AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆಯ ರುಚಿ ಹೆಚ್ಚಿಸುವ ಶುಂಠಿಯನ್ನು ಆಹಾರದಲ್ಲಿ ಎಲ್ಲರೂ ಬಳಸುತ್ತಾರೆ. ಆದರೆ ಮಾರುಕಟ್ಟೆ, ಅಂಗಡಿಗಳಿಂದ ತರುವ ಶುಂಠಿಯಂತೂ ಮಣ್ಣಿನಿಂದ ಕೂಡಿರುತ್ತದೆ. ಎಷ್ಟೇ ತೊಳೆದರೂ ಕೂಡ ಇದರ ಮೇಲಿರುವ ಮಣ್ಣು ಹೋಗುವುದೇ ಇಲ್ಲ, ಹೀಗಾಗಿ ಶುಂಠಿ ಸಿಪ್ಪೆ ತೆಗೆದೇ ಅಡುಗೆಗೆ ಬಳಸಬೇಕು. ಆದರೆ ಈ ಶುಂಠಿಯೂ ಬೇರಾಗಿದ್ದು, ಇದರಲ್ಲಿ ಕವಲುಗಳು ಇರುತ್ತದೆ. ಸಿಪ್ಪೆ ತೆಗೆಯುವುದೇ ಕಷ್ಟದ ಕೆಲಸ. ಈ ಕೆಲವು ಟ್ರಿಕ್ಸ್ ಬಳಸಿಕೊಂಡರೆ ಸಿಪ್ಪೆ ತೆಗೆಯುವುದು ಸುಲಭದಾಯಕವಾಗಿದೆ.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 04, 2024 | 3:23 PM

Share

ವೆಜ್ ಇರಲಿ, ನಾನ್ ವೆಜ್ ಇರಲಿ ಎಲ್ಲಾ ವಿಧದ ಅಡುಗೆಗೂ ಶುಂಠಿ ಇರಲೇಬೇಕು. ಅಡುಗೆಗೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗೂ ಔಷಧವಾಗಿ ಇದನ್ನು ಬಳಸಲಾಗುತ್ತದೆ. ಕೆಲವರಂತೂ ಶುಂಠಿ ಟೀಯನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆದರೆ ಅಡುಗೆಗೆ ಬಳಸುವ ಮುನ್ನ ಇದರ ಸಿಪ್ಪೆ ಸುಲಿದು ಬಳಸುವುದು ಉತ್ತಮ. ಈ ಸಿಪ್ಪೆಯೂ ಅಂಟಿಕೊಂಡಿರುವುದರಿಂದ ಇದನ್ನು ಸುಲಿಯುವುದು ತುಂಬಾ ಕಿರಿಕಿರಿ ಉಂಟುಮಾಡುವ ಕೆಲಸವಾಗಿದೆ. ಎಳೆ ಶುಂಠಿಯ ಸಿಪ್ಪೆಯನ್ನು ಕೈ ಬೆರಳು ಸಹಾಯದಿಂದಲೇ ಸುಲಿಯ ಬಹುದು. ಆದರೆ ಬಲಿತ ಶುಂಠಿ ಸಿಪ್ಪೆಯನ್ನು ಕೈ ಬೆರಳಿನಲ್ಲಿ ತೆಗೆಯಲು ಹೋದರೆ ಕೈ ನೋವು ಶುರುವಾಗುತ್ತದೆ. ಹೀಗಾಗಿ ಸಿಪ್ಪೆ ತೆಗೆಯಲು ಇಲ್ಲಿದೆ ಕೆಲವು ಟಿಪ್ಸ್

  • ಶುಂಠಿ ಮಣ್ಣಿನೊಳೆಗೆ ಬೆಳೆಯುವುದರಿಂದ, ಶುಂಠಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ಸ್ವಲ್ಪ ಸಮಯದವರೆಗೆ ಅದನ್ನು ನೀರಿನಲ್ಲಿ ನೆನೆ ಹಾಕಿದರೆ ಸುಲಭವಾಗಿ ಸಿಪ್ಪೆ ತೆಗೆಯಬಹುದು.
  • ಚಾಕುವಿನಲ್ಲಿ ಸಿಪ್ಪೆ ತೆಗೆದರೆ ಶುಂಠಿಯ ಅರ್ಧ ಭಾಗವೇ ಸಿಪ್ಪೆಯೊಂದಿಗೆ ಹೋಗುತ್ತವೆ. ಹೀಗಾಗಿ ಇದರ ಸಿಪ್ಪೆ ತೆಗೆಯಲು ಸ್ಪೂನ್‌ ಬಳಸುವುದು ಉತ್ತಮ ಮಾರ್ಗವಾಗಿದೆ. ಚಮಚದ ಮುಂಭಾಗವನ್ನು ಬಳಸಿ ಶುಂಠಿಯ ಸಿಪ್ಪೆಯನ್ನು ತೆಗೆಯಿರಿ.
  • ಶುಂಠಿಯನ್ನು ಸ್ವಲ್ಪ ಸಮಯದವರೆಗೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ಆ ಬಳಿಕ ಶುಂಠಿ ಸಿಪ್ಪೆಯಲ್ಲಿ ಕೈಯಿಂದಲೇ ತೆಗೆಯಬಹುದು.
  • ಅಡುಗೆಗೆ ಮುನ್ನ ಅರ್ಧ ಗಂಟೆಗಳ ಕಾಲ ಶುಂಠಿಯನ್ನು ಫ್ರಿಡ್ಜ್‌ನಲ್ಲಿ ಇಡಬೇಕು. ಆಗ ಸಿಪ್ಪೆ ಮೃದುವಾಗುತ್ತದೆ, ಚಾಕು ಸಹಾಯದಿಂದ ಸುಲಭವಾಗಿ ತೆಗೆಯಬಹುದು.
  • ಶುಂಠಿ ಕತ್ತರಿಸುವ ಸಾಧನಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಇದನ್ನು ಬಳಸಿಕೊಂಡು ಶುಂಠಿಯ ಮೇಲ್ಪದರ ತೆಗೆಯುವುದು ಕಷ್ಟವೇನಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?