AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮೆದುಳನ್ನು ಆರೋಗ್ಯ, ಕ್ರಿಯಾಶೀಲವಾಗಿಡಲು ಸಹಾಯ ಮಾಡುವ ಚಟುವಟಿಕೆಗಳು 

ವಯಸ್ಸಾದಂತೆ ಕಂಡುಬರುವ ಅಲ್ಝೈಮರ್ ಮತ್ತು ಇತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಬಾಧಿಸಬಾರದೆಂದರೆ ದೈಹಿಕ ಆರೋಗ್ಯದ ಜೊತೆಗೆ  ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕೂಡಾ ಮುಖ್ಯ. ನೀವು  ಕೆಲವೊಂದು ಮೆದುಳಿನ ಆರೋಗ್ಯಕ್ಕೆ ಪೂರಕವಾಗಿರುವ ಚಟುವಟಿಕೆಗಳನ್ನು ಮಾಡುವ ಮೂಲಕ ಮೆದುಳನ್ನು ಕ್ರೀಯಾಶಿಲ ಮತ್ತು ಆರೋಗ್ಯಕರವಾಗಿಟ್ಟುಕೊಳ್ಳಬಹುದು.

Mental Health: ಮೆದುಳನ್ನು ಆರೋಗ್ಯ, ಕ್ರಿಯಾಶೀಲವಾಗಿಡಲು ಸಹಾಯ ಮಾಡುವ ಚಟುವಟಿಕೆಗಳು 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Oct 03, 2023 | 6:12 PM

Share

ಆರೋಗ್ಯಕರವಾಗಿರಲು ಹೆಚ್ಚಿನ ಜನರು ದೈಹಿಕವಾಗಿ ಸದೃಢವಾಗಿರುವತ್ತ ಗಮನಹರಿಸುತ್ತಾರೆ, ಆದರೆ ನೀವು ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು  ಬಯಸಿದರೆ, ದೇಹದ ಜೊತೆಗೆ ಮನಸ್ಸನ್ನು ಆರೋಗ್ಯಕರವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಮನಸ್ಸು ಮತ್ತು ದೇಹದ ನಡುವೆ ಬಹಳ ಆಳವಾದ ಸಂಬಂಧವಿದೆ. ಆದ್ದರಿಂದ ಮೆದುಳನ್ನು ಸಕ್ರಿಯವಾಗಿ ಮತ್ತು ಆರೋಗ್ಯಕರವಾಗಿರಿಸುವುದು ಬಹಳ ಮುಖ್ಯ. ಕೆಲವೊಂದು ಮೆದುಳಿಗೆ ವ್ಯಾಯಾಮ ನೀಡುವಂತಹ ಚಟುವಟಿಕೆಗಳನ್ನು ಮಾಡುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು,  ಮೆದುಳನ್ನು ಚುರುಕಾಗಿಸಬಹುದು. ಜೊತೆಗೆ ಈ ಅಭ್ಯಾಸದಿಂದ ವಯಸ್ಸಾದಂತೆ ಕಂಡುಬರುವ ಅಲ್ಝೈಮರ್ ಮತ್ತು ಇತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಬಾರದಂತೆ ತಡೆಯಬಹುದು. ಹಾಗಿದ್ದರೆ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾದಂತಹ ಚಟುವಟಿಕೆಗಳು ಯಾವುದೆಂಬುದನ್ನು ನೋಡೋಣ.

ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಈ ಚಟುವಟಿಕೆಗಳು:

ಯೋಗ ಮತ್ತು ಧ್ಯಾನ: ನೀವು ಸಣ್ಣಪುಟ್ಟ ವಿಷಯಗಳ ಮೇಲೆ ಅಸಮಧಾನಗೊಂಡರೆ ಮತ್ತು ವಿಷಯಗಳ ಮೇಲೆ ಗಮನವನ್ನು ಕೇಂದ್ರೀಕರಿಸಲು ಸಾಧ್ಯವಾಗದಿದ್ದರೆ, ಈ ಪರಿಸ್ಥಿತಿಯನ್ನು ಎದುರಿಸಲು ಸುಲಭವಾದ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಧ್ಯಾನ ಮಾಡುವುದು. ಮುಂಜಾನೆ ಸ್ವಲ್ಪ ಬೇಗ ಎದ್ದು ಯೋಗ ಮತ್ತು ಧ್ಯಾನ ಮಾಡುವ ಅಭ್ಯಾಸ ಮಾಡಿಕೊಳ್ಳಿ.  ಇದರಿಂದ ನೀವು ಗಮನವನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಅಲ್ಲದೆ ಈ ಅಭ್ಯಾಸಗಳು ಮನಸಿನ ಒತ್ತಡವನ್ನು ತೊಡೆದುಹಾಕುತ್ತದೆ. ಮಾನಸಿಕವಾಗಿ ಸದೃಢವಾಗಿರುವುದರ ಮೂಲಕ ಅಲ್ಝೈಮರ್ ಕಾಯಿಲೆಯಂತಹ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಚೆಸ್, ಸುಡೋಕು ಮುಂತಾದ ಆಟಗಳನ್ನು ಆಡುವುದು: ನಿಮ್ಮ ಮೆದುಳಿಗೆ ವ್ಯಾಯಾಮ ಮಾಡಲು, ಚೆಸ್, ಸುಡೋಕು ಮುಂತಾದ ಮೆದುಳಿನ ಚುರುಕುತನಕ್ಕೆ ಸವಾಲೊಡ್ಡುವ ಆಟಗಳಲ್ಲಿ ಸ್ವಲ್ಪ ಸಮಯವನ್ನು ಕಳೆಯಿರಿ. ಮೆದುಳು ಆರೋಗ್ಯಕರವಾಗಿರಬೇಕೆಂದರೆ ಅದನ್ನು ಸಕ್ರಿಯವಾಗಿರಿಸುವುದು ಬಹಳ ಮುಖ್ಯ. ಹಾಗಾಗಿ ಮೆದುಳನ್ನು ಸಕ್ರಿಯವಾಗಿರಿಸಲು ಚೆಸ್, ಸುಡೋಕು ಮುಂತಾದ ಆಟಗಳನ್ನು ಆಡುತ್ತಾ ಮೆದುಳಿಗೆ ವ್ಯಾಯಾಮ ನೀಡಬೇಕು. ಇದರಿಂದಾಗಿ  ಮೆದುಳು ಆರೋಗ್ಯಕರವಾಗಿರುತ್ತದೆ ಮತ್ತು ಇದು ಅನೇಕ ರೋಗಗಳ ಅಪಾಯವನ್ನು ಕಡೆಮೆ ಮಾಡುತ್ತದೆ. ಅಲ್ಲದೆ ಇಂತಹ ಆಟಗಳು ಮಕ್ಕಳ ಕಲಿಕೆಯ ಏಕಾಗ್ರತೆಯನ್ನು ಕೂಡಾ ಹೆಚ್ಚಿಸುತ್ತದೆ.

ಇದನ್ನೂ ಓದಿ: ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್…!

ನೃತ್ಯ: ನೃತ್ಯವು ಕೇವಲ ದೈಹಿಕ ಚಟುವಟಿಕೆ ಮಾತ್ರವಲ್ಲ, ಇದು ಮಾನಸಿಕವಾಗಿ ಸದೃಢವಾಗಿರಲು ಸಹ ಸಹಾಯ ಮಾಡುತ್ತದೆ.  ನೀವು ದುಃಖಿತರಾದಾಗ,  ಸ್ವಲ್ಪ ಸಮಯದವರೆಗೆ ನಿಮ್ಮ ನೆಚ್ಚಿನ ಹಾಡಿಗೆ ನೃತ್ಯ ಮಾಡಿ. ಇದರಿಂದ ಉದ್ವೇಗ ಮತ್ತು ಖಿನ್ನತೆಯು ಸಂಪೂರ್ಣವಾಗಿ ಮಾಯವಾಗುತ್ತದೆ. ಅಲ್ಲದೆ ನೃತ್ಯ ಹೆಚ್ಚುವರಿ ಕ್ಯಾಲೋರಿಗಳನ್ನು ಸುಡಲು ಕೂಡಾ ಸಹಾಯ ಮಾಡುತ್ತದೆ.

ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ: ಹೊಸ ಹೊಸ ವಿಷಯಗಳನ್ನು ಕಲಿಯುವುದು ಮನಸ್ಸನ್ನು ಆರೋಗ್ಯಕರವಾಗಿಡಲು ಮತ್ತು ಸಂತೋಷವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ.  ಸಂಗೀತವಾದ್ಯ, ಚಿತ್ರಕಲೆ, ಪುಸ್ತಕ ಓದುವುದು, ತೋಟಗಾರಿಕೆ,  ಅಥವಾ ಹೊಸ ಭಾಷೆಗಳನ್ನು ಕಲಿಯುವುದು ಈ ರೀತಿಯ ಯಾವುದೇ ವಿಷಯಗಳನ್ನು ಕಲಿಯುವುದರಿಂದ ಮಾನಸಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಅಲ್ಲದೆ  ವಿವಿಧ ಭಾಷೆಗಳನ್ನು ಕಲಿಯುವುದರಿಂದ ಮನಸ್ಸು ಚುರುಕಾಗುತ್ತದೆ ಮತ್ತು ನಿಮಗೆ ಅದು ಆತ್ಮವಿಶ್ವಾಸವನ್ನು ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:11 pm, Tue, 3 October 23

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು