AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆಯಲ್ಲಿ ತರಕಾರಿಗಳು ಬೇಗನೇ ಹಾಳಾಗುತ್ತವೆ. ಈ ಋತುವಿನಲ್ಲಿ ತರಕಾರಿಗಳು ಹಾಳಾಗುವುದನ್ನು ತಡೆಗಟ್ಟಲು, ಅವುಗಳನ್ನು ರೆಫ್ರಿಜರೇಟರ್ನಲ್ಲಿ ಶೇಖರಿಸಿಡಲಾಗುತ್ತದೆ. ಆದರೆ ಈ ಶುಂಠಿಯನ್ನು ಎಷ್ಟೇ ಜಾಗರೂಕವಾಗಿ ಸಂಗ್ರಹಿಸಿಟ್ಟರೂ ಬೇಗನೆ ಒಣಗುತ್ತದೆ, ಇಲ್ಲಿದಿದ್ದರೆ ಕೊಳೆತುಹೋಗುತ್ತದೆ. ಒಣಗಿದ ಶುಂಠಿಯನ್ನು ಆಹಾರ ಪದಾರ್ಥಗಳಿಗೆ ಬಳಸಿದರೂ ರುಚಿಯನ್ನು ಹೊಂದಿರುವುದಿಲ್ಲ. ಆಹಾರದಲ್ಲಿ ರುಚಿಯನ್ನು ಹೆಚ್ಚಿಸುವ ಈ ಶುಂಠಿ ತಾಜಾವಾಗಿ ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದು.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 01, 2024 | 5:32 PM

Share

ಭಾರತೀಯರ ಅಡುಗೆ ಮನೆಯಲ್ಲಿ ಶುಂಠಿಯಿರಲೇಬೇಕು. ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಯಾರಿಸುವಾಗಲೂ ಘಮ್ ಎನಿಸುವ ಶುಂಠಿಯನ್ನು ಬಳಸುತ್ತಾರೆ. ಹೀಗಾಗಿ ಆಹಾರಕ್ಕೆ ಮತ್ತಷ್ಟು ರುಚಿಯನ್ನು ಈ ಶುಂಠಿಯು ನೀಡುತ್ತದೆ. ಅದಲ್ಲದೇ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಈ ಶುಂಠಿ ಉತ್ತಮವಾದ ಮನೆ ಮದ್ದಾಗಿದೆ. ಆದರೆ ರಣ ಬಿಸಿಲಿಗೆ ಈ ಶುಂಠಿಯು ಬೇಗನೇ ಹಾಳಾಗುವ ಕಾರಣ, ಇದನ್ನು ತಾಜಾವಾಗಿಡುವುದಕ್ಕೆ ಕೆಲವು ಸಲಹೆಗಳನ್ನು ಅನುಸರಿಸಿದರೆ ಉತ್ತಮ.

ಶುಂಠಿಯನ್ನು ತಾಜಾವಾಗಿ ಸಂಗ್ರಹಿಸಿಡಲು ಇಲ್ಲಿವೆ ಕೆಲ ಸಲಹೆಗಳು

  • ಮಾರುಕಟ್ಟೆಯಲ್ಲಿ ತಂದ ಶುಂಠಿಯನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಡಬಾರದು. ಬೇಗನೇ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಶುಂಠಿಯನ್ನು ಟಿಶ್ಯೂನಿಂದ ಒರೆಸಿ ಮತ್ತು ಹತ್ತಿ ಬಟ್ಟೆಯಲ್ಲಿ ಸುತ್ತಿಟ್ಟರೆ ತಾಜಾವಾಗಿರುತ್ತದೆ.
  • ಶುಂಠಿಯನ್ನು ತಾಜಾವಾಗಿಡಲು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಗಾಜಿನ ಬಾಟಲಿಯನ್ನು ತೆಗೆದುಕೊಂಡು ಅದಕ್ಕೆ ವಿನೆಗರ್ ಹಾಕಬೇಕು. ಈಗಾಗಲೇ ಕತ್ತರಿಸಿಟ್ಟ ಶುಂಠಿಯನ್ನು ಈ ಬಾಟಲಿಗೆ ಹಾಕಿಟ್ಟರೆ ಒಂದು ತಿಂಗಳವರೆಗೆ ಶುಂಠಿಯು ಹಾಳಾಗುವುದಿಲ್ಲ.
  • ಶುಂಠಿ ಪೇಸ್ಟ್ ಮಾಡಿಟ್ಟರೆ ಬೇಗನೇ ಕೆಡುವುದಿಲ್ಲ. ಶುಂಠಿ ಪೇಸ್ಟನ್ನು ರೆಫ್ರಿಜರೇಟರ್ನಲ್ಲಿ ಒಂದು ತಿಂಗಳು ಸಂಗ್ರಹಿಸಬಹುದು.
  • ಶುಂಠಿಯು ಹೆಚ್ಚು ದಿನಗಳ ಕಾಲ ಬಾಳಿಕೆ ಬರಬೇಕಾದರೆ ಬಿಸಿಲಿನಲ್ಲಿ ಒಣಗಿಸಬೇಕು. ಚೆನ್ನಾಗಿ ಆರಿದ ನಂತರ ನುಣ್ಣಗೆ ಶುಂಠಿಯನ್ನು ಪುಡಿ ಮಾಡಿ ಸಂಗ್ರಹಿಟ್ಟರೆ ಕೆಡುವುದಿಲ್ಲ.
  • ಶುಂಠಿಯನ್ನು ತುಂಡು ತುಂಡುಗಳಾಗಿ ಕತ್ತರಿಸಿ ಜಿಪ್ ಇರುವ ಲಾಕ್ ಬ್ಯಾಗ್‌ನಲ್ಲಿ ಹಾಕಿಟ್ಟರೆ ಕನಿಷ್ಠ ಮೂರು ವಾರಗಳವರೆಗೆ ಕೆಡುವುದಿಲ್ಲ, ತಾಜಾವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ