AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆಯಲ್ಲಿ ತರಕಾರಿಗಳು ಬೇಗನೇ ಹಾಳಾಗುತ್ತವೆ. ಈ ಋತುವಿನಲ್ಲಿ ತರಕಾರಿಗಳು ಹಾಳಾಗುವುದನ್ನು ತಡೆಗಟ್ಟಲು, ಅವುಗಳನ್ನು ರೆಫ್ರಿಜರೇಟರ್ನಲ್ಲಿ ಶೇಖರಿಸಿಡಲಾಗುತ್ತದೆ. ಆದರೆ ಈ ಶುಂಠಿಯನ್ನು ಎಷ್ಟೇ ಜಾಗರೂಕವಾಗಿ ಸಂಗ್ರಹಿಸಿಟ್ಟರೂ ಬೇಗನೆ ಒಣಗುತ್ತದೆ, ಇಲ್ಲಿದಿದ್ದರೆ ಕೊಳೆತುಹೋಗುತ್ತದೆ. ಒಣಗಿದ ಶುಂಠಿಯನ್ನು ಆಹಾರ ಪದಾರ್ಥಗಳಿಗೆ ಬಳಸಿದರೂ ರುಚಿಯನ್ನು ಹೊಂದಿರುವುದಿಲ್ಲ. ಆಹಾರದಲ್ಲಿ ರುಚಿಯನ್ನು ಹೆಚ್ಚಿಸುವ ಈ ಶುಂಠಿ ತಾಜಾವಾಗಿ ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದು.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 01, 2024 | 5:32 PM

Share

ಭಾರತೀಯರ ಅಡುಗೆ ಮನೆಯಲ್ಲಿ ಶುಂಠಿಯಿರಲೇಬೇಕು. ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಯಾರಿಸುವಾಗಲೂ ಘಮ್ ಎನಿಸುವ ಶುಂಠಿಯನ್ನು ಬಳಸುತ್ತಾರೆ. ಹೀಗಾಗಿ ಆಹಾರಕ್ಕೆ ಮತ್ತಷ್ಟು ರುಚಿಯನ್ನು ಈ ಶುಂಠಿಯು ನೀಡುತ್ತದೆ. ಅದಲ್ಲದೇ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಈ ಶುಂಠಿ ಉತ್ತಮವಾದ ಮನೆ ಮದ್ದಾಗಿದೆ. ಆದರೆ ರಣ ಬಿಸಿಲಿಗೆ ಈ ಶುಂಠಿಯು ಬೇಗನೇ ಹಾಳಾಗುವ ಕಾರಣ, ಇದನ್ನು ತಾಜಾವಾಗಿಡುವುದಕ್ಕೆ ಕೆಲವು ಸಲಹೆಗಳನ್ನು ಅನುಸರಿಸಿದರೆ ಉತ್ತಮ.

ಶುಂಠಿಯನ್ನು ತಾಜಾವಾಗಿ ಸಂಗ್ರಹಿಸಿಡಲು ಇಲ್ಲಿವೆ ಕೆಲ ಸಲಹೆಗಳು

  • ಮಾರುಕಟ್ಟೆಯಲ್ಲಿ ತಂದ ಶುಂಠಿಯನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಡಬಾರದು. ಬೇಗನೇ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಶುಂಠಿಯನ್ನು ಟಿಶ್ಯೂನಿಂದ ಒರೆಸಿ ಮತ್ತು ಹತ್ತಿ ಬಟ್ಟೆಯಲ್ಲಿ ಸುತ್ತಿಟ್ಟರೆ ತಾಜಾವಾಗಿರುತ್ತದೆ.
  • ಶುಂಠಿಯನ್ನು ತಾಜಾವಾಗಿಡಲು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಗಾಜಿನ ಬಾಟಲಿಯನ್ನು ತೆಗೆದುಕೊಂಡು ಅದಕ್ಕೆ ವಿನೆಗರ್ ಹಾಕಬೇಕು. ಈಗಾಗಲೇ ಕತ್ತರಿಸಿಟ್ಟ ಶುಂಠಿಯನ್ನು ಈ ಬಾಟಲಿಗೆ ಹಾಕಿಟ್ಟರೆ ಒಂದು ತಿಂಗಳವರೆಗೆ ಶುಂಠಿಯು ಹಾಳಾಗುವುದಿಲ್ಲ.
  • ಶುಂಠಿ ಪೇಸ್ಟ್ ಮಾಡಿಟ್ಟರೆ ಬೇಗನೇ ಕೆಡುವುದಿಲ್ಲ. ಶುಂಠಿ ಪೇಸ್ಟನ್ನು ರೆಫ್ರಿಜರೇಟರ್ನಲ್ಲಿ ಒಂದು ತಿಂಗಳು ಸಂಗ್ರಹಿಸಬಹುದು.
  • ಶುಂಠಿಯು ಹೆಚ್ಚು ದಿನಗಳ ಕಾಲ ಬಾಳಿಕೆ ಬರಬೇಕಾದರೆ ಬಿಸಿಲಿನಲ್ಲಿ ಒಣಗಿಸಬೇಕು. ಚೆನ್ನಾಗಿ ಆರಿದ ನಂತರ ನುಣ್ಣಗೆ ಶುಂಠಿಯನ್ನು ಪುಡಿ ಮಾಡಿ ಸಂಗ್ರಹಿಟ್ಟರೆ ಕೆಡುವುದಿಲ್ಲ.
  • ಶುಂಠಿಯನ್ನು ತುಂಡು ತುಂಡುಗಳಾಗಿ ಕತ್ತರಿಸಿ ಜಿಪ್ ಇರುವ ಲಾಕ್ ಬ್ಯಾಗ್‌ನಲ್ಲಿ ಹಾಕಿಟ್ಟರೆ ಕನಿಷ್ಠ ಮೂರು ವಾರಗಳವರೆಗೆ ಕೆಡುವುದಿಲ್ಲ, ತಾಜಾವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ