AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾಢ ಅಮವಾಸ್ಯೆ 2021: ಶುಭ ದಿನದ ಮುಹೂರ್ತ, ಪೂಜಾ ವಿಧಿ-ವಿಧಾನ ಮತ್ತು ವಿಶೇಷತೆ ತಿಳಿಯಲೇಬೇಕು

Ashadha Amavasya 2021: ಈ ದಿನದ ಆರಾಧನೆಯಿಂದ ಜೀವನದಲ್ಲಿ ಕಷ್ಟ-ದುಃಖಗಳೆಲ್ಲ ತೊರೆದು ಹೋಗಿ ಸುಖ- ಶಾಂತಿ, ನೆಮ್ಮದಿಯು ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ.

ಆಶಾಢ ಅಮವಾಸ್ಯೆ 2021: ಶುಭ ದಿನದ ಮುಹೂರ್ತ, ಪೂಜಾ ವಿಧಿ-ವಿಧಾನ ಮತ್ತು ವಿಶೇಷತೆ ತಿಳಿಯಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 09, 2021 | 10:45 AM

Share

ಈ ಬಾರಿಯ ಅಶಾಢ ಅಮವಾಸ್ಯೆಯನ್ನು ಇಂದು ( ಜುಲೈ 9) ಆಚರಿಸಲಾಗುತ್ತದೆ. ಇಂದು ಶುಭ ಶುಕ್ರವಾರವೂ ಹೌದು. ಹಿಂದೂ ನಂಬಿಕೆಯ ಪ್ರಕಾರ ಈ ದಿನ ಬಹಳ ವಿಶೇಷವಾದದ್ದು. ಪೂರ್ವಜರು ಅಥವಾ ಹಿರಿಯರ ದಿನವನ್ನು ನೆನೆಯುತ್ತ ಇಂದು ಅರ್ಪಣೆಗಳನ್ನು ಬಿಡುತ್ತಾರೆ. ವಿಶೇಷ ಪೂಜೆ ಕೈಗೊಳ್ಳುವ ಮೂಲಕ ಅವರನ್ನು ನೆನೆಯುವ ದಿನ. ಇದಲ್ಲದೇ ಈ ದಿನದ ಆರಾಧನೆಯಿಂದ ಜೀವನದಲ್ಲಿ ಕಷ್ಟ-ದುಃಖಗಳೆಲ್ಲ ತೊರೆದು ಹೋಗಿ ಸುಖ- ಶಾಂತಿ, ನೆಮ್ಮದಿಯು ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ. ಜತೆಗೆ ಜಾತಕದ ಪ್ರಕಾರ ಪಿತೃ ದೋಷ, ಗ್ರಹ ದೋಷ ಮತ್ತು ಶನಿ ದೋಷಗಳಿಂದ ಮುಕ್ತರಾಗುವಂತೆ ಉಪವಾಸ ಕೈಗೊಂಡು ಆಚರಿಸುವ ಪದ್ಧತಿ ಮೊದಲಿನಿಂದಲೂ ಬಂದಿದೆ.

ಆಶಾಢ ಅಮವಾಸ್ಯೆ 2021: ದಿನಾಂಕ ಮತ್ತು ಶುಭ ಮುಹೂರ್ತ ದಿನಾಂಕ: 2021 ಜುಲೈ 9, ಶುಕ್ರವಾರ ಶುಭ ಮುಹೂರ್ತ ಪ್ರಾರಂಭ: ಜುಲೈ 9 ಬೆಳಿಗ್ಗೆ 05:16 ಶುಭ ಮುಹೂರ್ತ ಮುಕ್ತಾಯ: ಜುಲೈ 10 ಬೆಳಗ್ಗೆ 06:46

ಆಶಾಢ ಅಮವಾಸ್ಯೆಯ ಮಹತ್ವ ಗರುಡ ಪುರಾಣದ ಪ್ರಕಾರ ಆಶಾಢ ಅಮವಾಸ್ಯೆಯಂದು ಉಪವಾಸ ಕೈಗೊಳ್ಳುತ್ತಾರೆ. ಜತೆಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಎಲ್ಲಾ ರೀತಿಯ ಪಾಪಗಳಿಂದ ಮತ್ತು ದೋಷಗಳಿಂದ ಮುಕ್ತರಾಗಲೆಂದು ದಾನ-ಧರ್ಮಗಳಲ್ಲಿ ತೊಡಗುತ್ತಾರೆ. ಈ ದಿನ ಉಪವಾಸ ಕೈಗೊಳ್ಳುವುದರಿಂದ ಪೂರ್ವಜರಿಗೆ ಮತ್ತು ಆತ್ಮಗಳಿಗೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಮೊದಲಿನಿಂದಲೂ ಇದೆ.

ಪೂಜಾ ವಿಧಿ-ವಿಧಾನ *ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡಿ ಶುಭ್ರ ವಸ್ತ್ರವನ್ನು ಧರಿಸುವುದು *ಆಶಾಢ ಅಮವಾಸ್ಯೆ ದಿನ ಪ್ರಯುಕ್ತ ಉಪವಾಸ ಕೈಗೊಳ್ಳುವುದು *ಮಂತ್ರಗಳನ್ನು ಪಠಿಸುವುದು *ಪೂರ್ವಜರಿಗೆ ಪೂಜೆ ಸಲ್ಲಿಸುವುದು ಮತ್ತು ಅಗತ್ಯವಿರುವವರಿಗೆ ನಿಮ್ಮ ಕೈಲಾದಷ್ಟು ದಾನ-ಧರ್ಮ ಮಾಡುವುದು *ಮುಖ್ಯವಾಗಿ ಹನುಮ ಮತ್ತು ಶನಿ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ *ಹಿಂದೂ ನಂಬಿಕೆಯ ಪ್ರಕಾರ ಪಂಚ ಭೂತಗಳಿಗೆ (ಗಾಳಿ, ನೀರು, ಬೆಂಕಿ, ಆಕಾಶ ಮತ್ತು ಭೂಮಿ) ಪ್ರಾರ್ಥನೆ ಮಾಡುತ್ತಾರೆ. ಮತ್ತು ವಿಶೇಷ ಪೂಜೆ ಕೈಗೊಳ್ಳುತ್ತಾರೆ

ಇದನ್ನೂ ಓದಿ:

Strawberry Full Moon 2021: ಇಂದು ಸ್ಟ್ರಾಬೆರಿ ಮೂನ್​ ಗೋಚರಿಸುತ್ತಿದೆ! ಭಾರತದಲ್ಲಿ ಈ ವಿಸ್ಮಯವನ್ನು ನೋಡಬಹುದೇ?

Kara Hunnime: ಕಾರ ಹುಣ್ಣಿಮೆ ಆಚರಣೆ ವೇಳೆ ಅವಘಡ, ಎತ್ತು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ