AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತ್ರೆಗಳಲ್ಲಿನ ಅರಿಶಿನದ ಕಲೆಗಳನ್ನು ತೆಗೆದುಹಾಕಲು 5 ಸುಲಭ ಮಾರ್ಗಗಳು ಇಲ್ಲಿವೆ

ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಲಾಗುವ ಕೆಲವು ಪದಾರ್ಥಗಳನ್ನು ಬಳಸಿ, ಪಾತ್ರೆಗಳಲ್ಲಿನ ಹಳದಿ ಕಲೆಗಳನ್ನು ಹೋಗಲಾಡಿಸಬಹುದು.

ಪಾತ್ರೆಗಳಲ್ಲಿನ ಅರಿಶಿನದ ಕಲೆಗಳನ್ನು ತೆಗೆದುಹಾಕಲು 5 ಸುಲಭ ಮಾರ್ಗಗಳು ಇಲ್ಲಿವೆ
ಪಾತ್ರೆಗಳಲ್ಲಿನ ಅರಿಶಿನದ ಕಲೆImage Credit source: iStock
ಅಕ್ಷತಾ ವರ್ಕಾಡಿ
|

Updated on:Feb 14, 2023 | 3:51 PM

Share

ಪಾತ್ರೆಗಳಲ್ಲಿ, ವಿಶೇಷವಾಗಿ ಪ್ಲೇಟ್​​​ಗಳಲ್ಲಿ ಮಸಾಲೆ ಅಥವಾ ಅರಶಿನದ ಕಲೆಗಳು ಉಳಿದುಕೊಂಡರೆ ಅದನ್ನು ಶುಚಿಕೊಳಿಸುವುದು ಅಷ್ಟು ಸುಲಭವಲ್ಲ. ಅರಿಶಿನ ಕಲೆಯ ಮತ್ತೊಂದು ಸಮಸ್ಯೆ ಎಂದರೆ ನೀವು ಅದನ್ನು ದೀರ್ಘಕಾಲ ಕುಳಿತುಕೊಳ್ಳಲು ಬಿಟ್ಟರೆ ಅದನ್ನು ತೆಗೆದುಹಾಕಲು ಹೆಚ್ಚು ಕಷ್ಟವಾಗುತ್ತದೆ. ಆದ್ದರಿಂದ ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಲಾಗುವ ಕೆಲವು ಪದಾರ್ಥಗಳನ್ನು ಬಳಸಿ, ಪಾತ್ರೆಗಳಲ್ಲಿನ ಹಳದಿ ಕಲೆಗಳನ್ನು ಹೋಗಲಾಡಿಸಬಹುದು.

ಪಾತ್ರೆಗಳಿಂದ ಅರಿಶಿನದ ಕಲೆಗಳನ್ನು ತೆಗೆದುಹಾಕಲು 5 ಸಲಹೆಗಳು ಇಲ್ಲಿವೆ:

1. ಗ್ಲಿಸರಿನ್:

ಎರಡು ಕಪ್ ನೀರು ತೆಗೆದುಕೊಂಡು 1/4 ಕಪ್ ಗ್ಲಿಸರಿನ್ ಮತ್ತು 1/4 ಕಪ್ ಸೋಪ್​​ ಪೌಡರ್​​​​​ ಸೇರಿಸಿ. ನಂತರ ಒಂದು ಕಾಟನ್​​​ ಬಟ್ಟೆ ತೆಗೆದುಕೊಂಡು ಈಗಾಗಲೇ ಮಾಡಿಟ್ಟ ಮಿಶ್ರಣದಲ್ಲಿ ಅದ್ದಿ ತೆಗೆಯಿರಿ. ನಂತರ ಪಾತ್ರೆಗಳ ಕಲೆಗಳ ಮೇಲೆ ಹಚ್ಚಿ 15 ನಿಮಿಷಗಳ ಕಾಲ ಹಾಗೆಯೇ ಬಿಡಿ. 15 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದು ಅರಿಶಿನದಿಂದ ಉಳಿದಿರುವ ಎಲ್ಲಾ ಕಲೆಗಳನ್ನು ತೆಗೆದು ಹಾಕುತ್ತದೆ.

2. ನಿಂಬೆ ರಸ:

ನಿಂಬೆ ರಸದಲ್ಲಿರುವ ಆಮ್ಲೀಯ ಗುಣವು ಕಲೆಗಳನ್ನು ತೊಡೆದು ಹಾಕುವಲ್ಲಿ ಸಹಾಯಕವಾಗಿದೆ. ಬಿಸಿ ನೀರಿಗೆ ನಿಂಬೆ ರಸವನ್ನು ಹಾಕಿ, ಈ ಮಿಶ್ರಣವನ್ನು ಪಾತ್ರೆಗಳಿಗೆ ಹಾಕಿ ರಾತ್ರಿಯಿಡಿ ಹಾಗೆಯೇ ಇಡಿ. ಮರುದಿನ ಬೆಳಗ್ಗೆ ಪಾತ್ರೆಗಳನ್ನು ತೊಳೆಯಿರಿ.

ಇದನ್ನೂ ಓದಿ:

3. ಅಡಿಗೆ ಸೋಡಾ:

ಅಡಿಗೆ ಸೋಡಾ ಅಡುಗೆಮನೆಯಲ್ಲಿ ಅತ್ಯಂತ ಉಪಯುಕ್ತ ಉತ್ಪನ್ನಗಳಲ್ಲಿ ಒಂದಾಗಿದೆ. ಸ್ವಲ್ಪ ನೀರು ಸೇರಿಸಿ, ಅದಕ್ಕೆ ಅಡುಗೆ ಸೋಡಾ ಸೇರಿಸಿ ದಪ್ಪ ಪೇಸ್ಟ್​​ ಮಾಡಿ. ಕಲೆಗಳಿರುವ ಪಾತ್ರೆಗೆ ಹಚ್ಚಿ ಮತ್ತು 15 ನಿಮಿಷಗಳ ನಂತರ ಪಾತ್ರೆಯನ್ನು ತೊಳೆಯಿರಿ.

4. ಹೈಡ್ರೋಜನ್ ಪೆರಾಕ್ಸೈಡ್:

ತಿಳಿ ನೀಲಿ ರಾಸಾಯನಿಕ ದ್ರವವು ಕಠಿಣವಾದ ಕಲೆಗಳನ್ನು ತೆಗೆದುಹಾಕಲು ಸಹಾಯಕವಾಗಿದೆ. ಈ ರಾಸಾಯನಿಕ ದ್ರವಗಳನ್ನು ಹಳದಿ ಕಲೆಗಳಿರುವ ಪಾತ್ರೆಗಳ ಮೇಲೆ ಹಚ್ಚಿ, ಕೆಲವು ನಿಮಿಷಗಳ ನಂತರ ಪಾತ್ರೆಗಳನ್ನು ತೊಳೆಯಿರಿ.

5. ಸೂರ್ಯನ ಬೆಳಕು:

ಪಾತ್ರೆಗಳಲ್ಲಿನ ಕಲೆಗಳನ್ನು ತೆಗೆದುಹಾಕುವ ನೈಸರ್ಗಿಕ ವಿಧಾನವೆಂದರೆ ಸೂರ್ಯನ ಬೆಳಕು. ಸೂರ್ಯನ ಬೆಳಕು ಬಟ್ಟೆಗಳು ಮತ್ತು ಪಾತ್ರೆಗಳಿಂದ ಕಲೆಗಳನ್ನು ಹೀರಿಕೊಳ್ಳುತ್ತದೆ. ಹಳದಿ ಕಲೆಗಳಿರುವ ಪಾತ್ರೆಗಳನ್ನು ದಿನವಿಡಿ ಬಿಸಿಲಿಗಿಡಿ, ನೀವು ಆದರಿಂದ ಕಲೆಗಳು ಹೋಗುವುದನ್ನು ಕಾಣಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:51 pm, Tue, 14 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ