AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆಯ ರುಚಿ ಹೆಚ್ಚಿಸುವ ಶುಂಠಿಯನ್ನು ಆಹಾರದಲ್ಲಿ ಎಲ್ಲರೂ ಬಳಸುತ್ತಾರೆ. ಆದರೆ ಮಾರುಕಟ್ಟೆ, ಅಂಗಡಿಗಳಿಂದ ತರುವ ಶುಂಠಿಯಂತೂ ಮಣ್ಣಿನಿಂದ ಕೂಡಿರುತ್ತದೆ. ಎಷ್ಟೇ ತೊಳೆದರೂ ಕೂಡ ಇದರ ಮೇಲಿರುವ ಮಣ್ಣು ಹೋಗುವುದೇ ಇಲ್ಲ, ಹೀಗಾಗಿ ಶುಂಠಿ ಸಿಪ್ಪೆ ತೆಗೆದೇ ಅಡುಗೆಗೆ ಬಳಸಬೇಕು. ಆದರೆ ಈ ಶುಂಠಿಯೂ ಬೇರಾಗಿದ್ದು, ಇದರಲ್ಲಿ ಕವಲುಗಳು ಇರುತ್ತದೆ. ಸಿಪ್ಪೆ ತೆಗೆಯುವುದೇ ಕಷ್ಟದ ಕೆಲಸ. ಈ ಕೆಲವು ಟ್ರಿಕ್ಸ್ ಬಳಸಿಕೊಂಡರೆ ಸಿಪ್ಪೆ ತೆಗೆಯುವುದು ಸುಲಭದಾಯಕವಾಗಿದೆ.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 04, 2024 | 3:23 PM

Share

ವೆಜ್ ಇರಲಿ, ನಾನ್ ವೆಜ್ ಇರಲಿ ಎಲ್ಲಾ ವಿಧದ ಅಡುಗೆಗೂ ಶುಂಠಿ ಇರಲೇಬೇಕು. ಅಡುಗೆಗೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗೂ ಔಷಧವಾಗಿ ಇದನ್ನು ಬಳಸಲಾಗುತ್ತದೆ. ಕೆಲವರಂತೂ ಶುಂಠಿ ಟೀಯನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆದರೆ ಅಡುಗೆಗೆ ಬಳಸುವ ಮುನ್ನ ಇದರ ಸಿಪ್ಪೆ ಸುಲಿದು ಬಳಸುವುದು ಉತ್ತಮ. ಈ ಸಿಪ್ಪೆಯೂ ಅಂಟಿಕೊಂಡಿರುವುದರಿಂದ ಇದನ್ನು ಸುಲಿಯುವುದು ತುಂಬಾ ಕಿರಿಕಿರಿ ಉಂಟುಮಾಡುವ ಕೆಲಸವಾಗಿದೆ. ಎಳೆ ಶುಂಠಿಯ ಸಿಪ್ಪೆಯನ್ನು ಕೈ ಬೆರಳು ಸಹಾಯದಿಂದಲೇ ಸುಲಿಯ ಬಹುದು. ಆದರೆ ಬಲಿತ ಶುಂಠಿ ಸಿಪ್ಪೆಯನ್ನು ಕೈ ಬೆರಳಿನಲ್ಲಿ ತೆಗೆಯಲು ಹೋದರೆ ಕೈ ನೋವು ಶುರುವಾಗುತ್ತದೆ. ಹೀಗಾಗಿ ಸಿಪ್ಪೆ ತೆಗೆಯಲು ಇಲ್ಲಿದೆ ಕೆಲವು ಟಿಪ್ಸ್

  • ಶುಂಠಿ ಮಣ್ಣಿನೊಳೆಗೆ ಬೆಳೆಯುವುದರಿಂದ, ಶುಂಠಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ಸ್ವಲ್ಪ ಸಮಯದವರೆಗೆ ಅದನ್ನು ನೀರಿನಲ್ಲಿ ನೆನೆ ಹಾಕಿದರೆ ಸುಲಭವಾಗಿ ಸಿಪ್ಪೆ ತೆಗೆಯಬಹುದು.
  • ಚಾಕುವಿನಲ್ಲಿ ಸಿಪ್ಪೆ ತೆಗೆದರೆ ಶುಂಠಿಯ ಅರ್ಧ ಭಾಗವೇ ಸಿಪ್ಪೆಯೊಂದಿಗೆ ಹೋಗುತ್ತವೆ. ಹೀಗಾಗಿ ಇದರ ಸಿಪ್ಪೆ ತೆಗೆಯಲು ಸ್ಪೂನ್‌ ಬಳಸುವುದು ಉತ್ತಮ ಮಾರ್ಗವಾಗಿದೆ. ಚಮಚದ ಮುಂಭಾಗವನ್ನು ಬಳಸಿ ಶುಂಠಿಯ ಸಿಪ್ಪೆಯನ್ನು ತೆಗೆಯಿರಿ.
  • ಶುಂಠಿಯನ್ನು ಸ್ವಲ್ಪ ಸಮಯದವರೆಗೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ಆ ಬಳಿಕ ಶುಂಠಿ ಸಿಪ್ಪೆಯಲ್ಲಿ ಕೈಯಿಂದಲೇ ತೆಗೆಯಬಹುದು.
  • ಅಡುಗೆಗೆ ಮುನ್ನ ಅರ್ಧ ಗಂಟೆಗಳ ಕಾಲ ಶುಂಠಿಯನ್ನು ಫ್ರಿಡ್ಜ್‌ನಲ್ಲಿ ಇಡಬೇಕು. ಆಗ ಸಿಪ್ಪೆ ಮೃದುವಾಗುತ್ತದೆ, ಚಾಕು ಸಹಾಯದಿಂದ ಸುಲಭವಾಗಿ ತೆಗೆಯಬಹುದು.
  • ಶುಂಠಿ ಕತ್ತರಿಸುವ ಸಾಧನಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಇದನ್ನು ಬಳಸಿಕೊಂಡು ಶುಂಠಿಯ ಮೇಲ್ಪದರ ತೆಗೆಯುವುದು ಕಷ್ಟವೇನಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು