AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆಯ ರುಚಿ ಹೆಚ್ಚಿಸುವ ಶುಂಠಿಯನ್ನು ಆಹಾರದಲ್ಲಿ ಎಲ್ಲರೂ ಬಳಸುತ್ತಾರೆ. ಆದರೆ ಮಾರುಕಟ್ಟೆ, ಅಂಗಡಿಗಳಿಂದ ತರುವ ಶುಂಠಿಯಂತೂ ಮಣ್ಣಿನಿಂದ ಕೂಡಿರುತ್ತದೆ. ಎಷ್ಟೇ ತೊಳೆದರೂ ಕೂಡ ಇದರ ಮೇಲಿರುವ ಮಣ್ಣು ಹೋಗುವುದೇ ಇಲ್ಲ, ಹೀಗಾಗಿ ಶುಂಠಿ ಸಿಪ್ಪೆ ತೆಗೆದೇ ಅಡುಗೆಗೆ ಬಳಸಬೇಕು. ಆದರೆ ಈ ಶುಂಠಿಯೂ ಬೇರಾಗಿದ್ದು, ಇದರಲ್ಲಿ ಕವಲುಗಳು ಇರುತ್ತದೆ. ಸಿಪ್ಪೆ ತೆಗೆಯುವುದೇ ಕಷ್ಟದ ಕೆಲಸ. ಈ ಕೆಲವು ಟ್ರಿಕ್ಸ್ ಬಳಸಿಕೊಂಡರೆ ಸಿಪ್ಪೆ ತೆಗೆಯುವುದು ಸುಲಭದಾಯಕವಾಗಿದೆ.

Kitchen Hacks : ಸುಲಭವಾಗಿ ಶುಂಠಿ ಸಿಪ್ಪೆ ತೆಗೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 04, 2024 | 3:23 PM

Share

ವೆಜ್ ಇರಲಿ, ನಾನ್ ವೆಜ್ ಇರಲಿ ಎಲ್ಲಾ ವಿಧದ ಅಡುಗೆಗೂ ಶುಂಠಿ ಇರಲೇಬೇಕು. ಅಡುಗೆಗೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗೂ ಔಷಧವಾಗಿ ಇದನ್ನು ಬಳಸಲಾಗುತ್ತದೆ. ಕೆಲವರಂತೂ ಶುಂಠಿ ಟೀಯನ್ನು ಇಷ್ಟ ಪಟ್ಟು ಸೇವಿಸುತ್ತಾರೆ. ಆದರೆ ಅಡುಗೆಗೆ ಬಳಸುವ ಮುನ್ನ ಇದರ ಸಿಪ್ಪೆ ಸುಲಿದು ಬಳಸುವುದು ಉತ್ತಮ. ಈ ಸಿಪ್ಪೆಯೂ ಅಂಟಿಕೊಂಡಿರುವುದರಿಂದ ಇದನ್ನು ಸುಲಿಯುವುದು ತುಂಬಾ ಕಿರಿಕಿರಿ ಉಂಟುಮಾಡುವ ಕೆಲಸವಾಗಿದೆ. ಎಳೆ ಶುಂಠಿಯ ಸಿಪ್ಪೆಯನ್ನು ಕೈ ಬೆರಳು ಸಹಾಯದಿಂದಲೇ ಸುಲಿಯ ಬಹುದು. ಆದರೆ ಬಲಿತ ಶುಂಠಿ ಸಿಪ್ಪೆಯನ್ನು ಕೈ ಬೆರಳಿನಲ್ಲಿ ತೆಗೆಯಲು ಹೋದರೆ ಕೈ ನೋವು ಶುರುವಾಗುತ್ತದೆ. ಹೀಗಾಗಿ ಸಿಪ್ಪೆ ತೆಗೆಯಲು ಇಲ್ಲಿದೆ ಕೆಲವು ಟಿಪ್ಸ್

  • ಶುಂಠಿ ಮಣ್ಣಿನೊಳೆಗೆ ಬೆಳೆಯುವುದರಿಂದ, ಶುಂಠಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ಸ್ವಲ್ಪ ಸಮಯದವರೆಗೆ ಅದನ್ನು ನೀರಿನಲ್ಲಿ ನೆನೆ ಹಾಕಿದರೆ ಸುಲಭವಾಗಿ ಸಿಪ್ಪೆ ತೆಗೆಯಬಹುದು.
  • ಚಾಕುವಿನಲ್ಲಿ ಸಿಪ್ಪೆ ತೆಗೆದರೆ ಶುಂಠಿಯ ಅರ್ಧ ಭಾಗವೇ ಸಿಪ್ಪೆಯೊಂದಿಗೆ ಹೋಗುತ್ತವೆ. ಹೀಗಾಗಿ ಇದರ ಸಿಪ್ಪೆ ತೆಗೆಯಲು ಸ್ಪೂನ್‌ ಬಳಸುವುದು ಉತ್ತಮ ಮಾರ್ಗವಾಗಿದೆ. ಚಮಚದ ಮುಂಭಾಗವನ್ನು ಬಳಸಿ ಶುಂಠಿಯ ಸಿಪ್ಪೆಯನ್ನು ತೆಗೆಯಿರಿ.
  • ಶುಂಠಿಯನ್ನು ಸ್ವಲ್ಪ ಸಮಯದವರೆಗೆ ಬಿಸಿ ನೀರಿನಲ್ಲಿ ನೆನೆಸಿಡಬೇಕು. ಆ ಬಳಿಕ ಶುಂಠಿ ಸಿಪ್ಪೆಯಲ್ಲಿ ಕೈಯಿಂದಲೇ ತೆಗೆಯಬಹುದು.
  • ಅಡುಗೆಗೆ ಮುನ್ನ ಅರ್ಧ ಗಂಟೆಗಳ ಕಾಲ ಶುಂಠಿಯನ್ನು ಫ್ರಿಡ್ಜ್‌ನಲ್ಲಿ ಇಡಬೇಕು. ಆಗ ಸಿಪ್ಪೆ ಮೃದುವಾಗುತ್ತದೆ, ಚಾಕು ಸಹಾಯದಿಂದ ಸುಲಭವಾಗಿ ತೆಗೆಯಬಹುದು.
  • ಶುಂಠಿ ಕತ್ತರಿಸುವ ಸಾಧನಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಇದನ್ನು ಬಳಸಿಕೊಂಡು ಶುಂಠಿಯ ಮೇಲ್ಪದರ ತೆಗೆಯುವುದು ಕಷ್ಟವೇನಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ