಸಮಯದವರೆಗೆ ಅದನ್ನು ನೀರಿನಲ್ಲಿ ನೆನೆ ಹಾಕಿದರೆ ಸುಲಭವಾಗಿ ಸಿಪ್ಪೆ ತೆಗೆಯಬಹುದು.
  • ಚಾಕುವಿನಲ್ಲಿ ಸಿಪ್ಪೆ ತೆಗೆದರೆ ಶುಂಠಿಯ ಅರ್ಧ ಭಾಗವೇ ಸಿಪ್ಪೆಯೊಂದಿಗೆ ಹೋಗುತ್ತವೆ. ಹೀಗಾಗಿ ಇದರ ಸಿಪ್ಪೆ ತೆಗೆಯಲು ಸ್ಪೂನ್‌ ಬಳಸುವುದು ಉತ್ತಮ ಮಾರ್ಗವಾಗಿದೆ. ಚಮಚದ ಮುಂಭಾಗವನ್ನು ಬಳಸಿ ಶುಂಠಿಯ ಸಿಪ್ಪೆಯನ್ನು ತೆಗೆಯಿರಿ.
  • ಶುಂಠಿಯನ್ನು ಸ್ವಲ್ಪ ಸಮಯದವರೆಗೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ಆ ಬಳಿಕ ಶುಂಠಿ ಸಿಪ್ಪೆಯಲ್ಲಿ ಕೈಯಿಂದಲೇ ತೆಗೆಯಬಹುದು.
  • ಅಡುಗೆಗೆ ಮುನ್ನ ಅರ್ಧ ಗಂಟೆಗಳ ಕಾಲ ಶುಂಠಿಯನ್ನು ಫ್ರಿಡ್ಜ್‌ನಲ್ಲಿ ಇಡಬೇಕು. ಆಗ ಸಿಪ್ಪೆ ಮೃದುವಾಗುತ್ತದೆ, ಚಾಕು ಸಹಾಯದಿಂದ ಸುಲಭವಾಗಿ ತೆಗೆಯಬಹುದು.
  • ಶುಂಠಿ ಕತ್ತರಿಸುವ ಸಾಧನಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಇದನ್ನು ಬಳಸಿಕೊಂಡು ಶುಂಠಿಯ ಮೇಲ್ಪದರ ತೆಗೆಯುವುದು ಕಷ್ಟವೇನಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ