AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?

ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 06, 2021 | 7:10 AM

Share

ಪ್ರತಿನಿತ್ಯ ಸ್ನಾನ ಮಾಡುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ದೇಹ ಸ್ವಚ್ಛವಾಗಿದ್ದರೆ ಮನಸ್ಸು ಕೂಡಾ ಸ್ವಚ್ಛವಾಗಿರುತ್ತದೆ ಎಂಬ ಮಾತಿದೆ. ಶರೀರದ ಜತೆಗೆ ಮಾನಸಿಕ ನೆಮ್ಮದಿಗೆ ಪ್ರತಿನಿತ್ಯ ಸ್ನಾನ ಮಾಡುವ ಅಭ್ಯಾಸ ಒಳ್ಳೆಯದು. ಬೆಳಗ್ಗೆ ಎದ್ದ ತಕ್ಷಣ ಮನಸ್ಸಿನ ಏಕಾಗ್ರತೆ ಮತ್ತು ನಿಯಂತ್ರಣಕ್ಕೆ ಶರೀರ ಶುದ್ಧವಾಗಬೇಕು. ಹಾಗಾಗಿ ಬೆಳಿಗ್ಗೆ ಸ್ನಾನ ಮಾಡುವುದು ಒಳ್ಳೆಯದು. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿನ ಧೂಳು, ವೈರಸ್​ಗಳು ನಾಶವಾಗುತ್ತದೆ. ಇದರಿಂದ ಆರೋಗ್ಯವೂ ಸಹ ಸುಧಾರಿಸುತ್ತದೆ.

ಸಂಜೆಯ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಗಳಿವೆ ಎಂಬ ಅಭಿಪ್ರಾಯಗಳಿವೆ. ರಾತ್ರಿ ಸ್ನಾನ ಮಾಡುವುದರಿಂದ ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲಿಯೂ ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡುವುದರಿಂದ ಮನಸ್ಸು ನಿರಾಳವೆನಿಸುತ್ತದೆ. ಶರೀರ ಚಟುವಟಿಕೆಯಿಂದ ಕೂಡಿರಲು ಸಹಾಯಕವಾಗಿದೆ. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಬೆಳಗ್ಗಿನಿಂದ ದೇಹಕ್ಕೆ ಅಂಟಿಕೊಂಡ ಬೆವರು, ಧೂಳು, ವೈರಸ್​ಗಳು ನಾಶವಾಗುತ್ತವೆ. ಇದರಿಂದ ರಾತ್ರಿ ಹೊತ್ತು ಒಳ್ಳೆಯ ನಿದ್ರೆ ಬರುತ್ತದೆ. ಹಾಗಾಗಿ ಬೆಳ್ಳಿಗ್ಗೆ ಮತ್ತು ಸಂಜೆ ಎರಡೂ ಹೊತ್ತಿನಲ್ಲಿ ಸ್ನಾನ ಮಾಡುವುದು ತಪ್ಪಲ್ಲ. ಆರೋಗ್ಯದ ದೃಷ್ಟಿಯಿಂದ ಇದು ಹೆಚ್ಚು ಪರಿಣಾಮಕಾರಿ.

ಪ್ರತಿನಿತ್ಯ ಸ್ನಾನ ಮಾಡುವುದರಿಂದ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಜತೆಗೆ ದೇಹದ ಉಷ್ಣತೆ, ಅತಿಯಾದ ಶಾಖದಿಂದ ದೇಹ ಸಮತೋಲನ ಸ್ಥಿತಿಯಲ್ಲಿರಲು ಸಹಾಯಕವಾಗಿದೆ. ಉತ್ತಮ ನಿದ್ರೆಗೆ ಸಹಾಯಕವಾಗಿದೆ. ಹೀಗಿರುವಾಗ ನಿಮ್ಮ ಆರೋಗ್ಯದ ದೃಷ್ಟಿಯಿಂದ ದಿನಕ್ಕೆ ಎರಡು ಬಾರಿ ಸ್ನಾನ ಮಾಡುವುದು ಉತ್ತಮ. ಜತೆಗೆ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

ಸ್ನಾನಗೃಹ ಅಲಂಕಾರಕ್ಕೆ ಇಲ್ಲಿವೆ 6 ವಿವಿಧ ಗಿಡಗಳು

ಅಭ್ಯಂಗ ಸ್ನಾನ ಮಾಡುವುದು ಹೇಗೆ? ಇದರ ಫಲಗಳೇನು?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ