AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Hacks: ದಿನನಿತ್ಯ ಬಳಸುವ ಕಡಲೆಹಿಟ್ಟು ಅಸಲಿಯೇ ನಕಲಿಯೇ? ಮನೆಯಲ್ಲಿ ಹೀಗೆ ಪತ್ತೆ ಹಚ್ಚಿ

ಇತ್ತೀಚೆಗಿನ ದಿನಗಳಲ್ಲಿ ಲಾಭದ ದೃಷ್ಟಿಯಿಂದ ಮಾರುಕಟ್ಟೆಯಲ್ಲಿ ಬಹುತೇಕ ಎಲ್ಲಾ ವಸ್ತುಗಳನ್ನು ಕಲಬೆರಕೆ ಮಾಡಲಾಗುತ್ತಿದೆ. ಆದರೆ ಕಲಬೆರಕೆಯುಕ್ತ ಆಹಾರ ಪದಾರ್ಥಗಳ ಸೇವನೆಯೂ ಆರೋಗ್ಯಕ್ಕೆ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ಈ ಕಲಬೆರಕೆ ಆಹಾರ ಪದಾರ್ಥಗಳ ಸಾಲಿಗೆ ಕಡಲೆಹಿಟ್ಟು ಸೇರಿದ್ದು, ಮೈದಾ, ಗೋಧಿ ಹಿಟ್ಟು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಸೇರಿಸಿ ಕಲಬೆರಕೆ ಮಾಡಲಾಗುತ್ತಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಖರೀದಿಸಿ ತಂದ ಕಡಲೆಹಿಟ್ಟು ಅಸಲಿಯೇ, ನಕಲಿಯೇ ಎಂದು ತಿಳಿಯಲು ಈ ಕೆಲವು ವಿಧಾನಗಳ ಅನುಸರಿಸಬಹುದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Kitchen Hacks: ದಿನನಿತ್ಯ ಬಳಸುವ ಕಡಲೆಹಿಟ್ಟು ಅಸಲಿಯೇ ನಕಲಿಯೇ? ಮನೆಯಲ್ಲಿ ಹೀಗೆ ಪತ್ತೆ ಹಚ್ಚಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 25, 2025 | 3:47 PM

Share

ರುಚಿಕರವಾದ ಬಜ್ಜಿ, ಪಕೋಡ, ಸಿಹಿಖಾದ್ಯಗಳು, ಮಿಕ್ಚರ್‌ ಸೇರಿದಂತೆ ಇನ್ನಿತ್ತರ ಖಾದ್ಯಗಳ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ತ್ವಚೆಯ ಅಂದ ಹೆಚ್ಚಿಸಲು ಕಡಲೆಹಿಟ್ಟನ್ನು ಬಳಸುತ್ತಾರೆ. ಹೀಗಾಗಿ ಈ ಕಡಲೆ ಹಿಟ್ಟು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಇತರ ಪ್ರಮುಖ ಖನಿಜಗಳು ಮೂಳೆಗಳನ್ನು ಬಲವಾಗಿಡಲು ಸಹಾಯ ಮಾಡುತ್ತದೆಆದರೆ ಮಾರುಕಟ್ಟೆಯಲ್ಲಿ ತಂದ ಕಡಲೆಹಿಟ್ಟಿನ ಶುದ್ಧತೆಯನ್ನು ಪತ್ತೆ ಹಚ್ಚುವುದು ಬಹಳ ಮುಖ್ಯ. ಕಲಬೆರಕೆಯುಕ್ತ ಈ ಹಿಟ್ಟಿನ ಸೇವನೆಯೂ ಕೀಲು ನೋವು, ಅಂಗವೈಕಲ್ಯ ಮತ್ತು ಹೊಟ್ಟೆ ಕಾಯಿಲೆಗಳು ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಲ್ಲದು. ಹಾಗಾದ್ರೆ ನಕಲಿ ಕಡಲೆಹಿಟ್ಟನ್ನು ಈ ರೀತಿ ಸುಲಭವಾಗಿ ಮನೆಯಲ್ಲಿ ಪತ್ತೆ ಹಚ್ಚಬಹುದು.

ನಕಲಿ ಕಡಲೆಹಿಟ್ಟನ್ನು ಪತ್ತೆಹಚ್ಚಲು ಇಲ್ಲಿದೆ ಸುಲಭ ವಿಧಾನ

* ಕಡಲೆಹಿಟ್ಟನ್ನು ಹೈಡ್ರೋಕ್ಲೋರಿಕ್ ಆಮ್ಲದಿಂದ ಅಸಲಿಯೇ ನಕಲಿಯೇ ಎಂದು ಪತ್ತೆ ಹಚ್ಚಬಹುದು. ಒಂದು ಬಟ್ಟಲಿನಲ್ಲಿ ಎರಡರಿಂದ ಮೂರು ಚಮಚ ಕಡಲೆಹಿಟ್ಟನ್ನು ತೆಗೆದುಕೊಂಡು ಅದನ್ನು ನೀರಿನಿಂದ ಪೇಸ್ಟ್ ರೀತಿ ಮಿಶ್ರಣ ಮಾಡಿ. ಈ ಮಿಶ್ರಣಕ್ಕೆ ಎರಡು ಚಮಚ ಹೈಡ್ರೋಕ್ಲೋರಿಕ್ ಆಮ್ಲವನ್ನು ಮಿಶ್ರಣ ಮಾಡಿ, ಕೆಲವು ನಿಮಿಷಗಳ ಕಾಲ ಹಾಗೆಯೇ ಬಿಡಿ. ಈ ಹಿಟ್ಟು ಕೆಂಪು ಬಣ್ಣಕ್ಕೆ ತಿರುಗಿದರೆ, ಇದು ಕಲಬೆರಕೆಯಾಗಿದೆ ಎಂದರ್ಥ.

* ನಿಂಬೆ ಹಣ್ಣನ್ನು ಬಳಸಿ ನೀವು ಕಡಲೆಹಿಟ್ಟನ್ನು ಅಸಲಿಯೇ, ನಕಲಿಯೇ ಎಂದು ಸುಲಭವಾಗಿ ಗುರುತಿಸಬಹುದು. ಒಂದು ಪಾತ್ರೆಯಲ್ಲಿ ಮೂರು ಚಮಚ ಕಡಲೆ ಹಿಟ್ಟನ್ನು ತೆಗೆದುಕೊಳ್ಳಿ. ಅದಕ್ಕೆ ಸಮಾ ಪ್ರಮಾಣದ ನಿಂಬೆ ರಸವನ್ನು ಮಿಶ್ರಣ ಮಾಡಿ. ಆ ಬಳಿಕ ಹೈಡ್ರೋಕ್ಲೋರಿಕ್ ಆಮ್ಲವನ್ನೂ ಸೇರಿಸಿ. ಐದು ನಿಮಿಷಗಳ ಬಳಿಕ ಕಡಲೆಹಿಟ್ಟು ಕಂದು ಅಥವಾ ಕೆಂಪು ಬಣ್ಣಕ್ಕೆ ತಿರುಗಿದರೆ ಕಲಬೆರಕೆಯಾಗಿದೆ ಎನ್ನುವುದು ಖಚಿತವಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!