Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮೆದುಳನ್ನು ಆರೋಗ್ಯ, ಕ್ರಿಯಾಶೀಲವಾಗಿಡಲು ಸಹಾಯ ಮಾಡುವ ಚಟುವಟಿಕೆಗಳು 

ವಯಸ್ಸಾದಂತೆ ಕಂಡುಬರುವ ಅಲ್ಝೈಮರ್ ಮತ್ತು ಇತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಬಾಧಿಸಬಾರದೆಂದರೆ ದೈಹಿಕ ಆರೋಗ್ಯದ ಜೊತೆಗೆ  ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕೂಡಾ ಮುಖ್ಯ. ನೀವು  ಕೆಲವೊಂದು ಮೆದುಳಿನ ಆರೋಗ್ಯಕ್ಕೆ ಪೂರಕವಾಗಿರುವ ಚಟುವಟಿಕೆಗಳನ್ನು ಮಾಡುವ ಮೂಲಕ ಮೆದುಳನ್ನು ಕ್ರೀಯಾಶಿಲ ಮತ್ತು ಆರೋಗ್ಯಕರವಾಗಿಟ್ಟುಕೊಳ್ಳಬಹುದು.

Mental Health: ಮೆದುಳನ್ನು ಆರೋಗ್ಯ, ಕ್ರಿಯಾಶೀಲವಾಗಿಡಲು ಸಹಾಯ ಮಾಡುವ ಚಟುವಟಿಕೆಗಳು 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 03, 2023 | 6:12 PM

ಆರೋಗ್ಯಕರವಾಗಿರಲು ಹೆಚ್ಚಿನ ಜನರು ದೈಹಿಕವಾಗಿ ಸದೃಢವಾಗಿರುವತ್ತ ಗಮನಹರಿಸುತ್ತಾರೆ, ಆದರೆ ನೀವು ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು  ಬಯಸಿದರೆ, ದೇಹದ ಜೊತೆಗೆ ಮನಸ್ಸನ್ನು ಆರೋಗ್ಯಕರವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಮನಸ್ಸು ಮತ್ತು ದೇಹದ ನಡುವೆ ಬಹಳ ಆಳವಾದ ಸಂಬಂಧವಿದೆ. ಆದ್ದರಿಂದ ಮೆದುಳನ್ನು ಸಕ್ರಿಯವಾಗಿ ಮತ್ತು ಆರೋಗ್ಯಕರವಾಗಿರಿಸುವುದು ಬಹಳ ಮುಖ್ಯ. ಕೆಲವೊಂದು ಮೆದುಳಿಗೆ ವ್ಯಾಯಾಮ ನೀಡುವಂತಹ ಚಟುವಟಿಕೆಗಳನ್ನು ಮಾಡುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು,  ಮೆದುಳನ್ನು ಚುರುಕಾಗಿಸಬಹುದು. ಜೊತೆಗೆ ಈ ಅಭ್ಯಾಸದಿಂದ ವಯಸ್ಸಾದಂತೆ ಕಂಡುಬರುವ ಅಲ್ಝೈಮರ್ ಮತ್ತು ಇತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಬಾರದಂತೆ ತಡೆಯಬಹುದು. ಹಾಗಿದ್ದರೆ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾದಂತಹ ಚಟುವಟಿಕೆಗಳು ಯಾವುದೆಂಬುದನ್ನು ನೋಡೋಣ.

ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಈ ಚಟುವಟಿಕೆಗಳು:

ಯೋಗ ಮತ್ತು ಧ್ಯಾನ: ನೀವು ಸಣ್ಣಪುಟ್ಟ ವಿಷಯಗಳ ಮೇಲೆ ಅಸಮಧಾನಗೊಂಡರೆ ಮತ್ತು ವಿಷಯಗಳ ಮೇಲೆ ಗಮನವನ್ನು ಕೇಂದ್ರೀಕರಿಸಲು ಸಾಧ್ಯವಾಗದಿದ್ದರೆ, ಈ ಪರಿಸ್ಥಿತಿಯನ್ನು ಎದುರಿಸಲು ಸುಲಭವಾದ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಧ್ಯಾನ ಮಾಡುವುದು. ಮುಂಜಾನೆ ಸ್ವಲ್ಪ ಬೇಗ ಎದ್ದು ಯೋಗ ಮತ್ತು ಧ್ಯಾನ ಮಾಡುವ ಅಭ್ಯಾಸ ಮಾಡಿಕೊಳ್ಳಿ.  ಇದರಿಂದ ನೀವು ಗಮನವನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಅಲ್ಲದೆ ಈ ಅಭ್ಯಾಸಗಳು ಮನಸಿನ ಒತ್ತಡವನ್ನು ತೊಡೆದುಹಾಕುತ್ತದೆ. ಮಾನಸಿಕವಾಗಿ ಸದೃಢವಾಗಿರುವುದರ ಮೂಲಕ ಅಲ್ಝೈಮರ್ ಕಾಯಿಲೆಯಂತಹ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಚೆಸ್, ಸುಡೋಕು ಮುಂತಾದ ಆಟಗಳನ್ನು ಆಡುವುದು: ನಿಮ್ಮ ಮೆದುಳಿಗೆ ವ್ಯಾಯಾಮ ಮಾಡಲು, ಚೆಸ್, ಸುಡೋಕು ಮುಂತಾದ ಮೆದುಳಿನ ಚುರುಕುತನಕ್ಕೆ ಸವಾಲೊಡ್ಡುವ ಆಟಗಳಲ್ಲಿ ಸ್ವಲ್ಪ ಸಮಯವನ್ನು ಕಳೆಯಿರಿ. ಮೆದುಳು ಆರೋಗ್ಯಕರವಾಗಿರಬೇಕೆಂದರೆ ಅದನ್ನು ಸಕ್ರಿಯವಾಗಿರಿಸುವುದು ಬಹಳ ಮುಖ್ಯ. ಹಾಗಾಗಿ ಮೆದುಳನ್ನು ಸಕ್ರಿಯವಾಗಿರಿಸಲು ಚೆಸ್, ಸುಡೋಕು ಮುಂತಾದ ಆಟಗಳನ್ನು ಆಡುತ್ತಾ ಮೆದುಳಿಗೆ ವ್ಯಾಯಾಮ ನೀಡಬೇಕು. ಇದರಿಂದಾಗಿ  ಮೆದುಳು ಆರೋಗ್ಯಕರವಾಗಿರುತ್ತದೆ ಮತ್ತು ಇದು ಅನೇಕ ರೋಗಗಳ ಅಪಾಯವನ್ನು ಕಡೆಮೆ ಮಾಡುತ್ತದೆ. ಅಲ್ಲದೆ ಇಂತಹ ಆಟಗಳು ಮಕ್ಕಳ ಕಲಿಕೆಯ ಏಕಾಗ್ರತೆಯನ್ನು ಕೂಡಾ ಹೆಚ್ಚಿಸುತ್ತದೆ.

ಇದನ್ನೂ ಓದಿ: ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್…!

ನೃತ್ಯ: ನೃತ್ಯವು ಕೇವಲ ದೈಹಿಕ ಚಟುವಟಿಕೆ ಮಾತ್ರವಲ್ಲ, ಇದು ಮಾನಸಿಕವಾಗಿ ಸದೃಢವಾಗಿರಲು ಸಹ ಸಹಾಯ ಮಾಡುತ್ತದೆ.  ನೀವು ದುಃಖಿತರಾದಾಗ,  ಸ್ವಲ್ಪ ಸಮಯದವರೆಗೆ ನಿಮ್ಮ ನೆಚ್ಚಿನ ಹಾಡಿಗೆ ನೃತ್ಯ ಮಾಡಿ. ಇದರಿಂದ ಉದ್ವೇಗ ಮತ್ತು ಖಿನ್ನತೆಯು ಸಂಪೂರ್ಣವಾಗಿ ಮಾಯವಾಗುತ್ತದೆ. ಅಲ್ಲದೆ ನೃತ್ಯ ಹೆಚ್ಚುವರಿ ಕ್ಯಾಲೋರಿಗಳನ್ನು ಸುಡಲು ಕೂಡಾ ಸಹಾಯ ಮಾಡುತ್ತದೆ.

ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ: ಹೊಸ ಹೊಸ ವಿಷಯಗಳನ್ನು ಕಲಿಯುವುದು ಮನಸ್ಸನ್ನು ಆರೋಗ್ಯಕರವಾಗಿಡಲು ಮತ್ತು ಸಂತೋಷವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ.  ಸಂಗೀತವಾದ್ಯ, ಚಿತ್ರಕಲೆ, ಪುಸ್ತಕ ಓದುವುದು, ತೋಟಗಾರಿಕೆ,  ಅಥವಾ ಹೊಸ ಭಾಷೆಗಳನ್ನು ಕಲಿಯುವುದು ಈ ರೀತಿಯ ಯಾವುದೇ ವಿಷಯಗಳನ್ನು ಕಲಿಯುವುದರಿಂದ ಮಾನಸಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಅಲ್ಲದೆ  ವಿವಿಧ ಭಾಷೆಗಳನ್ನು ಕಲಿಯುವುದರಿಂದ ಮನಸ್ಸು ಚುರುಕಾಗುತ್ತದೆ ಮತ್ತು ನಿಮಗೆ ಅದು ಆತ್ಮವಿಶ್ವಾಸವನ್ನು ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:11 pm, Tue, 3 October 23

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ