AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?

ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 06, 2021 | 7:10 AM

Share

ಪ್ರತಿನಿತ್ಯ ಸ್ನಾನ ಮಾಡುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ದೇಹ ಸ್ವಚ್ಛವಾಗಿದ್ದರೆ ಮನಸ್ಸು ಕೂಡಾ ಸ್ವಚ್ಛವಾಗಿರುತ್ತದೆ ಎಂಬ ಮಾತಿದೆ. ಶರೀರದ ಜತೆಗೆ ಮಾನಸಿಕ ನೆಮ್ಮದಿಗೆ ಪ್ರತಿನಿತ್ಯ ಸ್ನಾನ ಮಾಡುವ ಅಭ್ಯಾಸ ಒಳ್ಳೆಯದು. ಬೆಳಗ್ಗೆ ಎದ್ದ ತಕ್ಷಣ ಮನಸ್ಸಿನ ಏಕಾಗ್ರತೆ ಮತ್ತು ನಿಯಂತ್ರಣಕ್ಕೆ ಶರೀರ ಶುದ್ಧವಾಗಬೇಕು. ಹಾಗಾಗಿ ಬೆಳಿಗ್ಗೆ ಸ್ನಾನ ಮಾಡುವುದು ಒಳ್ಳೆಯದು. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿನ ಧೂಳು, ವೈರಸ್​ಗಳು ನಾಶವಾಗುತ್ತದೆ. ಇದರಿಂದ ಆರೋಗ್ಯವೂ ಸಹ ಸುಧಾರಿಸುತ್ತದೆ.

ಸಂಜೆಯ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಗಳಿವೆ ಎಂಬ ಅಭಿಪ್ರಾಯಗಳಿವೆ. ರಾತ್ರಿ ಸ್ನಾನ ಮಾಡುವುದರಿಂದ ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲಿಯೂ ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡುವುದರಿಂದ ಮನಸ್ಸು ನಿರಾಳವೆನಿಸುತ್ತದೆ. ಶರೀರ ಚಟುವಟಿಕೆಯಿಂದ ಕೂಡಿರಲು ಸಹಾಯಕವಾಗಿದೆ. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಬೆಳಗ್ಗಿನಿಂದ ದೇಹಕ್ಕೆ ಅಂಟಿಕೊಂಡ ಬೆವರು, ಧೂಳು, ವೈರಸ್​ಗಳು ನಾಶವಾಗುತ್ತವೆ. ಇದರಿಂದ ರಾತ್ರಿ ಹೊತ್ತು ಒಳ್ಳೆಯ ನಿದ್ರೆ ಬರುತ್ತದೆ. ಹಾಗಾಗಿ ಬೆಳ್ಳಿಗ್ಗೆ ಮತ್ತು ಸಂಜೆ ಎರಡೂ ಹೊತ್ತಿನಲ್ಲಿ ಸ್ನಾನ ಮಾಡುವುದು ತಪ್ಪಲ್ಲ. ಆರೋಗ್ಯದ ದೃಷ್ಟಿಯಿಂದ ಇದು ಹೆಚ್ಚು ಪರಿಣಾಮಕಾರಿ.

ಪ್ರತಿನಿತ್ಯ ಸ್ನಾನ ಮಾಡುವುದರಿಂದ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಜತೆಗೆ ದೇಹದ ಉಷ್ಣತೆ, ಅತಿಯಾದ ಶಾಖದಿಂದ ದೇಹ ಸಮತೋಲನ ಸ್ಥಿತಿಯಲ್ಲಿರಲು ಸಹಾಯಕವಾಗಿದೆ. ಉತ್ತಮ ನಿದ್ರೆಗೆ ಸಹಾಯಕವಾಗಿದೆ. ಹೀಗಿರುವಾಗ ನಿಮ್ಮ ಆರೋಗ್ಯದ ದೃಷ್ಟಿಯಿಂದ ದಿನಕ್ಕೆ ಎರಡು ಬಾರಿ ಸ್ನಾನ ಮಾಡುವುದು ಉತ್ತಮ. ಜತೆಗೆ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

ಸ್ನಾನಗೃಹ ಅಲಂಕಾರಕ್ಕೆ ಇಲ್ಲಿವೆ 6 ವಿವಿಧ ಗಿಡಗಳು

ಅಭ್ಯಂಗ ಸ್ನಾನ ಮಾಡುವುದು ಹೇಗೆ? ಇದರ ಫಲಗಳೇನು?

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ