Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks: ಆಲೂಗಡ್ಡೆ ಮೊಳಕೆಯೊಡೆಯದಂತೆ ನೋಡಿಕೊಳ್ಳಿ, ತಾಜಾವಾಗಿ ಶೇಖರಿಸಿಡುವುದು ಹೇಗೆ?

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಇರುವ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಆದರೆ ಅಸಮರ್ಪಕ ಶೇಖರಣೆಯಿಂದಾಗಿ ಆಲೂಗಡ್ಡೆ ಬೇಗನೇ ಕೊಳೆತು ಹೋಗುತ್ತದೆ, ಇಲ್ಲದಿದ್ದರೆ ಮೊಳಕೆಯೊಡೆಯಲು ಪ್ರಾರಂಭವಾಗುತ್ತದೆ. ಈ ಮೊಳಕೆಯೊಡೆದ ಆಲೂಗಡ್ಡೆಯನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಮಾರುಕಟ್ಟೆಯಿಂದ ತಂದ ಆಲೂಗಡ್ಡೆಯನ್ನು ತಾಜಾವಾಗಿ ಮೊಳಕೆಯೊಡೆಯದಂತೆ ಸಂಗ್ರಹಿಸಿಡುವುದು ಹೇಗೆ? ಹಾಗಾದ್ರೆ ಈ ಸಲಹೆ ತಪ್ಪದೇ ಪಾಲಿಸಿ.

Kitchen Hacks: ಆಲೂಗಡ್ಡೆ ಮೊಳಕೆಯೊಡೆಯದಂತೆ ನೋಡಿಕೊಳ್ಳಿ, ತಾಜಾವಾಗಿ ಶೇಖರಿಸಿಡುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 09, 2025 | 5:01 PM

ಮನೆಯಲ್ಲಿ ಬೇರೆ ಯಾವುದೇ ತರಕಾರಿಯಿಲ್ಲದೆ ಹೋದರೂ ಆಲೂಗಡ್ಡೆಯಿದ್ದು ಬಿಟ್ಟರೆ ರುಚಿಕರವಾದ ಸಾಂಬಾರ್ ಮಾಡಬಹುದು. ಈ ದೋಸೆಗೆ ಆಲೂಗಡ್ಡೆ ಪಲ್ಯ ಬೆಸ್ಟ್ ಕಾಂಬಿನೇಶನ್ ಎನ್ನಬಹುದು. ಆದರೆ ಆಲೂಗಡ್ಡೆ ಹಾಗೆಯೇ ಇಟ್ಟುಬಿಟ್ಟರೆ ಬೇಗನೇ ಕೊಳೆತು ಹೋಗುತ್ತದೆ. ತಂಪಾದ ವಾತಾವರಣಕ್ಕೆ ಮೊಳಕೆಯೊಡೆಯುತ್ತದೆ. ಆದರೆ ಈ ವಿಧಾನ ಅನುಸರಿಸಿದರೆ ಆಲೂಗಡ್ಡೆ ಹಾಳಾಗದೇ, ಮೊಳಕೆಯೊಡೆಯದಂತೆ ಅನೇಕ ತಿಂಗಳುಗಳ ಕಾಲ ಶೇಖರಿಸಿ ಇಡಬಹುದು.

  • ಆಲೂಗಡ್ಡೆಯಲ್ಲಿ ಮೊಳಕೆಯೊಡೆಯುವುದನ್ನು ತಪ್ಪಿಸಲು ಅತ್ಯುತ್ತಮ ಮಾರ್ಗವೆಂದರೆ ಅವುಗಳನ್ನು ದಾಸ್ತಾನು ಮಾಡುವುದನ್ನು ತಪ್ಪಿಸುವುದು. ಹೀಗಾಗಿ ಅವಶ್ಯಕತೆಗಳಿಗೆ ಅನುಗುಣವಾಗಿ ಖರೀದಿಸುವುದು ಉತ್ತಮ.
  • ಆಲೂಗಡ್ಡೆಗಳನ್ನು ತಂಪಾದ, ಗಾಢವಾದ ಮತ್ತು ಚೆನ್ನಾಗಿ ಗಾಳಿ ಇರುವ ಜಾಗದಲ್ಲಿ ಶೇಖರಿಸಿಡಬೇಕು. ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸುವುದನ್ನು ತಪ್ಪಿಸಿ. ತಂಪಾದ ವಾತಾವರಣವು ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸುತ್ತದೆ, ಇದರಿಂದ ರುಚಿಯನ್ನು ಬದಲಾಗುತ್ತದೆ.
  • ಹೆಚ್ಚುವರಿ ತೇವಾಂಶವು ಮೊಳಕೆಯೊಡೆಯಲು ಕಾರಣವಾಗುತ್ತದೆ. ಹೀಗಾಗಿ ಮುಚ್ಚಿದ ಪ್ಲಾಸ್ಟಿಕ್ ಚೀಲಗಳ ಬದಲಿಗೆ ಕಾಗದದ ಚೀಲ, ಗೋಣಿ ಚೀಲ ಹಾಗೂ ಬುಟ್ಟಿಯಂತಹ ಗಾಳಿಯಾಡುವ ಕಂಟೇನರ್‌ನಲ್ಲಿ ಆಲೂಗಡ್ಡೆ ಸಂಗ್ರಹಿಸಿಡುವುದು ಒಳ್ಳೆಯದು.
  • ಆಲೂಗಡ್ಡೆಯನ್ನು ಈರುಳ್ಳಿ ಅಥವಾ ಬಾಳೆಹಣ್ಣಿನೊಂದಿಗೆ ಶೇಖರಿಸಬೇಡಿ. ಇವುಗಳು ಎಥಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತವೆ, ಇದರಿಂದ ಆಲೂಗಡ್ಡೆ ವೇಗವಾಗಿ ಮೊಳಕೆಯೊಡೆಯುತ್ತವೆ.
  • ಕಪ್ಪಾದ ಕಲೆಯಿರುವ ಹಾಗೂ ಹಾಳಾದ ಆಲೂಗಡ್ಡೆಯನ್ನು ಖರೀದಿಸಬೇಡಿ. ಮಾರುಕಟ್ಟೆಯಿಂದ ತಂದ ಈ ತರಕಾರಿಯನ್ನು ತಂಪಾದ, ಶುಷ್ಕ ಮತ್ತು ಡಾರ್ಕ್ ಆದ ಸ್ಥಳದಲ್ಲಿ ಸಂಗ್ರಹಿಸಬೇಕು.
  • ಆಲೂಗಡ್ಡೆಗಳನ್ನು ಸೂರ್ಯನ ಬೆಳಕಿನಿಂದ ಸಾಧ್ಯವಾದಷ್ಟು ದೂರವಿಡುವುದು ಒಳ್ಳೆಯದು. ಹೆಚ್ಚಿನ ಬೆಳಕು ಹಸಿರೀಕರಣವನ್ನು ಪ್ರಚೋದಿಸಿ ಕ್ಲೋರೊಫಿಲ್ ಅನ್ನು ಉತ್ಪಾದಿಸುತ್ತದೆ. ಹಸಿರುಗೊಳಿಸುವಿಕೆಯು ಆಲೂಗಡ್ಡೆಯನ್ನು ಕಹಿಯಾಗಿಸುತ್ತದೆ, ಇದರಿಂದ ರುಚಿಯು ಬದಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ