Ajwain Leaf Bajji : ಆರೋಗ್ಯಕ್ಕೆ ಹಿತ ದೊಡ್ಡ ಪತ್ರೆ ಎಲೆಯ ಬಜ್ಜಿ, ರೆಸಿಪಿಯ ವಿಧಾನ ಇಲ್ಲಿದೆ

ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಹೀಗಾಗಿ ಮನೆಯ ಸುತ್ತಮುತ್ತಲಿನಲ್ಲಿರುವ ಔಷಧೀಯ ಸಸ್ಯಗಳನ್ನು ಅಡುಗೆಗೆ ಬಳಸಲಾಗುತ್ತದೆ. ಆ ಸಾಲಿಗೆ ಎಲ್ಲರಿಗೂ ಚಿರಪರಿಚಿತವಾಗಿರುವ ದೊಡ್ಡ ಪತ್ರೆ ಎಲೆ ಕೂಡ ಸೇರಿದೆ. ಮನೆಯಲ್ಲಿ ಈ ಕೆಲವು ಐಟಂಗಳಿದ್ದರೆ ಸಾಕು, ರುಚಿಕರವಾದ ದೊಡ್ಡ ಪತ್ರೆಯ ಬಜ್ಜಿ ಮಾಡಿ ಸವಿದರೆ ಆರೋಗ್ಯಕ್ಕೂ ಹಿತಕರವಾಗಿದೆ. ಹಾಗಾದ್ರೆ ದೊಡ್ಡ ಪತ್ರೆ ಎಲೆಯ ಬಜ್ಜಿ ರೆಸಿಪಿಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Ajwain Leaf Bajji : ಆರೋಗ್ಯಕ್ಕೆ ಹಿತ ದೊಡ್ಡ ಪತ್ರೆ ಎಲೆಯ ಬಜ್ಜಿ, ರೆಸಿಪಿಯ ವಿಧಾನ ಇಲ್ಲಿದೆ
ದೊಡ್ಡ ಪತ್ರೆಯ ಬಜ್ಜಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 04, 2024 | 2:52 PM

ಮಳೆಗಾಲದಲ್ಲಿ ತುಂಬಾ ಶೀತದ ವಾತಾವರಣವಿರುವ ಕಾರಣ ಅನಾರೋಗ್ಯಕ್ಕೆ ಸಮಸ್ಯೆಗಳು ಎದುರಾಗುವುದೇ ಹೆಚ್ಚು.ಈ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಹಿತ್ತಲಿನಲ್ಲಿಯೇ ಸಿಗುವ ಈ ದೊಡ್ಡ ಪತ್ರೆ ಎಲೆಯೇ ಅತ್ಯುತ್ತಮ ಮನೆ ಮದ್ದಾಗಿದೆ. ಈ ದೊಡ್ಡಪತ್ರೆ ಗಿಡಗಳನ್ನು ಮಲೆನಾಡಿನಲ್ಲಿ ಹೆಚ್ಚಾಗಿ ಕಾಣ ಸಿಗುತ್ತವೆ. ವಿಟಮಿನ್ ಸಿ ಮತ್ತು ವಿಟಮಿನ್ ಎ ಪೋಷಕಾಂಶವು ಹೇರಳವಾಗಿದ್ದು, ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ರೋಗವನ್ನು ದೂರ ಮಾಡುತ್ತವೆ. ಈ ಎಲೆಯಿಂದ ಗೊಜ್ಜು, ಚಟ್ನಿ, ತಂಬುಳಿ ಸೇರಿದಂತೆ ಬಗೆ ಬಗೆಯ ಅಡುಗೆಯನ್ನು ತಯಾರಿಸುತ್ತಾರೆ. ಮಳೆಗಾಲದಲ್ಲಿ ಜಾಸ್ತಿ ಮಾಡಲ್ಪಡುವ ದೊಡ್ಡ ಪತ್ರೆ ಎಲೆಯ ಬಜ್ಜಿಗೆ ಫಿದಾ ಆಗದವರೇ ಇಲ್ಲ. ಈ ಎಲೆಯ ಬಜ್ಜಿಯು ರುಚಿಕರವಾಗಿದ್ದು ಊಟದ ಜೊತೆಗೆ ತಿನ್ನಬಹುದು. ಇಲ್ಲವಾದರೆ ಸಂಜೆಯ ಟೀ ಕಾಫಿ ಜೊತೆಗೆ ಸವಿಯಬಹುದು.

ದೊಡ್ಡ ಪತ್ರೆ ಬಜ್ಜಿ ಮಾಡಲು ಬೇಕಾಗುವ ಸಾಮಗ್ರಿಗಳು

* ದೊಡ್ಡಪತ್ರೆ ಎಲೆ

* 1 ಕಪ್ ಕಡಲೆಹಿಟ್ಟು

* ಅರ್ಧ ಚಮಚ ಓಂಕಾಳು

* ಒಂದೆರಡು ಚಮಚ ಖಾರದಪುಡಿ

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಮಳೆಗಾಲದಲ್ಲಿ ಗಂಜಿ ಜತೆ ಕೆಸುವಿನೆಲೆ ಚಟ್ನಿ ಸೂಪರ್​​, ಅಮ್ಮನ ಕೈರುಚಿ ನೆನಪಿಗೆ ಬರುವುದು ಖಂಡಿತ

ದೊಡ್ಡ ಪತ್ರೆ ಎಲೆಯ ಬಜ್ಜಿ ಮಾಡುವ ವಿಧಾನ

* ಮೊದಲಿಗೆ ಒಂದು ಪಾತ್ರೆಯಲ್ಲಿ ಕಡಲೆಹಿಟ್ಟು ತೆಗೆದುಕೊಂಡು ಅದಕ್ಕೆ ಓಂಕಾಳು, ಖಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ನೀರು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

* ಆ ಬಳಿಕ ಸ್ಟವ್ ಮೇಲೆ ಬಾಣಲೆಯಿಟ್ಟು, ಎಣ್ಣೆ ಬಿಸಿಯಾಗುತ್ತಿದ್ದಂತೆ ಕಲಸಿಟ್ಟ ಹಿಟ್ಟಿನಲ್ಲಿ ದೊಡ್ಡಪತ್ರೆ ಎಲೆಗಳನ್ನು ಒಂದೊಂದಾಗಿ ಮುಳುಗಿಸಿ ಎಣ್ಣೆಯಲ್ಲಿ ಮಧ್ಯಮ ಉರಿಯಲ್ಲಿ ಕರಿಯಿರಿ.

* ಕಂದು ಬಣ್ಣಕ್ಕೆ ತಿರುಗುತ್ತಿದ್ದಂತೆ ಎಣ್ಣೆಯಿಂದ ತೆಗೆದರೆ ರುಚಿಕರವಾದ ದೊಡ್ಡಪತ್ರೆ ಎಲೆಯ ಬಜ್ಜಿಯು ಸವಿಯಲು ಸಿದ್ಧವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Thu, 4 July 24

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ