Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಕೆ ಸೇರಿ ಸೋರೆಕಾಯಿಯಿಂದ ಸಿಗುವ ಪ್ರಮುಖ ಪ್ರಯೋಜನಗಳು ಇಲ್ಲಿವೆ

ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಹೆಚ್ಚಿನ ಜನರು ಒತ್ತಡದಲ್ಲಿ ಬದುಕುತ್ತಾರೆ. ಇದು ಅನೇಕ ರೋಗಗಳಿಗೆ ಆಹ್ವಾನ ನೀಡಿದಂತೆ ಎಂದರೂ ತಪ್ಪಾಗಲಾರದು. ಆದರೆ, ಸೋರೆಕಾಯಿ ಸೇವನೆಯಿಂದ ಒತ್ತಡವೂ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.

ತೂಕ ಇಳಿಕೆ ಸೇರಿ ಸೋರೆಕಾಯಿಯಿಂದ ಸಿಗುವ ಪ್ರಮುಖ ಪ್ರಯೋಜನಗಳು ಇಲ್ಲಿವೆ
ಸೋರೆಕಾಯಿ
Follow us
TV9 Web
| Updated By: ನಯನಾ ರಾಜೀವ್

Updated on: May 06, 2022 | 12:18 PM

ಸೋರೆಕಾಯಿ(Bottle Gourd)ಯನ್ನು ಯಾವಾಗಲೂ ಆರೋಗ್ಯಕರ ಸಸ್ಯಾಹಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಈ ಬಹುಮುಖ ತರಕಾರಿ ಸುಮಾರು 92% ರಷ್ಟು ನೀರು ಮತ್ತು ಖನಿಜಗಳಿಂದ ಕೂಡಿದೆ. ಇದು ದೇಹವನ್ನು ಹೈಡ್ರೀಕರಿಸುತ್ತದೆ. ಇದರಲ್ಲಿ ವಿಟಮಿನ್ ಸಿ, ಕೆ ಮತ್ತು ಕ್ಯಾಲ್ಸಿಯಂ ಸಮೃದ್ಧ ವಾಗಿರುವುದನ್ನು ಕಾಣಬಹುದು. ಸೋರೆಕಾಯಿ ಅಧಿಕ ನೀರಿನಂಶ ಹೊಂದಿರುವ ತರಕಾರಿ ಮಾತ್ರವಲ್ಲ, ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿರುವ ತರಕಾರಿಯಾಗಿದೆ. ಕೆಲವು ನಿರ್ಧಿಷ್ಟ ಕಾಯಿಲೆಗಳನ್ನು ಹೋಗಲಾಡಿಸಲು ಸೋರೆಕಾಯಿಯನ್ನು ಮದ್ದಾಗಿ ಉಪಯೋಗಿಸುತ್ತಾರೆ.ಆದರೆ ನಿಸರ್ಗದಿಂದ ಬಂದ ಈ ಉಡುಗೊರೆಗಳಿಂದ ನಮಗೆ ಸಿಗುವ ಆರೋಗ್ಯದ ಲಾಭಗಳು ಅಪಾರ ಪ್ರಮಾಣದಲ್ಲಿರುತ್ತವೆ. ಅದ್ರಲ್ಲೂ ಸೋರೆಕಾಯಿ (Bottle Gourd) ಎಂಬ ತರಕಾರಿ ದೇಹದ ಆರೋಗ್ಯಕ್ಕೆ ಅಮೃತ ಇದ್ದಂತೆ.

ರಿಬೊಫ್ಲಾವಿನ್, ಸತು, ಥೈಮೆನ್, ವಿಟಮಿನ್ ಎ, ಸಿ, ಫಾಲಟೆ, ಸೋಡಿಯಂ, ಕ್ಯಾಲ್ಸಿಯಂ, ಕಬ್ಬಿನಾಂಶ, ವಿಟಮಿನ್ ಬಿ6, ಪೊಟಾಶಿಯಂ, ಪ್ರೋಟೀನ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳಿಂದ ಇದು ಸಮೃದ್ಧವಾಗಿದೆ. ಇಷ್ಟೇ ಅಲ್ಲದೆ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನಮ್ಮ ಆರೋಗ್ಯ(Health)ಕ್ಕೆ ಹಣ್ಣುಗಳು ಮತ್ತು ತರಕಾರಿಗಳ ಎಷ್ಟರ ಮಟ್ಟಿಗೆ ಪ್ರಭಾವ ಬೀರುತ್ತದೆ ಎಂದರೆ ನಾವು ಅವುಗಳನ್ನು ಊಹಿಸಲು ಕೂಡ ಸಾಧ್ಯವಾಗುವುದಿಲ್ಲ. ನಮಗೆ ಗೊತ್ತಿಲ್ಲದೆ ನಾವು ಇಂದು ನೆಪ ಮಾತ್ರಕ್ಕೆ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ತಿನ್ನಬೇಕಲ್ಲ ಎಂದು ತಿನ್ನುತ್ತಿದ್ದೇವೆ.

ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ. ಇದು ರಕ್ತದೊತ್ತಡವನ್ನು ಕಾಪಾಡಿಕೊಳ್ಳುವುದರಿಂದ ಈ ರಸವು ಮಧುಮೇಹ ರೋಗಿಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ಸೋರೆಕಾಯಿಯ ಪ್ರಯೋಜನಗಳು: ಬೇಸಿಗೆಯಲ್ಲಿ ಸೋರೆಕಾಯಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ತೂಕವನ್ನು ಕಡಿಮೆ ಮಾಡುವುದರಿಂದ ಹಿಡಿದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಸೋರೆಕಾಯಿ ಪರಿಹಾರ ನೀಡಲಿದೆ.

ಇದಲ್ಲದೇ ಬೇಸಿಗೆ ಕಾಲದಲ್ಲಿ ಸೋರೆಕಾಯಿಯನ್ನು ಸೇವಿಸುವುದರಿಂದ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಬಹುದು. ಎದೆಯುರಿ, ದೇಹದಲ್ಲಿ ನೀರಿನ ಕೊರತೆ, ಶಾಖದಿಂದ ತಲೆಸುತ್ತು, ಉಸಿರಾಟದ ತೊಂದರೆ ಇಂತಹ ಹಲವು ಸಮಸ್ಯೆಗಳಿಂದ ಸೋರೆಕಾಯಿ ಕಾಪಾಡುತ್ತದೆ.

ಸೋರೆಕಾಯಿಯ 5  ಪ್ರಯೋಜನಗಳನ್ನು ತಿಳಿಯಿರಿ: -ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ: ಸೋರೆಕಾಯಿ ತಿನ್ನುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

-ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಮಸ್ಯೆಯಲ್ಲೂ ನೀವು ಪ್ರಯೋಜನವನ್ನು ಪಡೆಯಬಹುದು. ನಿತ್ಯ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿದರೆ ಕೂದಲು ಬೆಳೆಯುವುದರ ಜೊತೆಗೆ ಅದು ಬಿಳಿಯಾಗುವುದನ್ನು ತಡೆಯಬಹುದು ಎಂದು ಹೇಳಲಾಗುತ್ತದೆ.

ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ: ಸೋರೆಕಾಯಿ ತೂಕವನ್ನು ಕಡಿಮೆ ಮಾಡಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಬಾಟಲ್ ಸೋರೆಕಾಯಿಯಲ್ಲಿ ವಿಟಮಿನ್-ಸಿ, ಸೋಡಿಯಂ, ಫೈಬರ್ ಮತ್ತು ಕಬ್ಬಿಣದ ಸಮೃದ್ಧವಾಗಿದೆ. ಇದರ ಸೇವನೆಯಿಂದ ನಿಮ್ಮ ತೂಕವನ್ನು ಆರೋಗ್ಯಕವಾಗಿ ಕಡಿಮೆ ಮಾಡಬಹುದು.

-ಮೂಳೆಗಳು ಸಹ ಬಲವಾಗಿರುತ್ತವೆ: ಸೋರೆಕಾಯಿಯನ್ನು ತಿನ್ನುವುದು ಮೂಳೆಗಳನ್ನು ಬಲಪಡಿಸುತ್ತದೆ. ಏಕೆಂದರೆ ಅದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳು ಕಂಡುಬರುತ್ತವೆ, ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ.

-ಒತ್ತಡವೂ ಕಡಿಮೆ : ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಹೆಚ್ಚಿನ ಜನರು ಒತ್ತಡದಲ್ಲಿ ಬದುಕುತ್ತಾರೆ. ಇದು ಅನೇಕ ರೋಗಗಳಿಗೆ ಆಹ್ವಾನ ನೀಡಿದಂತೆ ಎಂದರೂ ತಪ್ಪಾಗಲಾರದು. ಆದರೆ, ಸೋರೆಕಾಯಿ ಸೇವನೆಯಿಂದ ಒತ್ತಡವೂ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.

ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯರ ಸಲಹೆ ಪಡೆಯಿರಿ.

ಜೀವನಶೈಲಿ ಹಾಗೂ ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು